Featured

ಉಡುಪಿ: ಕರ್ತವ್ಯಲೋಪ ಹಾಗೂ ಭ್ರಷ್ಟಾಚಾರ – 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ – vishwanews24

ಉಡುಪಿ: ಕರ್ತವ್ಯಲೋಪ ಹಾಗೂ ಭ್ರಷ್ಟಾಚಾರ – 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ

ಉಡುಪಿ: ಕರ್ತವ್ಯಲೋಪ ಹಾಗೂ ಭ್ರಷ್ಟಾಚಾರದ ವಿರುದ್ಧ ಜಿಲ್ಲಾ ಪೊಲೀಸ್‌ ಇಲಾಖೆ ಕಠಿನ ಕ್ರಮಕ್ಕೆ ಮುಂದಾಗಿದೆ. ಕರ್ತವ್ಯ ಲೋಪ ಆರೋಪದಲ್ಲಿ ಒಂದು ವರ್ಷದಲ್ಲಿ 4 ಮಂದಿ ಎಸ್‌ಐಗಳು ಸಹಿತ 80ಕ್ಕೂ ಅಧಿಕ ಸಿಬಂದಿ ಅಮಾನತುಗೊಂಡಿದ್ದಾರೆ. ಜಿಲ್ಲೆಯಲ್ಲಿ ಇಷ್ಟೊಂದು ಪೊಲೀಸರು ಅಮಾನತುಗೊಳ್ಳುತ್ತಿರುವುದು ಇದೇ ಮೊದಲು..

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಅಧಿಕಾರ ವಹಿಸಿ 1 ವರ್ಷ ಪೂರೈಸಿರುವ ಡಾ| ಅರುಣ್‌ ಕೆ. ಅವರು ಪೊಲೀಸರ ಕರ್ತವ್ಯದ ಬಗ್ಗೆ ಗಮನಹರಿಸುತ್ತಿದ್ದು, ಒಂದು ವರ್ಷದಿಂದಲೂ ವಿವಿಧ ಕಾರಣಗಳಿಂದ ಕರ್ತವ್ಯಲೋಪ ಮಾಡಿದವರಿಗೆ ಅಮಾನತು, ವರ್ಗಾವಣೆ ಶಿಕ್ಷೆ ನೀಡಲಾಗಿದೆ.

4 ಮಂದಿ ಎಸ್‌ಐಗಳು
ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯದಲ್ಲಿದ್ದ 4 ಮಂದಿ ಎಸ್‌ಐಗಳ ಪೈಕಿ ಕೆಲವರ ಅಮಾನತು ಆದೇಶ ಮುಗಿದಿದ್ದು, ಹಿಂದೆ ಸೇವೆ ಸಲ್ಲಿಸುತ್ತಿದ್ದ ಠಾಣೆ ಬಿಟ್ಟು ಬೇರೆ ಠಾಣೆಗಳಲ್ಲಿ ಕರ್ತವ್ಯ ಸಲ್ಲಿಸುತ್ತಿದ್ದಾರೆ. ಅಕ್ರಮ ಮರಳು ಸಾಗಾಟಗಾರರೊಂದಿಗೆ ಶಾಮೀಲಾಗಿರುವುದು, ಲಂಚ ಪಡೆದಿ ರುವುದು, ಮಾನವೀಯ ನೆಲೆಯಲ್ಲಿ ಸಹಾಯ ಮಾಡಲು ಹೋಗಿ ಕಾನೂನು ಸುಳಿಯಲ್ಲಿ ಸಿಲುಕಿರುವುದು ಮುಂತಾದವು ಎಸ್‌ಐಗಳ ಅಮಾನತಿಗೆ ಕಾರಣಗಳು.

ಶಿಕ್ಷೆ ಹೇಗೆ ?
ಪೊಲೀಸರ ವಿರುದ್ಧ ಭ್ರಷ್ಟಾಚಾರ ಸಹಿತ ವಿವಿಧ ಆರೋಪಗಳು ಬಂದಾಗ ಸಾರ್ವಜನಿಕರು ಎಸ್‌ಪಿ ಅವರ ಗಮನಕ್ಕೆ ತರಬಹುದು. ಎಸ್‌ಐಗಳ ಮೇಲೆ ಆರೋಪ ಬಂದಾಗ ಅವರು ಸರ್ಕಲ್‌ ಇನ್‌ಸ್ಪೆಕ್ಟರ್‌ಗೆ ಮಾಹಿತಿ ನೀಡಿ ವರದಿ ನೀಡುವಂತೆ ಸೂಚಿಸುತ್ತಿದ್ದು, ಆಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತದೆ. ಕಾನ್‌ಸ್ಟೆಬಲ್‌ಗ‌ಳ ವಿರುದ್ಧ ಆರೋಪ ಬಂದಾಗ ಎಸ್‌ಐಗಳು ಹಾಗೂ ಇನ್‌ಸ್ಪೆಕ್ಟರ್‌ಗಳ ವಿರುದ್ಧ ಆರೋಪ ಬಂದಲ್ಲಿ ಡಿವೈಎಸ್‌ಪಿ ವರದಿ ನೀಡಬೇಕು.

 

ಕೆಲವರಿಂದಾಗಿ ಜಿಲ್ಲೆಗೂ ಕೆಟ್ಟ ಹೆಸರು
ಕೆಲವು ಠಾಣೆಗಳ ವ್ಯಾಪ್ತಿಯಲ್ಲಿ ನಡೆಯುವ ಅನೈತಿಕ ಚಟುವಟಿಕೆ, ಮಟ್ಕಾ, ಜುಗಾರಿ, ವೇಶ್ಯಾವಾಟಿಕೆ, ಅಕ್ರಮ ಮರಳುಗಾರಿಕೆ ಪೊಲೀಸರಿಗೆ ತಿಳಿದಿದ್ದರೂ ಎಗ್ಗಿಲ್ಲದೆ ನಡೆಯುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ದಂಧೆಕೋರರಿಗೆ ಪೊಲೀಸರೇ ಸಹಕಾರ ನೀಡಿದರೆ ಜಿಲ್ಲೆಗೂ ಕಪ್ಪು ಚುಕ್ಕೆಯಾಗುತ್ತದೆ. ಈ ಕಾರಣಕ್ಕೆ ಮೂಲದಲ್ಲೇ ಈ ಸಮಸ್ಯೆಯನ್ನು ಹೋಗಲಾಡಿಸಲು ಅಮಾನತು ಮಾಡಲಾಗುತ್ತಿದೆ. ಸಣ್ಣಪುಟ್ಟ ತಪ್ಪಿನಿಂದಾಗಿ ಅಮಾನತುಗೊಂಡವರು ಪಶ್ಚಾತ್ತಾಪ ಪಟ್ಟದ್ದೂ ಇದೆ. ಇಂತಹ ಪ್ರಕರಣದ ನೈಜತೆ ಪರಿಶೀಲಿಸಿ ಅವರನ್ನು ಮತ್ತೆ ಕರ್ತವ್ಯಕ್ಕೆ ನಿಯೋಜಿಸಿದ್ದೂ ಇದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago