ಉಡುಪಿ: ಕರ್ನಾಟಕ ಲಲಿತಕಲಾ ಅಕಾಡೆಮಿಯ ವರ್ಣಶ್ರೀ ಪ್ರಶಸ್ತಿಗೆ ಉಡುಪಿಯ ಪುಸಿದ್ಧ ಛಾಯಾಗ್ರಾಹಕ ಫೋಕಸ್ ರಾಘು (ರಾಘವೇಂದ್ರ ಕೊಡಂಗಳ) ಆಯ್ಕೆಯಾಗಿದ್ದಾರೆ.
ಉಡುಪಿಯ ಕೊಡಂಗಳ ಎಂಬ ಪುಟ್ಟ ಹಳ್ಳಿಯಲ್ಲಿ ಹುಟ್ಟಿ, ಬೆಳೆದ ರಾಘವೇಂದ್ರ ಕೊಡಂಗಳ ಇಂದು ಫೋಕಸ್ ರಾಘು ಎಂಬ ಹೆಸರಿನಲ್ಲಿ ಪುಸಿದ್ಧರು. ಛಾಯಾಗ್ರಹಣ ಕ್ಷೇತ್ರದಲ್ಲಿ ಮುನ್ನೂರಕ್ಕೂ ಹೆಚ್ಚು ರಾಷ್ಟ್ರ, ಅಂತರಾಷ್ಟ್ರೀಯ ಪ್ರಶಸ್ತಿ ಪಡೆದವರು. 25 ಕ್ಕೂ ಹೆಚ್ಚು ದೇಶಗಳ ಛಾಯಾಚಿತ್ರ ಸ್ಪರ್ಧೆಯಲ್ಲಿ ಬಹುಮಾನಗಳಿಸಿ ಫ್ರಾನ್ಸ್ ದೇಶ ಕೊಡಮಾಡುವ EFIAP ಮತ್ತು ಫೆಡರೇಶನ್ ಆಫ್ ಇಂಡಿಯನ್ ಫೋಟೋಗ್ರಫಿ ಕೊಡಮಾಡುವ EFIP ಡಿಸ್ಟಿಂಕ್ಷನ್ ಗಳಿಸಿರುತ್ತಾರೆ. ಇದು ಹಳ್ಳಿ ಯುವಕನ ಜಾಗತಿಕ ಮಟ್ಟದ ಸಾಧನೆ.
ಇದನ್ನೂ ಓದಿ:
ಮದುವೆ ಛಾಯಾಗ್ರಹಣದಲ್ಲಿ ವಿನೂತನ ಪುಯೋಗಗಳೊಂದಿಗೆ ಸೈ ಎನ್ನಿಸುವ ಫೋಕಸ್ ರಾಘು ಅತ್ಯದ್ಭುತ ಪ್ರಿವೆಡ್ಡಿಂಗ್ ಫೋಟೋ ಶೂಟ್ಗಳ ಮೂಲಕ ಎಲ್ಲರ ಮನೆಮಾತಾಗಿದ್ದಾರೆ. ಅದರ ಜೊತೆಗೆ ತನ್ನ ಹವ್ಯಾಸವಾಗಿ ರೂಢಿಸಿಕೊಂಡ ಪುವಾಸ, ಚಾರಣದಿಂದಾಗಿ ಅವರ ಫೋಟೋಗಳು ವಿಶ್ವವಿಖ್ಯಾತಿಗಳಿಸಿವೆ.
ರಾಘು ಅವರ ಸಾಧನೆಗಳನ್ನು ಗುರುತಿಸಿ ಕರ್ನಾಟಕ ರಾಜ್ಯಕ್ಕೆ Nikon Influencer ಆಗಿ ನೇಮಕ ಮಾಡಿ ಹಳ್ಳಿ ಪ್ರತಿಭೆಯ ಪರಿಶ್ರಮಕ್ಕೆ ದೊಡ್ಡ ಗೌರವವನ್ನು ನೀಡಿದೆ. ಗ್ರಾಮೀಣ ಬದುಕನ್ನು ಎತ್ತಿ ಹಿಡಿಯುವ ನೆರಳು ಬೆಳಕಿನ ಪಿಕ್ಟೋರಿಯಲ್ ಛಾಯಾಚಿತ್ರ ಫೋಕಸ್ ರಾಘು ಅವರ ಪ್ರೀತಿಯ ಕ್ಷೇತ್ರ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…