ಉಡುಪಿ: ಸುಗಮ ಸಂಚಾರದ ದೃಷ್ಟಿಯಿಂದ ಉಡುಪಿಯ ಕರಾವಳಿ ಜಂಕ್ಷನ್ ನಿಂದ ಮಲ್ಪೆ ವರೆಗಿನ ರಸ್ತೆಯ ಹೊಂಡಗಳನ್ನು ಮುಚ್ಚಲು ಸೂಚಿಸಲಾಗಿದ್ದು, ತಕ್ಷಣದಲ್ಲಿ ಈ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಶಾಸಕ ಕೆ ರಘುಪತಿ ಭಟ್ ಅವರು ಹೇಳಿದ್ದಾರೆ
ತೀರ್ಥಹಳ್ಳಿ – ಮಲ್ಪೆ ರಾಷ್ಟ್ರೀಯ ಹೆದ್ದಾರಿ – 169 ಎ ಇದರ ಹೆಬ್ರಿಯಿಂದ ಮಲ್ಪೆ ವರಿಗಿನ ರಸ್ತೆ ಅಭಿವೃದ್ಧಿಗೆ ಈಗಾಗಲೇ ರೂ. 320.00 ಕೋಟಿ ಅನುದಾನ ಮಂಜೂರಾಗಿ ಟೆಂಡರ್ ಪ್ರಕ್ರಿಯೆ ಮುಗಿದು ನ್ಯಾಷನಲ್ ತೀರ್ಥಹಳ್ಳಿ ಜೆವಿ ಇವರಿಗೆ ಕಾಮಗಾರಿ ಕೈಗೊಳ್ಳಲು ಕಾರ್ಯಾದೇಶ ನೀಡಲಾಗಿದೆ. ಇದರಲ್ಲಿ ಕರಾವಳಿ ಜಂಕ್ಷನ್ ನಿಂದ ಮಲ್ಪೆ ವರೆಗಿನ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಭೂಸ್ವಾಧೀನ ಸೇರಿದಂತೆ ರಸ್ತೆ ಅಭಿವೃದ್ಧಿಗೆ ರೂ 80.00 ಕೋಟಿ ಮಂಜೂರಾಗಿದ್ದು, ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ಕೂಡಲೇ ಕಾಮಗಾರಿ ಆರಂಭಗೊಳ್ಳಲಿದೆ. ಅಲ್ಲಿಯವರೆಗೆ ಸುಗಮ ಸಂಚಾರಕ್ಕಾಗಿ ರಸ್ತೆಯ ಹೊಂಡಗಳನ್ನು ಮುಚ್ಚಿ ತಾತ್ಕಾಲಿಕ ಪರಿಹಾರ ಕಾಮಗಾರಿಯನ್ನು ಸದರಿ ಸಂಸ್ಥೆಯೇ ನಡೆಸುತ್ತದೆ. ಯಾರೂ ಗೊಂದಲಕ್ಕೆ ಒಳಗಾಗಬಾರದು ಎಂದು ಮಾಧ್ಯಮ ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.
ಮಂಗಳೂರು: ಹಲವು ಪಿಎಫ್ಐ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು – Vishwnews24
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…