Featured

ಉಡುಪಿ: ಕರಾವಳಿ ಜನತೆಯ ಮೇಲೆ ಡಿ ಕೆ ಶಿ ತೋರಿರುವ ವಿಶೇಷ ಕಾಳಜಿ  ಶ್ಲಾಘನೀಯ : ರಮೇಶ್ ಕಾಂಚನ್ – vishwanews24

ಉಡುಪಿ: ಕರಾವಳಿ ಜನತೆಯ ಮೇಲೆ ಡಿ ಕೆ ಶಿ ತೋರಿರುವ ವಿಶೇಷ ಕಾಳಜಿ  ಶ್ಲಾಘನೀಯ : ರಮೇಶ್ ಕಾಂಚನ್

ಉಡುಪಿ: ಕರಾವಳಿಯ ಅಭಿವೃದ್ಧಿಗೆ ಪ್ರತ್ಯೇಕ ಪ್ರವಾಸ ನೀತಿಯನ್ನು ರೂಪಿಸುವ ಚಿಂತನೆ ಹಾಗೂ ತುಳುನಾಡಿನ ಆಚರಣೆಗಳಾದ ದೈವ ಕೋಲ, ನೇಮೋತ್ಸವ, ಯಕ್ಷಗಾನಗಳನ್ನು ನಡೆಸಲು ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕರಾವಳಿ ಜನತೆಯ ಮೇಲೆ ತೋರಿರುವ ವಿಶೇಷ ಕಾಳಜಿಯನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಕಾಂಚನ್ ಶ್ಲಾಘಿಸಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಳೆದ ಭಾನುವಾರದಂದು ಉಡುಪಿ ಜಿಲ್ಲೆಗೆ ಆಗಮಿಸಿದ ಸಂದರ್ಭದಲ್ಲಿ ಕರಾವಳಿಯಲ್ಲಿ ನಡೆಯುವ ದೈವ ಕೋಲ, ನೇಮೋತ್ಸವ,ಯಕ್ಷಗಾನ ಹಾಗೂ ಕೋಳಿ ಅಂಕದ ವಿಚಾರದಲ್ಲಿ ಜಿಲ್ಲಾಡಳಿತದ ಕಠಿಣ ನಿಯಮದಿಂದ ಸಮಸ್ಯೆ ಉಂಟಾಗುತ್ತಿರುವ ಕುರಿತು ಗಮನ ಸೆಳೆಯಲಾಗಿತ್ತು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಅಂದು ನೀಡಿದ್ದರು. ಅದರಂತೆ ಮಂಗಳವಾರ ವಿಧಾನಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಿರುವುದು ಅವರ ಜನಪರ ಕಾಳಜಿಯ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ.

ರಾಜ್ಯದಲ್ಲಿಯೇ ಅತಿ ಹೆಚ್ಚು ಶೈಕ್ಷಣಿಕ ಸಂಸ್ಥೆಗಳು, ಆಸ್ಪತ್ರೆಗಳು, ಪ್ರವಾಸಿ ತಾಣಗಳು, ಉದ್ದಿಮೆ ಹಾಗೂ ಧಾರ್ಮಿಕ ಕೇಂದ್ರಗಳು ರಾಜ್ಯ ಕರಾವಳಿಯ ದ.ಕ ಹಾಗೂ ಉಡುಪಿ ಭಾಗದಲ್ಲಿ ಇದ್ದು. ಬಹುದೊಡ್ಡ ಆರ್ಥಿಕ ಕೇಂದ್ರವಾಗಿಯೂ ಬೆಳೆಯುವ ನಗರಗಳಲ್ಲಿ ಮುಂಚೂಣಿ ಸ್ಥಾನದಲ್ಲಿದೆ, ಆದರೆ ಇತ್ತೀಚಿನ ದಿನಗಳಲ್ಲಿ ಕರಾವಳಿಗೆ ವಿದೇಶಗಳಿಂದ ಮತ್ತು ಹೊರ ರಾಜ್ಯಗಳಿಂದ ಬರುತ್ತಿರುವ ವಿದ್ಯಾರ್ಥಿಗಳ ಹಾಗೂ ಉದ್ದಿಮೆದಾರರ ಮತ್ತು ಪ್ರವಾಸಿಗರ ಸಂಖ್ಯೆ ಕ್ಷೀಣಿಸುತ್ತಿದ್ದು ಮೂಲಭೂತ ಸೌಕರ್ಯ ಹಾಗೂ ಭದ್ರತೆಯ ಕಾರಣದಿಂದ ಕರಾವಳಿ ಅಭಿವೃದ್ಧಿ ಕುಂಠಿತಗೊಳ್ಳುತ್ತಿದ್ದು ಇದರ ಕುರಿತು ಕರಾವಳಿ ಭಾಗದ ಶಾಸಕರು ಸೂಕ್ತವಾಗಿ ಗಮನಿಸಿ, ಒಳ್ಳೆಯ ನಿರ್ಧಾರವನ್ನು ಮಾಡಬೇಕು ಎಂದು ಸೂಚಿಸಿ ಕರಾವಳಿಯ ಅಭಿವೃದ್ಧಿಗೆ ಪ್ರತ್ಯೇಕ ಸಭೆ ನಡೆಸುವ ಭರವಸೆಯನ್ನು ಕೂಡ ನೀಡಿದ್ದಾರೆ. ಇದರೊಂದಿಗೆ ಕರಾವಳಿ ಜಿಲ್ಲೆಗಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿಯನ್ನು ಕೂಡ ರೂಪಿಸುವ ಚಿಂತನೆ ನಡೆಸಿದ್ದಾರೆ. ಈ ಮೂಲಕ ಕರಾವಳಿಯ ಅಭಿವೃದ್ಧಿಗೆ ಉತ್ತಮ ಚಿಂತನೆ ಮಾಡುತ್ತಿರುವ ರಾಜ್ಯದ ಉಪ ಮುಖ್ಯಮಂತ್ರಿಗಳ ನಡೆ ಕರಾವಳಿ ಜನತೆಯ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ರಮೇಶ್ ಕಾಂಚನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ: ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ – vishwanews24

ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…

10 hours ago

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ – vishwanews24

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…

11 hours ago

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು – vishwanews24

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…

12 hours ago

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ : ಕಾಂಗ್ರೆಸ್ ಟ್ವೀಟ್ – vishwanews24

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…

14 hours ago

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ – vishwanews24

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌…

14 hours ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

14 hours ago