Featured

ಉಡುಪಿ: ಕರಾವಳಿ ಜನತೆಯ ಮೇಲೆ ಡಿ ಕೆ ಶಿ ತೋರಿರುವ ವಿಶೇಷ ಕಾಳಜಿ  ಶ್ಲಾಘನೀಯ : ರಮೇಶ್ ಕಾಂಚನ್ – vishwanews24

ಉಡುಪಿ: ಕರಾವಳಿ ಜನತೆಯ ಮೇಲೆ ಡಿ ಕೆ ಶಿ ತೋರಿರುವ ವಿಶೇಷ ಕಾಳಜಿ  ಶ್ಲಾಘನೀಯ : ರಮೇಶ್ ಕಾಂಚನ್

ಉಡುಪಿ: ಕರಾವಳಿಯ ಅಭಿವೃದ್ಧಿಗೆ ಪ್ರತ್ಯೇಕ ಪ್ರವಾಸ ನೀತಿಯನ್ನು ರೂಪಿಸುವ ಚಿಂತನೆ ಹಾಗೂ ತುಳುನಾಡಿನ ಆಚರಣೆಗಳಾದ ದೈವ ಕೋಲ, ನೇಮೋತ್ಸವ, ಯಕ್ಷಗಾನಗಳನ್ನು ನಡೆಸಲು ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕರಾವಳಿ ಜನತೆಯ ಮೇಲೆ ತೋರಿರುವ ವಿಶೇಷ ಕಾಳಜಿಯನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಕಾಂಚನ್ ಶ್ಲಾಘಿಸಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಳೆದ ಭಾನುವಾರದಂದು ಉಡುಪಿ ಜಿಲ್ಲೆಗೆ ಆಗಮಿಸಿದ ಸಂದರ್ಭದಲ್ಲಿ ಕರಾವಳಿಯಲ್ಲಿ ನಡೆಯುವ ದೈವ ಕೋಲ, ನೇಮೋತ್ಸವ,ಯಕ್ಷಗಾನ ಹಾಗೂ ಕೋಳಿ ಅಂಕದ ವಿಚಾರದಲ್ಲಿ ಜಿಲ್ಲಾಡಳಿತದ ಕಠಿಣ ನಿಯಮದಿಂದ ಸಮಸ್ಯೆ ಉಂಟಾಗುತ್ತಿರುವ ಕುರಿತು ಗಮನ ಸೆಳೆಯಲಾಗಿತ್ತು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಅಂದು ನೀಡಿದ್ದರು. ಅದರಂತೆ ಮಂಗಳವಾರ ವಿಧಾನಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಿರುವುದು ಅವರ ಜನಪರ ಕಾಳಜಿಯ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ.

ರಾಜ್ಯದಲ್ಲಿಯೇ ಅತಿ ಹೆಚ್ಚು ಶೈಕ್ಷಣಿಕ ಸಂಸ್ಥೆಗಳು, ಆಸ್ಪತ್ರೆಗಳು, ಪ್ರವಾಸಿ ತಾಣಗಳು, ಉದ್ದಿಮೆ ಹಾಗೂ ಧಾರ್ಮಿಕ ಕೇಂದ್ರಗಳು ರಾಜ್ಯ ಕರಾವಳಿಯ ದ.ಕ ಹಾಗೂ ಉಡುಪಿ ಭಾಗದಲ್ಲಿ ಇದ್ದು. ಬಹುದೊಡ್ಡ ಆರ್ಥಿಕ ಕೇಂದ್ರವಾಗಿಯೂ ಬೆಳೆಯುವ ನಗರಗಳಲ್ಲಿ ಮುಂಚೂಣಿ ಸ್ಥಾನದಲ್ಲಿದೆ, ಆದರೆ ಇತ್ತೀಚಿನ ದಿನಗಳಲ್ಲಿ ಕರಾವಳಿಗೆ ವಿದೇಶಗಳಿಂದ ಮತ್ತು ಹೊರ ರಾಜ್ಯಗಳಿಂದ ಬರುತ್ತಿರುವ ವಿದ್ಯಾರ್ಥಿಗಳ ಹಾಗೂ ಉದ್ದಿಮೆದಾರರ ಮತ್ತು ಪ್ರವಾಸಿಗರ ಸಂಖ್ಯೆ ಕ್ಷೀಣಿಸುತ್ತಿದ್ದು ಮೂಲಭೂತ ಸೌಕರ್ಯ ಹಾಗೂ ಭದ್ರತೆಯ ಕಾರಣದಿಂದ ಕರಾವಳಿ ಅಭಿವೃದ್ಧಿ ಕುಂಠಿತಗೊಳ್ಳುತ್ತಿದ್ದು ಇದರ ಕುರಿತು ಕರಾವಳಿ ಭಾಗದ ಶಾಸಕರು ಸೂಕ್ತವಾಗಿ ಗಮನಿಸಿ, ಒಳ್ಳೆಯ ನಿರ್ಧಾರವನ್ನು ಮಾಡಬೇಕು ಎಂದು ಸೂಚಿಸಿ ಕರಾವಳಿಯ ಅಭಿವೃದ್ಧಿಗೆ ಪ್ರತ್ಯೇಕ ಸಭೆ ನಡೆಸುವ ಭರವಸೆಯನ್ನು ಕೂಡ ನೀಡಿದ್ದಾರೆ. ಇದರೊಂದಿಗೆ ಕರಾವಳಿ ಜಿಲ್ಲೆಗಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿಯನ್ನು ಕೂಡ ರೂಪಿಸುವ ಚಿಂತನೆ ನಡೆಸಿದ್ದಾರೆ. ಈ ಮೂಲಕ ಕರಾವಳಿಯ ಅಭಿವೃದ್ಧಿಗೆ ಉತ್ತಮ ಚಿಂತನೆ ಮಾಡುತ್ತಿರುವ ರಾಜ್ಯದ ಉಪ ಮುಖ್ಯಮಂತ್ರಿಗಳ ನಡೆ ಕರಾವಳಿ ಜನತೆಯ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ರಮೇಶ್ ಕಾಂಚನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…

1 day ago

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ -vishwanews24

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…

2 days ago

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ -vishwanews24

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…

2 days ago

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…

2 days ago

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ -vishwanews24

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…

2 days ago

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ -Vishwanews24

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…

2 days ago