Featured

ಉಡುಪಿ : ಕಲೆಯ ಮೇಲೆ ನಿರಂತರ ದಾಳಿ,  ಒಡೆಯುವ ಹುನ್ನಾರ : ಸಮಗ್ರ ಯಕ್ಷಗಾನ ಸಮ್ಮೇಳನದಲ್ಲಿ ರೋಹಿತ್ ಚಕ್ರತೀರ್ಥ – Vishwanews24

ಉಡುಪಿ:ಕಲೆಯ ಮೇಲೆ ನಿರಂತರ ದಾಳಿ,  ಒಡೆಯುವ ಹುನ್ನಾರ : ಸಮಗ್ರ ಯಕ್ಷಗಾನ ಸಮ್ಮೇಳನದಲ್ಲಿ ರೋಹಿತ್ ಚಕ್ರತೀರ್ಥ

ಉಡುಪಿ: ”ಯಕ್ಷಗಾನ ಕಲೆ ಸಮಾಜವನ್ನು ಒಟ್ಟುಗೂಡಿಸುವ ಅಂಟು. ಇದು ವಿಭಜಿಸುವುದಿಲ್ಲ. ಡಾ.ಶಿವರಾಮ ಕಾರಂತರ ಹೆಸರು ಉಡುಪಿಯಲ್ಲಿ ಸೇರಿಕೊಂಡಿದೆ, ಇದೊಂದು ದೊಡ್ಡ ವೃಕ್ಷ. ನಾನು ಕೇವಲ ವಸಂತಕಾಲದಲ್ಲಿ ಅರಳಿ ನಿಲ್ಲುವ ಚಿಗುರು” ಎಂದು ಲೇಖಕ ರೋಹಿತ್ ಚಕ್ರತೀರ್ಥ ಸಮಗ್ರ ಯಕ್ಷಗಾನ ಸಮ್ಮೇಳನದ ವೇದಿಕೆಯಲ್ಲಿ ದಿಕ್ಸೂಚಿ ಭಾಷಣ ಮಾಡಿದರು.

”ಕಲೆಯ ಮೇಲೆ ನಿರಂತರ ದಾಳಿ ನಡೆದಿದೆ, ಒಡೆಯುವ ಹುನ್ನಾರ ನಡೆಯುತ್ತಿದೆ. ಭಾರತ ಮಾತೆಗೆ ಮೂವರು ಮಕ್ಕಳು ಮೊದಲನೆಯದ್ದು ವೇದ ವೇದಾಂತ, ಎರಡನೆಯದು ಮಹಾಕಾವ್ಯಗಳು ಮತ್ತು ಮೂರನೆಯದ್ದು ಪುರಾಣ ಪ್ರಪಂಚ. ದೊಡ್ಡ ರೀತಿಯಲ್ಲಿ ಈ ದೇಶದಲ್ಲಿ ಪುರಾಣವನ್ನು ಸುಳ್ಳು ಮಾಡಲು ದೊಡ್ಡ ಮಟ್ಟದ ಹುನ್ನಾರ ನಡೆಯುತ್ತಿದೆ. ಪುರಾಣವನ್ನು ಶುದ್ಧ ರೀತಿಯಲ್ಲಿ ಉಳಿಸಿಕೊಂಡು ಬಂದ ಒಂದು ಮಾಧ್ಯಮವಿದ್ದರೆ ಅದು ಯಕ್ಷಗಾನ. ಪುರಾಣ ಉಳಿಸಿಕೊಳ್ಳಬೇಕಾದರೆ ಯಕ್ಷಗಾನದಲ್ಲಿ ಪೌರಾಣಿಕ ಕಥೆಗಳು ಉಳಿದುಕೊಳ್ಳಬೇಕಾಗಿದೆ” ಎಂದರು.

”ಬುದ್ಧಿಜೀವಿಗಳು ಪುರಾಣವನ್ನು ಸುಳ್ಳು ಎಂದು ನಿರೂಪಿಸಲು ಭಾರಿ ಪ್ರಯತ್ನ ನಡೆಸುತ್ತಿದ್ದಾರೆ . ಆದರೆ ಅವರಿಗೆ ಅದು ಸಾಧ್ಯವಿಲ್ಲ.ದೊಡ್ಡ ವ್ಯವಸ್ಥೆಯ ಜೊತೆಗೆ ಇದ್ದೇನೆ, ಅದನ್ನು ಪ್ರಶ್ನಿಸಬೇಕಾದರೆ ಎಷ್ಟು ವರ್ಷದಿಂದ ಅದು ನಡೆದು ಬಂದಿದೆ ಎನ್ನುವ ಎಚ್ಚರಿಕೆ ಬೇಕು” ಎಂದರು.

”ಈಗ ಪ್ರಸಂಗ ಬರೆಯಲು ಪುರಾಣ ಬೇಕಾಗಿಲ್ಲ, ಕಥೆ ಕಾದಂಬರಿ, ಸಿನಿಮಾ ನೋಡಿ ಆಧುನಿಕ ಜೀವನ ಎಂಕ, ನಾಣಿ ಶೀನ ಏನು ಬೇಕಾದರೂ ಬರೆಯಬಹುದು. ವಿದ್ವಾಂಸರು ಇದನ್ನು ಬೆಂಬಲಿಸಿದಾಗ ದೊಡ್ಡ ಪರಿಣಾಮ ಆಗುತ್ತದೆ” ಎಂದು ಬೇಸರ ಹೊರ ಹಾಕಿದರು.

”ಯಕ್ಷಗಾನವನ್ನು ಅಬ್ರಾಹ್ಮಣರು ನಡೆಸುತ್ತಿದ್ದರು ಎನ್ನುವ ಮಾತು ಇದೆ, ಒಳ್ಳೆಯ ಕಥೆ, ಸಾಹಿತ್ಯಕ್ಕಾಗಿ ಬಳಿಕ ಬ್ರಾಹ್ಮಣರು ಸೇರಿಕೊಂಡರು ಅನ್ನುತ್ತಾರೆ, ಇನ್ನೊಂದು ಕಡೆ ಇದು ಬ್ರಾಹ್ಮಣರ ಕಲೆ ಆನಂತರ ಇತರರು ಸೇರಿಕೊಂಡರು ಎನ್ನುತ್ತಾರೆ. ಆದರೆ ಶ್ರೇಣೀಕೃತ ವ್ಯವಸ್ಥೆ ಹುಟ್ಟುವ ಮೊದಲೇ ಯಕ್ಷಗಾನ ಹುಟ್ಟಿದ್ದು, ಇದು ಯಾವುದೇ ಜಾತಿ ಪಂಥಕ್ಕೆ ಸೇರಿದ್ದಲ್ಲ” ಎಂದರು.

”ಯಕ್ಷಗಾನ ಸಮ್ಮೇಳನ ಹಲವು ದಶಕಗಳ ಬೇಡಿಕೆ. ಅದು ಇವತ್ತು ಸಂಪದವಾಗಿದೆ . ಈ ವರ್ಷ ತೆಗೆದುಕೊಂಡ ನಿರ್ಣಯ ಮುಂದಿನ ವರ್ಷ ತೆಗೆದುಕೊಳ್ಳಬಾರದು ಎಂದು ಸಲಹೆ ನೀಡಿದರು. ಅಕಾಡೆಮಿ ಮಾಡಲು ಸಾಧ್ಯವಿರುವಂತಹ, ಕಲಾವಿದರು, ಜನ ಸಾಮಾನ್ಯರು ತೆಗೆದುಕೊಳ್ಳುವ ನಿರ್ಣಯಗಳನ್ನೇ ತೆಗೆದುಕೊಳ್ಳಬೇಕು” ಎಂದರು.

”ಸಮ್ಮೇಳನ ಯಕ್ಷಗಾನಕ್ಕೆ ಬಹಳ ದೊಡ್ಡ ಕೊಡುಗೆ ಕೊಟ್ಟ ನಾಲ್ಕೈದು ಜಿಲ್ಲೆಗಳಿಗೆ ಸೀಮಿತವಾಗಿರದೆ ಮುಂದಿನ ವರ್ಷಗಳಲ್ಲಿ ಬೇರೆ ಬೇರೆ ಜಿಲ್ಲೆಗಳಲ್ಲಿ ನಡೆಯಬೇಕು. ಯಕ್ಷಗಾನಕ್ಕೆ ಸಂಬಂಧ ಪಡದ ಜಿಲ್ಲೆಗಳಲ್ಲೂ ಸಮ್ಮೇಳನಗಳನ್ನು ಆಯೋಜಿಸಬೇಕು” ಎಂದು ಒತ್ತಾಯಿಸಿದರು.

”ನಮ್ಮ ಯಕ್ಷಗಾನ ಗಾನ ವಾಚನ, ತರ್ಕ, ಬೌದ್ಧಿಕ ಸಾಮರ್ಥ್ಯ ಬೆಳೆಸುತ್ತದೆ. ಕಲಾವಿದನಿಗೆ ಕನಿಷ್ಠ ನೂರು ಪಾತ್ರಗಳಾದರೂ ನಿರ್ವಹಿಸುವ ಸಾಮರ್ಥ್ಯ ನೀಡುತ್ತದೆ. ಛಂದಸ್ಸಿನ ರುಚಿ ತಾಳ, ಮಟ್ಟುವಿನ ರುಚಿ ಇದೆ, ಆಹಾರ್ಯವಿದೆ. ಕಲಾ ರಸಿಕತೆಗೆ ಎಲ್ಲಾ ಅವಕಾಶವಿರುವ ಯಕ್ಷಗಾನ ಪಠ್ಯ ಕ್ರಮದಲ್ಲಿ ಯಾಕೆ ಸೇರಿಲ್ಲ” ಎಂದು ಪ್ರಶ್ನಿಸಿದರು.

”ಸಮಗ್ರ ಶಿಕ್ಷಣ ಕೊಡುವ ಯಕ್ಷಗಾನವನ್ನು ಯಾಕೆ ಶಾಲೆಗಳಲ್ಲಿ ಕಲಿಸಬಾರದು . ರಾಜ್ಯದ ನಾಲ್ಕನೇ ಒಂದು ಶಾಲೆಗಳಲ್ಲಾದರೂ ಯಕ್ಷಗಾನ ಕಲಿಸಬೇಕು” ಎಂದರು.

”ಹಳೆಗನ್ನಡ ಕಾವ್ಯ ಪ್ರಸಂಗದ ಪದ್ಯಗಳನ್ನು ಓದಿಸಬೇಕು ಎನ್ನುವ ಆಸೆ ಇತ್ತು. ಹೊಸ ಪಠ್ಯ ಪುಸ್ತಕ ರಚನೆ ಮಾಡುವಾಗ ನಾಲ್ಕಾದರೂ ಯಕ್ಷಗಾನ ಪದ್ಯಗಳನ್ನು ಕೊಡಬೇಕು. ಯಕ್ಷಗಾನದ ಸಾಹಿತ್ಯ ಮಕ್ಕಳ ಪಠ್ಯ ಪುಸ್ತಕದಲ್ಲಿ ಇಲ್ಲದೇ ಇರುವುದು ನಮಗೆ ಅವಮಾನ” ಎಂದರು.

”1972 ರಲ್ಲಿ ಕೃಷ್ಣನ ನಾಡಿನಲ್ಲಿ ಭಾಗವತರನ್ನು ಸೇರಿಸಿ ಭಾಗವತರ ಅನೇಕ ಮಜಲುಗಳನ್ನು ತಿಳಿಯಲು ಒಂದು ಶಿಬಿರವನ್ನು ನಡೆಸಿಕೊಟ್ಟರು. ಅವರು ಮಾಡಿದ ಶಿಬಿರದಿಂದ ಸಿಕ್ಕಿದ ಪ್ರತಿಭೆ ಕಾಳಿಂಗ ನಾವಡರು.ಆ ಕಾಲದಲ್ಲಿ ಕಾರಂತರಿಗೇ ಯಕ್ಷಗಾನವೇನು ಗೊತ್ತಿದೆ ಅಂದವರಿದ್ದರು” ಎಂದರು.

”ನಾನು ಇಲ್ಲಿ ವಿಮರ್ಶೆಗೆ ಇಳಿಯುತ್ತಿಲ್ಲ.ನಮ್ಮ ವಿರೋಧಿಗಳೂ ಕೂಡ ದೊಡ್ಡ ಪಟ್ಟಿ ನೀಡಿದ್ದಾರೆ. ನಾನು ವಿಮರ್ಶಿಸಿದರೆ ಸೂರ್ಯನಿಗೆ ಸೊಡರು ತೊಡಿಸಿದ ಹಾಗೆ, ಕಾಳಿದಾಸನಿಗೆ ಕಾಗುಣಿತ ಕಲಿಸಿದ ಹಾಗೆ ಆಗುತ್ತದೆ” ಎಂದರು.

”ಯಕ್ಷಗಾನ ಶಬ್ದ ಜಕ್ಕ ಅನ್ನುವ ಶಬ್ದದಿಂದ ಬಂದಿದೆ ಅನ್ನುತ್ತಾರೆ, ಗಂಧರ್ವಗಾನ ದಿಂದ ಯಕ್ಷಗಾನ ಬಂದಿದೆ ಅನ್ನುತ್ತಾರೆ.ಈ ಕಲೆಯಲ್ಲಿ ಬಹಳ ವಿಶೇಷ ಧ್ಯಾನಸ್ಥರಾಗಿ ಚಿಂತನೆ ಮಾಡುವ ಅವಕಾಶವಿದೆ. ಇದು ಆಶು ಪ್ರತಿಭೆ ತೋರಿಸುವ ಕಲೆ ಅಲ್ಲ.ಯಕ್ಷಗಾನ ಹೊಸ ರೀತಿಯ ಪ್ರಯೋಗವನ್ನು ತೋರಿಸುವ ಲಿಖಿತವೂ ಅಲ್ಲದ ಆಶುವೂ ಅಲ್ಲದ ವಿಶಿಷ್ಟ ಕಲೆ. ಪ್ರಸಂಗ ಅದೇ ಆದರೂ ರಂಗದಲ್ಲಿ ಇವತ್ತಿನ ರಾಮ ನಾಳಿನ ರಾಮನಾಗಿರುವುದಿಲ್ಲ. ರಂಗದಲ್ಲಿ ಅರ್ಥಗಾರಿಕೆಯಲ್ಲಿ ಭಿನ್ನತೆ ಇದೆ” ಎಂದರು.

”ನಾಗರಿಕತೆ ಹುಟ್ಟುತ್ತಿರುವ ಕಾಲದಲ್ಲೇ ಯಕ್ಷಗಾನ ಹುಟ್ಟಿಕೊಂಡಿದೆ. ಇದು ಶುದ್ಧವಾದ ಭಾರತೀಯ ಕಲೆ, ಪ್ರಪಂಚದಲ್ಲಿ ಅನೇಕ ನಾಗರಿಕತೆ ನಶಿಸಿ ಹೋದವು. ನಾವು ಹೆಚ್ಚಿನದವುಗಳನ್ನು ಮ್ಯೂಸಿಯಂ ಗಳಲ್ಲಿ ನೋಡುತ್ತೇವೆ. ಭಾರತದಲ್ಲಿ ಸಾಂಸ್ಕೃತಿಕವಾಗಿ ಜೀವಂತವಾಗಿರುವ ಭಾಷೆ ಯಕ್ಷಗಾನ” ಎಂದರು.

 

Vishwa News 24

Recent Posts

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

2 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

4 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

4 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

4 hours ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

5 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

5 hours ago