ಉಡುಪಿ: ಕರ್ತವ್ಯಲೋಪ ಹಾಗೂ ಭ್ರಷ್ಟಾಚಾರದ ವಿರುದ್ಧ ಜಿಲ್ಲಾ ಪೊಲೀಸ್ ಇಲಾಖೆ ಕಠಿನ ಕ್ರಮಕ್ಕೆ ಮುಂದಾಗಿದೆ. ಕರ್ತವ್ಯ ಲೋಪ ಆರೋಪದಲ್ಲಿ ಒಂದು ವರ್ಷದಲ್ಲಿ 4 ಮಂದಿ ಎಸ್ಐಗಳು ಸಹಿತ 80ಕ್ಕೂ ಅಧಿಕ ಸಿಬಂದಿ ಅಮಾನತುಗೊಂಡಿದ್ದಾರೆ. ಜಿಲ್ಲೆಯಲ್ಲಿ ಇಷ್ಟೊಂದು ಪೊಲೀಸರು ಅಮಾನತುಗೊಳ್ಳುತ್ತಿರುವುದು ಇದೇ ಮೊದಲು..
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ವಹಿಸಿ 1 ವರ್ಷ ಪೂರೈಸಿರುವ ಡಾ| ಅರುಣ್ ಕೆ. ಅವರು ಪೊಲೀಸರ ಕರ್ತವ್ಯದ ಬಗ್ಗೆ ಗಮನಹರಿಸುತ್ತಿದ್ದು, ಒಂದು ವರ್ಷದಿಂದಲೂ ವಿವಿಧ ಕಾರಣಗಳಿಂದ ಕರ್ತವ್ಯಲೋಪ ಮಾಡಿದವರಿಗೆ ಅಮಾನತು, ವರ್ಗಾವಣೆ ಶಿಕ್ಷೆ ನೀಡಲಾಗಿದೆ.
4 ಮಂದಿ ಎಸ್ಐಗಳು
ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯದಲ್ಲಿದ್ದ 4 ಮಂದಿ ಎಸ್ಐಗಳ ಪೈಕಿ ಕೆಲವರ ಅಮಾನತು ಆದೇಶ ಮುಗಿದಿದ್ದು, ಹಿಂದೆ ಸೇವೆ ಸಲ್ಲಿಸುತ್ತಿದ್ದ ಠಾಣೆ ಬಿಟ್ಟು ಬೇರೆ ಠಾಣೆಗಳಲ್ಲಿ ಕರ್ತವ್ಯ ಸಲ್ಲಿಸುತ್ತಿದ್ದಾರೆ. ಅಕ್ರಮ ಮರಳು ಸಾಗಾಟಗಾರರೊಂದಿಗೆ ಶಾಮೀಲಾಗಿರುವುದು, ಲಂಚ ಪಡೆದಿ ರುವುದು, ಮಾನವೀಯ ನೆಲೆಯಲ್ಲಿ ಸಹಾಯ ಮಾಡಲು ಹೋಗಿ ಕಾನೂನು ಸುಳಿಯಲ್ಲಿ ಸಿಲುಕಿರುವುದು ಮುಂತಾದವು ಎಸ್ಐಗಳ ಅಮಾನತಿಗೆ ಕಾರಣಗಳು.
ಶಿಕ್ಷೆ ಹೇಗೆ ?
ಪೊಲೀಸರ ವಿರುದ್ಧ ಭ್ರಷ್ಟಾಚಾರ ಸಹಿತ ವಿವಿಧ ಆರೋಪಗಳು ಬಂದಾಗ ಸಾರ್ವಜನಿಕರು ಎಸ್ಪಿ ಅವರ ಗಮನಕ್ಕೆ ತರಬಹುದು. ಎಸ್ಐಗಳ ಮೇಲೆ ಆರೋಪ ಬಂದಾಗ ಅವರು ಸರ್ಕಲ್ ಇನ್ಸ್ಪೆಕ್ಟರ್ಗೆ ಮಾಹಿತಿ ನೀಡಿ ವರದಿ ನೀಡುವಂತೆ ಸೂಚಿಸುತ್ತಿದ್ದು, ಆಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತದೆ. ಕಾನ್ಸ್ಟೆಬಲ್ಗಳ ವಿರುದ್ಧ ಆರೋಪ ಬಂದಾಗ ಎಸ್ಐಗಳು ಹಾಗೂ ಇನ್ಸ್ಪೆಕ್ಟರ್ಗಳ ವಿರುದ್ಧ ಆರೋಪ ಬಂದಲ್ಲಿ ಡಿವೈಎಸ್ಪಿ ವರದಿ ನೀಡಬೇಕು.
ಕೆಲವರಿಂದಾಗಿ ಜಿಲ್ಲೆಗೂ ಕೆಟ್ಟ ಹೆಸರು
ಕೆಲವು ಠಾಣೆಗಳ ವ್ಯಾಪ್ತಿಯಲ್ಲಿ ನಡೆಯುವ ಅನೈತಿಕ ಚಟುವಟಿಕೆ, ಮಟ್ಕಾ, ಜುಗಾರಿ, ವೇಶ್ಯಾವಾಟಿಕೆ, ಅಕ್ರಮ ಮರಳುಗಾರಿಕೆ ಪೊಲೀಸರಿಗೆ ತಿಳಿದಿದ್ದರೂ ಎಗ್ಗಿಲ್ಲದೆ ನಡೆಯುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ದಂಧೆಕೋರರಿಗೆ ಪೊಲೀಸರೇ ಸಹಕಾರ ನೀಡಿದರೆ ಜಿಲ್ಲೆಗೂ ಕಪ್ಪು ಚುಕ್ಕೆಯಾಗುತ್ತದೆ. ಈ ಕಾರಣಕ್ಕೆ ಮೂಲದಲ್ಲೇ ಈ ಸಮಸ್ಯೆಯನ್ನು ಹೋಗಲಾಡಿಸಲು ಅಮಾನತು ಮಾಡಲಾಗುತ್ತಿದೆ. ಸಣ್ಣಪುಟ್ಟ ತಪ್ಪಿನಿಂದಾಗಿ ಅಮಾನತುಗೊಂಡವರು ಪಶ್ಚಾತ್ತಾಪ ಪಟ್ಟದ್ದೂ ಇದೆ. ಇಂತಹ ಪ್ರಕರಣದ ನೈಜತೆ ಪರಿಶೀಲಿಸಿ ಅವರನ್ನು ಮತ್ತೆ ಕರ್ತವ್ಯಕ್ಕೆ ನಿಯೋಜಿಸಿದ್ದೂ ಇದೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…