ಉಡುಪಿ: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರಕಾರ ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತಿದ್ದು, ಕರ್ನಾಟಕದಲ್ಲೂ ಈ ಬಾರಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಸಹಕಾರಿ ಹಾಗೂ ಈಶಾನ್ಯ ರಾಜ್ಯ ಅಭಿವೃದ್ಧಿ ರಾಜ್ಯ ಖಾತೆ ಸಚಿವ ಬಿ.ಎಲ್. ವರ್ಮ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಂಗಳ ವಾರ ಅವರು ಮಾತನಾಡಿ, ಕೇಂದ್ರದಲ್ಲಿ ಬಿಜೆಪಿ ಸರಕಾರ ಆಡಳಿತಕ್ಕೆ ಬರುವ ಮೊದಲು ಕಾಂಗ್ರೆಸ್ ಲಕ್ಷಾಂತರ ಕೋಟಿ ರೂ.ಗಳನ್ನು ಲೂಟಿ ಮಾಡಿತ್ತು. ಪ್ರಧಾನಿ ಮೋದಿಯವರು ಭ್ರಷ್ಟಾಚಾರ ನಿಯಂತ್ರಣದ ಸವಾಲವನ್ನು ಸಮರ್ಥವಾಗಿ ಎದುರಿಸಿ ಉತ್ತಮ ಆಡಳಿತ ನೀಡುತ್ತಿದ್ದಾರೆ. ಕರ್ನಾಟಕಕ್ಕೂ ಹಲವು ಕೊಡುಗೆಗಳನ್ನು ನೀಡಿ ದ್ದಾರೆ ಎಂದರು.
ರಾಜ್ಯ ಬಿಜೆಪಿ ಸರ ಕಾರವು ಉಡುಪಿಗೂ ವಿಶೇಷ ಕೊಡುಗೆಗಳನ್ನು ನೀಡಿದ್ದು, ಪ್ರಗತಿಗಾಗಿ ಜಿಲ್ಲೆಯ ಐದು ಕ್ಷೇತ್ರ ಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಪೂರ್ಣ ಪ್ರಮಾಣದಲ್ಲಿ ಜಯ ಸಾಧಿಸುವರು ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ವಕ್ತಾರ ರಾಘವೇಂದ್ರ ಕಿಣಿ, ಸಹ ವಕ್ತಾರ ಪ್ರತಾಪ್ ಶೆಟ್ಟಿ ಚೇರ್ಕಾಡಿ ಮತ್ತಿತರರು ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…