ಉಡುಪಿ: ಕರಾವಳಿ ಕರ್ನಾಟಕದ ಮೀನುಗಾರರ ಮೇಲೆ ಅನ್ಯರಾಜ್ಯದ ಮೀನುಗಾರರು ಮಾಡುತ್ತಿರುವ ಹಲ್ಲೆಯನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಿಸಿದ್ದಾರೆ.
ಕನ್ಯಾಕುಮಾರಿಯಿಂದ ನೇರ ಸುಮಾರು 50 ನಾಟಿಕಲ್ ಮೈಲು ದೂರದಲ್ಲಿ ಫೆ.8ರಂದು ಕರ್ನಾಟಕದ ಆಳ ಸಮುದ್ರ ದೋಣಿಗಳು ಮೀನುಗಾರಿಕೆ ಮಾಡುತ್ತಿರುವಾಗ ಅನ್ಯ ರಾಜ್ಯದ ಬೋಟುಗಳು ಕರ್ನಾಟಕದ ಬೋಟುಗಳನ್ನು ಸುತ್ತುವರಿದು ಸೀಸ, ಕಲ್ಲು, ಮರದ ತುಂಡುಗಳಿಂದ ಜಖಂಗೊಳಿಸಿ, ರಾಜ್ಯದ ಮೀನುಗಾರರ ಮೇಲೆ ಹಲ್ಲೆ ಮಾಡಿ, ಬೋಟಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನುಗಳನ್ನು ದೋಚಿಕೊಂಡು ಹೋಗಿದ್ದಾರೆ. ಈಗಾಗಲೇ ಆಳ ಸಮುದ್ರ ಮೀನುಗಾರರ ಸಮಿತಿಗಳು ಹಾಗೂ ಸಂಘಗಳು ಈ ಅಮಾನವೀಯ ಕೃತ್ಯವನ್ನು ಉಗ್ರವಾಗಿ ಖಂಡಿಸಿವೆ. ಸಂಬಂಧಪಟ್ಟ ಇಲಾಖೆ ಹಾಗೂ ಸಚಿವರಿಗೂ ಮನವಿ ಮಾಡಿ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಕರ್ನಾಟಕದ ಮೀನುಗಾರರಿಗೆ ಆಗಿರುವ ಮಾನಸಿಕ ಕಿರುಕುಳಕ್ಕೆ ಪರಿಹಾರ ಹಾಗೂ ಆರ್ಥಿಕ ನಷ್ಟವನ್ನು ಭರಿಸುವಂತೆ ಮತ್ತು ಮುಂದಿನ ದಿನಗಳಲ್ಲಿ ಕರ್ನಾಟಕದ ಕರಾವಳಿ ಮೀನುಗಾರರಿಗೆ ಸೂಕ್ತ ಭದ್ರತೆ ಒದಗಿಸಿ, ನ್ಯಾಯಯುತವಾಗಿ ಮೀನುಗಾರಿಕೆಗೆ ಅವಕಾಶ ಮಾಡಿಕೊಡುವಂತೆ ಮುಖ್ಯಮಂತ್ರಿಯವರಲ್ಲಿ ಪ್ರಮೋದ್ ಮಧ್ವರಾಜ್ ಮನವಿ ಮಾಡಿದ್ದಾರೆ.
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…
Council Election Fight: 222 ಶಾಸಕರಿಂದ ಮತದಾನ; ಸಂಜೆ 5 ಗಂಟೆಗೆ ಫಲಿತಾಂಶ Council Election Fight: ಸಾಕಷ್ಟು ಕುತೂಹಲ…
ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು ಬೆಂಗಳೂರು : ರಾಜಧಾನಿಯ ಉತ್ತರ ತಾಲೂಕಿನ…
ಮಂಗಳೂರು : ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು :…
ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು.. ಆಗಸ್ಟ್ನಲ್ಲಿ ವಂದೇ ಭಾರತ್, ಕಾವೇರಿ ಎಕ್ಸ್ಪ್ರೆಸ್ ಬಂದ್ ಬೆಂಗಳೂರು: ರೈಲ್ವೆ…