Featured

ಉಡುಪಿ: ಕರ್ತವ್ಯ ನಿರತ ರೈಲ್ವೇ ಸಿಬ್ಬಂದಿಗೆ ನಿಂದಿಸಿ, ಜೀವ ಬೆದರಿಕೆ ; ಆರೋಪಿ ವಶಕ್ಕೆ – VIshwanews24

ಉಡುಪಿ: ಕರ್ತವ್ಯ ನಿರತ ರೈಲ್ವೇ ಸಿಬ್ಬಂದಿಗೆ ನಿಂದಿಸಿ, ಜೀವ ಬೆದರಿಕೆ- ಆರೋಪಿ ವಶಕ್ಕೆ

ಉಡುಪಿ : ಮಂಗಳೂರು ಸೆಂಟ್ರಲ್ ನ ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್ ಜನರಲ್ ಕೋಚ್‌ನಲ್ಲಿ ಕರ್ತವ್ಯ ನಿರತ ರೈಲ್ವೇ ಪೊಲೀಸ್ ಸಿಬ್ಬಂದಿಯನ್ನು ನಿಂದಿಸಿ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬನನ್ನು ರೈಲ್ವೇ ಪೊಲೀಸರು ಬಂಧಿಸಿದ್ದಾರೆ.

ಸಮೀರ್ ಬಿವಾಜೆ ಶಿಂದು ಬಂಧಿತ ಆರೋಪಿಯಾಗಿದ್ದಾನೆ . ಕೊಂಕಣ ರೈಲ್ವೆಯಲ್ಲಿ ಕಾನ್‌ಸ್ಟೆಬಲ್ ಆಗಿ ಝೋನಾ ಪಿಂಟೋ ರೈಲ್ವೆ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್ ರೈಲಿನ ಜನರಲ್ ಕೋಚ್‌ನಲ್ಲಿ ಕೆಲವರು ಗಲಾಟೆ ಮಾಡುತ್ತಿರುವ ಬಗ್ಗೆ ಕರೆ ಬಂದಿತ್ತು. ಝೋನಾ ಮತ್ತು ಕಾನ್‌ಸ್ಟೆಬಲ್ ಶ್ರೀಕಾಂತ್ ಅವರೊಂದಿಗೆ ಕಂಪಾರ್ಟ್‌ಮೆಂಟ್ ಬಳಿ ಹೋದಾಗ, ಕರ್ತವ್ಯ ನಿರತ ಟಿಟಿಇ ಹಾಗೂ ಸಾರ್ವಜನಿಕರು, ಗಲಾಟೆ ಮಾಡುತ್ತಿದ್ದ ಸಮೀರ್‌ನನ್ನು ಹಿಡಿದುಕೊಂಡಿದ್ದರು.

ಸಮೀರ್ ಅವರು ಟಿಟಿಇ ನೀಡಿದ್ದ ಮೆಮೊವನ್ನು ಹರಿದು ಬಿಸಾಕಿ ಝೋನಾ ಪಿಂಟೋ ಮತ್ತು ಅವರ ಸಹೋದ್ಯೋಗಿ ಶ್ರೀಕಾಂತ್ ಅವರಿಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಸಮೀರ್‌ನನ್ನು ನಿಲ್ದಾಣದಲ್ಲಿರುವ ರೈಲ್ವೆ ನಿರೀಕ್ಷಕರ ಕಚೇರಿಗೆ ಕರೆದೊಯ್ದಾಗ, ಇನ್‌ಸ್ಪೆಕ್ಟರ್‌ಗೂ ಬೆದರಿಕೆ ಹಾಕಿದ್ದಾನೆ. ಕೂಡಲೇ ಆತನನ್ನು ವಶಕ್ಕೆ ಪಡೆದು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

47 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

56 minutes ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

1 hour ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

1 hour ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

1 hour ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

2 hours ago