Featured

ಉಡುಪಿ: ಕರ್ತವ್ಯಲೋಪ ಹಾಗೂ ಭ್ರಷ್ಟಾಚಾರ – 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ – vishwanews24

ಉಡುಪಿ: ಕರ್ತವ್ಯಲೋಪ ಹಾಗೂ ಭ್ರಷ್ಟಾಚಾರ – 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ

ಉಡುಪಿ: ಕರ್ತವ್ಯಲೋಪ ಹಾಗೂ ಭ್ರಷ್ಟಾಚಾರದ ವಿರುದ್ಧ ಜಿಲ್ಲಾ ಪೊಲೀಸ್‌ ಇಲಾಖೆ ಕಠಿನ ಕ್ರಮಕ್ಕೆ ಮುಂದಾಗಿದೆ. ಕರ್ತವ್ಯ ಲೋಪ ಆರೋಪದಲ್ಲಿ ಒಂದು ವರ್ಷದಲ್ಲಿ 4 ಮಂದಿ ಎಸ್‌ಐಗಳು ಸಹಿತ 80ಕ್ಕೂ ಅಧಿಕ ಸಿಬಂದಿ ಅಮಾನತುಗೊಂಡಿದ್ದಾರೆ. ಜಿಲ್ಲೆಯಲ್ಲಿ ಇಷ್ಟೊಂದು ಪೊಲೀಸರು ಅಮಾನತುಗೊಳ್ಳುತ್ತಿರುವುದು ಇದೇ ಮೊದಲು..

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಅಧಿಕಾರ ವಹಿಸಿ 1 ವರ್ಷ ಪೂರೈಸಿರುವ ಡಾ| ಅರುಣ್‌ ಕೆ. ಅವರು ಪೊಲೀಸರ ಕರ್ತವ್ಯದ ಬಗ್ಗೆ ಗಮನಹರಿಸುತ್ತಿದ್ದು, ಒಂದು ವರ್ಷದಿಂದಲೂ ವಿವಿಧ ಕಾರಣಗಳಿಂದ ಕರ್ತವ್ಯಲೋಪ ಮಾಡಿದವರಿಗೆ ಅಮಾನತು, ವರ್ಗಾವಣೆ ಶಿಕ್ಷೆ ನೀಡಲಾಗಿದೆ.

 

4 ಮಂದಿ ಎಸ್‌ಐಗಳು
ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯದಲ್ಲಿದ್ದ 4 ಮಂದಿ ಎಸ್‌ಐಗಳ ಪೈಕಿ ಕೆಲವರ ಅಮಾನತು ಆದೇಶ ಮುಗಿದಿದ್ದು, ಹಿಂದೆ ಸೇವೆ ಸಲ್ಲಿಸುತ್ತಿದ್ದ ಠಾಣೆ ಬಿಟ್ಟು ಬೇರೆ ಠಾಣೆಗಳಲ್ಲಿ ಕರ್ತವ್ಯ ಸಲ್ಲಿಸುತ್ತಿದ್ದಾರೆ. ಅಕ್ರಮ ಮರಳು ಸಾಗಾಟಗಾರರೊಂದಿಗೆ ಶಾಮೀಲಾಗಿರುವುದು, ಲಂಚ ಪಡೆದಿ ರುವುದು, ಮಾನವೀಯ ನೆಲೆಯಲ್ಲಿ ಸಹಾಯ ಮಾಡಲು ಹೋಗಿ ಕಾನೂನು ಸುಳಿಯಲ್ಲಿ ಸಿಲುಕಿರುವುದು ಮುಂತಾದವು ಎಸ್‌ಐಗಳ ಅಮಾನತಿಗೆ ಕಾರಣಗಳು.

ಶಿಕ್ಷೆ ಹೇಗೆ ?
ಪೊಲೀಸರ ವಿರುದ್ಧ ಭ್ರಷ್ಟಾಚಾರ ಸಹಿತ ವಿವಿಧ ಆರೋಪಗಳು ಬಂದಾಗ ಸಾರ್ವಜನಿಕರು ಎಸ್‌ಪಿ ಅವರ ಗಮನಕ್ಕೆ ತರಬಹುದು. ಎಸ್‌ಐಗಳ ಮೇಲೆ ಆರೋಪ ಬಂದಾಗ ಅವರು ಸರ್ಕಲ್‌ ಇನ್‌ಸ್ಪೆಕ್ಟರ್‌ಗೆ ಮಾಹಿತಿ ನೀಡಿ ವರದಿ ನೀಡುವಂತೆ ಸೂಚಿಸುತ್ತಿದ್ದು, ಆಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತದೆ. ಕಾನ್‌ಸ್ಟೆಬಲ್‌ಗ‌ಳ ವಿರುದ್ಧ ಆರೋಪ ಬಂದಾಗ ಎಸ್‌ಐಗಳು ಹಾಗೂ ಇನ್‌ಸ್ಪೆಕ್ಟರ್‌ಗಳ ವಿರುದ್ಧ ಆರೋಪ ಬಂದಲ್ಲಿ ಡಿವೈಎಸ್‌ಪಿ ವರದಿ ನೀಡಬೇಕು.

 

ಕೆಲವರಿಂದಾಗಿ ಜಿಲ್ಲೆಗೂ ಕೆಟ್ಟ ಹೆಸರು
ಕೆಲವು ಠಾಣೆಗಳ ವ್ಯಾಪ್ತಿಯಲ್ಲಿ ನಡೆಯುವ ಅನೈತಿಕ ಚಟುವಟಿಕೆ, ಮಟ್ಕಾ, ಜುಗಾರಿ, ವೇಶ್ಯಾವಾಟಿಕೆ, ಅಕ್ರಮ ಮರಳುಗಾರಿಕೆ ಪೊಲೀಸರಿಗೆ ತಿಳಿದಿದ್ದರೂ ಎಗ್ಗಿಲ್ಲದೆ ನಡೆಯುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ದಂಧೆಕೋರರಿಗೆ ಪೊಲೀಸರೇ ಸಹಕಾರ ನೀಡಿದರೆ ಜಿಲ್ಲೆಗೂ ಕಪ್ಪು ಚುಕ್ಕೆಯಾಗುತ್ತದೆ. ಈ ಕಾರಣಕ್ಕೆ ಮೂಲದಲ್ಲೇ ಈ ಸಮಸ್ಯೆಯನ್ನು ಹೋಗಲಾಡಿಸಲು ಅಮಾನತು ಮಾಡಲಾಗುತ್ತಿದೆ. ಸಣ್ಣಪುಟ್ಟ ತಪ್ಪಿನಿಂದಾಗಿ ಅಮಾನತುಗೊಂಡವರು ಪಶ್ಚಾತ್ತಾಪ ಪಟ್ಟದ್ದೂ ಇದೆ. ಇಂತಹ ಪ್ರಕರಣದ ನೈಜತೆ ಪರಿಶೀಲಿಸಿ ಅವರನ್ನು ಮತ್ತೆ ಕರ್ತವ್ಯಕ್ಕೆ ನಿಯೋಜಿಸಿದ್ದೂ ಇದೆ.

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

16 hours ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

17 hours ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

17 hours ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

17 hours ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

17 hours ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

18 hours ago