ಉಡುಪಿ: ಸುಗಮ ಸಂಚಾರದ ದೃಷ್ಟಿಯಿಂದ ಉಡುಪಿಯ ಕರಾವಳಿ ಜಂಕ್ಷನ್ ನಿಂದ ಮಲ್ಪೆ ವರೆಗಿನ ರಸ್ತೆಯ ಹೊಂಡಗಳನ್ನು ಮುಚ್ಚಲು ಸೂಚಿಸಲಾಗಿದ್ದು, ತಕ್ಷಣದಲ್ಲಿ ಈ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಶಾಸಕ ಕೆ ರಘುಪತಿ ಭಟ್ ಅವರು ಹೇಳಿದ್ದಾರೆ
ತೀರ್ಥಹಳ್ಳಿ – ಮಲ್ಪೆ ರಾಷ್ಟ್ರೀಯ ಹೆದ್ದಾರಿ – 169 ಎ ಇದರ ಹೆಬ್ರಿಯಿಂದ ಮಲ್ಪೆ ವರಿಗಿನ ರಸ್ತೆ ಅಭಿವೃದ್ಧಿಗೆ ಈಗಾಗಲೇ ರೂ. 320.00 ಕೋಟಿ ಅನುದಾನ ಮಂಜೂರಾಗಿ ಟೆಂಡರ್ ಪ್ರಕ್ರಿಯೆ ಮುಗಿದು ನ್ಯಾಷನಲ್ ತೀರ್ಥಹಳ್ಳಿ ಜೆವಿ ಇವರಿಗೆ ಕಾಮಗಾರಿ ಕೈಗೊಳ್ಳಲು ಕಾರ್ಯಾದೇಶ ನೀಡಲಾಗಿದೆ. ಇದರಲ್ಲಿ ಕರಾವಳಿ ಜಂಕ್ಷನ್ ನಿಂದ ಮಲ್ಪೆ ವರೆಗಿನ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಭೂಸ್ವಾಧೀನ ಸೇರಿದಂತೆ ರಸ್ತೆ ಅಭಿವೃದ್ಧಿಗೆ ರೂ 80.00 ಕೋಟಿ ಮಂಜೂರಾಗಿದ್ದು, ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ಕೂಡಲೇ ಕಾಮಗಾರಿ ಆರಂಭಗೊಳ್ಳಲಿದೆ. ಅಲ್ಲಿಯವರೆಗೆ ಸುಗಮ ಸಂಚಾರಕ್ಕಾಗಿ ರಸ್ತೆಯ ಹೊಂಡಗಳನ್ನು ಮುಚ್ಚಿ ತಾತ್ಕಾಲಿಕ ಪರಿಹಾರ ಕಾಮಗಾರಿಯನ್ನು ಸದರಿ ಸಂಸ್ಥೆಯೇ ನಡೆಸುತ್ತದೆ. ಯಾರೂ ಗೊಂದಲಕ್ಕೆ ಒಳಗಾಗಬಾರದು ಎಂದು ಮಾಧ್ಯಮ ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.
ಮಂಗಳೂರು: ಹಲವು ಪಿಎಫ್ಐ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು – Vishwnews24
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…