ಉಡುಪಿ: ನಗರದಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಲ್ಸಂಕ ಜಂಕ್ಷನ್ ನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಯಿಂದ ಸುಗಮ ಸಂಚಾರಕ್ಕೆ ಪರಿಹಾರ ರೂಪಿಸುವ ನಿಟ್ಟಿನಲ್ಲಿ ರಾಷ್ಟೀಯ ಹೆದ್ದಾರಿ ಇಲಾಖೆಯ ಮೂಲಕ ಫ್ಲೈ ಓವರ್ ನಿರ್ಮಾಣ ಮಾಡುವಂತೆ ಕೇಂದ್ರ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಯವರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಮುಖಾಂತರ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ ಸಲ್ಲಿಸಿದರು.
ಉಡುಪಿ ನಗರದ ಹೃದಯ ಭಾಗದಲ್ಲಿ ಸಾಗುವ ರಾಷ್ಟೀಯ ಹೆದ್ದಾರಿ 169 ಎ ನಲ್ಲಿ ಪ್ರಮುಖವಾಗಿರುವ ಕಲ್ಸಾಂಕ ಜಂಕ್ಷನ್ ಉಡುಪಿ ಶ್ರೀ ಕೃಷ್ಣ ಮಠ, ಮಣಿಪಾಲ, ಅಂಬಾಗಿಲು ಸಂಪರ್ಕಿಸುವ ಕೇಂದ್ರ ಭಾಗವಾಗಿರುವ ಕಾರಣ ವಾಹನ ದಟ್ಟಣೆಯಿಂದ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು, ರಜಾ ದಿನಗಳಲ್ಲಿ ಈ ಸಮಸ್ಯೆ ಇನ್ನಷ್ಟು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮೂಲಕ ಫ್ಲೈ ಓವರ್ ನಿರ್ಮಾಣಕ್ಕೆ ಮುಂದಿನ ಸಭೆಯಲ್ಲಿ ನಗರಸಭೆ ಮೂಲಕವೂ ಪ್ರಸ್ತಾವನೆ ಸಲ್ಲಿಸಲಾಗುವುದು ಸಂಸದರು ಈ ಬಗ್ಗೆ ಕೇಂದ್ರ ಸಚಿವರಿಗೆ ಶಿಫಾರಸ್ಸು ಮಾಡುವಂತೆ ಸಂಸದರಿಗೆ ತಿಳಿಸಿದರು.
ಮನವಿಗೆ ಸ್ಪಂದಿಸಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕಲ್ಸಂಕ ಜಂಕ್ಷನ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ರೊಂದಿಗೆ ಕೇಂದ್ರ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿ ಶೀಘ್ರ ಫ್ಲೈ ಓವರ್ ನಿರ್ಮಾಣಕ್ಕೆ ಮಂಜೂರಾತಿ ನೀಡುವಂತೆ ಮನವಿ ಮಾಡುವುದಾಗಿ ತಿಳಿಸಿದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…