ಉಡುಪಿ: ಕರ್ಕಶ ಹಾರ್ನ್ – ಖಾಸಗಿ ಬಸ್ ಚಾಲಕನ ವಿರುದ್ದ ಪ್ರಕರಣ ದಾಖಲು – vishwanews24

Featured, ಉಡುಪಿ

ಉಡುಪಿ : ಕರ್ಕಶ ಹಾರ್ನ್ – ಖಾಸಗಿ ಬಸ್ ಚಾಲಕನ ವಿರುದ್ಧ ದೂರು ದಾಖಲು

ಉಡುಪಿ: ಕರ್ಕಶ ಹಾರ್ನ್ ಬಳಸಿದ ಖಾಸಗಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಉಡುಪಿ ಸಂಚಾರ ಪೊಲೀಸ್ ಠಾಣೆಯ ಉಪನೀರಿಕ್ಷಕರಾದ ಸುದರ್ಶನ್ ದೊಡ್ಡಮನಿ ಸ್ವಯಂ ಪ್ರೇರಿತ ದೂರು ದಾಖಲಿಸಿದ್ದು ಜೂನ್ 26 ರಂದು ರೌಂಡ್ಸ್ ಕರ್ತವ್ಯದಲ್ಲಿರುವಾಗ ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಲಯನ್ಸ್ ಸರ್ಕಲ್ ಬಳಿ ಖಾಸಗಿ ಬಸ್ ಚಾಲಕ ಅಲ್ಬರ್ಟ್ ಕ್ಯಾಸ್ತಲಿನೋ ಎಂಬಾತನು ಬಸ್ಸಿನ ಹಾರ್ನ್ ನಿಂದ ಕರ್ಕಶವಾದ ಶಬ್ಧವನ್ನು ಹೊರ ಹೊಮ್ಮಿಸಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ಬಿಎಸ್‌ವೈ ವಿರುದ್ಧ 750 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ – vishwanews24

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 118/2024 ಕಲಂ: 290 ಐಪಿಸಿ ಮತ್ತು 194ಎಫ್ ಐಎಂವಿ ಕಾಯ್ದೆ ಯಂತೆ ಪ್ರಕರಣ ದಾಖಲಾಗಿರುತ್ತದೆ.

Leave a Reply