ಉಡುಪಿ : ನಗರದ ಕಲ್ಸಂಕ ಜಂಕ್ಷನ್ ಬಳಿ ಇರುವ ಶೀರೂರು ಮಠಕ್ಕೆ ಸಂಬಂಧಿಸಿದ ಪಾಳು ಬಿದ್ದ ಕಟ್ಟಡದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಅನುಮನಾಸ್ಪದವಾಗಿ ಪತ್ತೆಯಾಗಿದೆ.
ಇದು ಸುರತ್ಕಲ್ ಮೂಲದ 32 ವರ್ಷದ ವ್ಯಕ್ತಿಯ ಮೃತದೇಹ ಎನ್ನಲಾಗುತ್ತಿದೆ. ಕಟ್ಟಡದಿಂದ ಬಿದ್ದು ಮೃತಪಟ್ಟಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ವ್ಯಕ್ತಿ ಆಯ ತಪ್ಪಿ ಬಿದ್ದು ಮೃತಪಟ್ಟಿರಬಹುದು ಅಥವಾ ಯಾರಾದರೂ ತಳ್ಳಿ ಕೊಲೆ ಮಾಡಿರಬಹುದೇ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಡಿವೈಎಸ್ಪಿ, ಇನ್ ಸ್ಟೆಕ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಅಜ್ಜರ ಕಾಡು ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಮೃತ ವ್ಯಕ್ತಿಯ ಪರಿಚಯಸ್ಥರು ಯಾರಾದರೂ ಇದ್ದಲ್ಲಿ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಬಹುದಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…