Featured

ಉಡುಪಿ : ಕಲ್ಸಂಕ ಫ್ಲೈ ಓವರ್ ನಿರ್ಮಾಣಕ್ಕೆ ನಿತಿನ್ ಗಡ್ಕರಿಗೆ ಮನವಿ ನೀಡಿದ ಶಾಸಕ‌ ಯಶ್ಫಾಲ್ ಸುವರ್ಣ – vishwanews24

ಉಡುಪಿ : ಕಲ್ಸಂಕದಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ಕೋಟ ಶ್ರೀನಿವಾಸ್ ಪೂಜಾರಿ ಮುಖಾಂತರ ಗಡ್ಕರಿಗೆ ಮನವಿ ನೀಡಿದ ಶಾಸಕ‌ ಯಶ್ಫಾಲ್ ಸುವರ್ಣ

ಉಡುಪಿ: ನಗರದಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಲ್ಸಂಕ ಜಂಕ್ಷನ್ ನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಯಿಂದ ಸುಗಮ ಸಂಚಾರಕ್ಕೆ ಪರಿಹಾರ ರೂಪಿಸುವ ನಿಟ್ಟಿನಲ್ಲಿ ರಾಷ್ಟೀಯ ಹೆದ್ದಾರಿ ಇಲಾಖೆಯ ಮೂಲಕ ಫ್ಲೈ ಓವರ್ ನಿರ್ಮಾಣ ಮಾಡುವಂತೆ ಕೇಂದ್ರ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಯವರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಮುಖಾಂತರ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ ಸಲ್ಲಿಸಿದರು.

ಉಡುಪಿ ನಗರದ ಹೃದಯ ಭಾಗದಲ್ಲಿ ಸಾಗುವ ರಾಷ್ಟೀಯ ಹೆದ್ದಾರಿ 169 ಎ ನಲ್ಲಿ ಪ್ರಮುಖವಾಗಿರುವ ಕಲ್ಸಾಂಕ ಜಂಕ್ಷನ್ ಉಡುಪಿ ಶ್ರೀ ಕೃಷ್ಣ ಮಠ, ಮಣಿಪಾಲ, ಅಂಬಾಗಿಲು ಸಂಪರ್ಕಿಸುವ ಕೇಂದ್ರ ಭಾಗವಾಗಿರುವ ಕಾರಣ ವಾಹನ ದಟ್ಟಣೆಯಿಂದ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು, ರಜಾ ದಿನಗಳಲ್ಲಿ ಈ ಸಮಸ್ಯೆ ಇನ್ನಷ್ಟು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮೂಲಕ ಫ್ಲೈ ಓವರ್ ನಿರ್ಮಾಣಕ್ಕೆ ಮುಂದಿನ ಸಭೆಯಲ್ಲಿ ನಗರಸಭೆ ಮೂಲಕವೂ ಪ್ರಸ್ತಾವನೆ ಸಲ್ಲಿಸಲಾಗುವುದು ಸಂಸದರು ಈ ಬಗ್ಗೆ ಕೇಂದ್ರ ಸಚಿವರಿಗೆ ಶಿಫಾರಸ್ಸು ಮಾಡುವಂತೆ ಸಂಸದರಿಗೆ ತಿಳಿಸಿದರು.

ಮನವಿಗೆ ಸ್ಪಂದಿಸಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕಲ್ಸಂಕ ಜಂಕ್ಷನ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ರೊಂದಿಗೆ ಕೇಂದ್ರ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿ ಶೀಘ್ರ ಫ್ಲೈ ಓವರ್ ನಿರ್ಮಾಣಕ್ಕೆ ಮಂಜೂರಾತಿ ನೀಡುವಂತೆ ಮನವಿ ಮಾಡುವುದಾಗಿ ತಿಳಿಸಿದರು.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

7 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

7 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

7 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

7 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

8 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

8 hours ago