ಉಡುಪಿ : ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿಗಳಿಗೆ ಮತ್ತು ಕಲಾವಿದರಿಗೆ ಕರ್ನಾಟಕ ಬ್ಯಾಂಕ್ ಪ್ರಾಯೋಜಕತ್ವದಲ್ಲಿ ಉಡುಪಿಯ ನಿಟ್ಟೂರು ಮತ್ತು ಬಡಾನಿಡಿಯೂರಿನಲ್ಲಿ ಒಟ್ಟು ೧೨ ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಎರಡು ಮನೆಗಳ ಉದ್ಘಾಟನೆಯನ್ನು ಕರ್ನಾಟಕ ಬ್ಯಾಂಕ್ನ ಆಡಳಿತ ನಿರ್ದೇಶಕರಾದ ಶ್ರೀ ಮಹಾಬಲೇಶ್ವರ ಎಂ.ಎಸ್ ನೆರವೇರಿಸಿದರು.
ನಿಟ್ಟೂರಿನಲ್ಲಿ ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿನಿ ಸ್ವಾತಿ (ಪ್ರಥಮ ಪಿ.ಯು.ಸಿ) ಮತ್ತು ಬಡಾನಿಡಿಯೂರಿನಲ್ಲಿ ಸೌಕೂರು ಮೇಳದ ಯಕ್ಷಗಾನ ಕಲಾವಿದ ಪ್ರವೀಣ್ ಗಾಣಿಗ ಮತ್ತು ಅವರ ಪುತ್ರಿಯರೂ, ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿನಿಯರೂ ಆದ ಪಲ್ಲವಿ (ದ್ವಿತೀಯ ಪಿ.ಯು.ಸಿ) ಮತ್ತು ಪ್ರಿಯಲಕ್ಷಿ (ಪ್ರಥಮ ಪಿ.ಯು.ಸಿ) ಇವರಿಗೆ ಸಂಸ್ಥೆ ನಿರ್ಮಿಸಿಕೊಟ್ಟಿದೆ.
ಈ ಎರಡೂ ಮನೆಗಳನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದ ಶ್ರೀ ಮಹಾಬಲೇಶ್ವರ ಎಂ.ಎಸ್ ಅವರು ಯಕ್ಷಗಾನ ಕಲಾರಂಗ ಸಮಾಜಮುಖಿಯಾಗಿ ಮಾಡುತ್ತಿರುವ ಕೆಲಸವನ್ನು ಶ್ಲಾಘಿಸಿದರು. ಹೃದಯ ಶ್ರೀಮಂತಿಕೆಯಿ0ದ ಕೂಡಿದ ಸಂಸ್ಥೆಯ ಕಾರ್ಯಕರ್ತರು ಸಮಾಜಕ್ಕೆ ಮಾದರಿಯಾಗಿದ್ದಾರೆ. ಕರ್ಣಾಟಕ ಬ್ಯಾಂಕ್ ಇಂತಹ ಕೆಲಸಗಳನ್ನು ನಿರಂತರ ಪ್ರೋತ್ಸಾಹಿಸುತ್ತಾ ಸರ್ವರ ಅಭ್ಯುದಯಕ್ಕೆ ಕಾರಣವಾಗುತ್ತಾ ಬಂದಿದೆ ಎಂದರು.
ಕರ್ನಾಟಕ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಛೇರಿಯ ಮುಖ್ಯಸ್ಥರಾದ ಶ್ರೀ ರಾಜಗೋಪಾಲ ಬಿ. ಮತ್ತು ಹಿರಿಯ ಉದ್ಯಮಿ ಶ್ರೀ ಯು. ವಿಶ್ವನಾಥ ಶೆಣೈ, ನಗರಸಭೆಯ ಸ್ಥಾಯಿಸಮಿತಿ ಅಧ್ಯಕ್ಷರಾದ ಶ್ರೀ ಬಾಲಕೃಷ್ಣ ಶೆಟ್ಟಿ, ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಫಲಾನುಭವಿ ಮನೆಗಳ ಬಂಧುಗಳು ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳೊಂದಿಗೆ ಕಾರ್ಯಕ್ರಮ ನಿರೂಪಿಸಿದರು. ಜತೆ ಕಾರ್ಯದರ್ಶಿ ಪ್ರೊ. ನಾರಾಯಣ ಎಂ. ಹೆಗಡೆ ಧನ್ಯವಾದ ಸಮರ್ಪಿಸಿದರು. ಇವು ಸಂಸ್ಥೆ ಫಲಾನುಭವಿಗಳಿಗೆ ದಾನಿಗಳ ನೆರವಿನಿಂದ ನಿರ್ಮಿಸಿಕೊಟ್ಟ ೨೫ ಹಾಗೂ ೨೬ನೇ ಮನೆಯಾಗಿವೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…