Featured

ಉಡುಪಿ: ಕಳಪೆ ಸೆಟ್ ಆಫ್ ಬಾಕ್ಸ್, ಉಚಿತ ಕೇಬಲ್ ಚಾನೆಲ್ ಹೆಸರಲ್ಲಿ ಗ್ರಾಹಕರಿಗೆ ವಂಚನೆ: ಎಚ್ಚರ ವಹಿಸಲು ಸೂಚನೆ – vishwanews24

ಉಡುಪಿ: ಕಳಪೆ ಸೆಟ್ ಆಫ್ ಬಾಕ್ಸ್, ಉಚಿತ ಕೇಬಲ್ ಚಾನೆಲ್ ಹೆಸರಲ್ಲಿ ಗ್ರಾಹಕರಿಗೆ ವಂಚನೆ: ಎಚ್ಚರ ವಹಿಸಲು ಸೂಚನೆ

ಉಡುಪಿ: ಇತ್ತೀಚೆಗೆ ಕೇಬಲ್ ಅಪರೇಟರುನವರು 2 ವರ್ಷಕೊಮ್ಮೆ ತಮ್ಮ ಸೆಟ್ ಆಫ್ ಬಾಕ್ಸ್ ಗಳನ್ನು ಬದಲಾವಣೆ ಮಾಡುತಿದ್ದು ಇದರಿಂದಾಗಿ ಗ್ರಾಹಕರಿಗೆ ಬಹಳ ತೊಂದರೆ ಆಗಿದೆ. ಕೆಲವೊಂದು ಕೇಬಲ್ ಅಪರೇಟರ್ ಮುಖ್ಯಸ್ಥರ ಸ್ವಂತ ಲಾಭಕ್ಕಾಗಿ ಇತರ ಕೇಬಲ್ ಅಪರೇಟರ್ ಗಳ ಮೂಲಕ ಹೊಸ ಸೆಟ್ ಟಾಪ್ ಬಾಕ್ಸ್ ಅಳವಡಿಸಲು ಒತ್ತಾಯಿಸುತಿದ್ದಾರೆ.

ಹೊಸ ಹೊಸ ಕಂಪೆನಿಗಳು ಕೇಬಲ್ ಉದ್ಯಮಕ್ಕೆ ಕಾಲಿಟ್ಟಿದ್ದು ಇವರುಗಳು ಗ್ರಾಹಕರಿಗೆ ಹೊಸ ಪ್ಲಾನ್ ಗಳನ್ನು ನೀಡಿದರೆ ಅದನ್ನು ಗ್ರಾಹಕರಿಗೆ ಅಪರೇಟರ್ ಗಳು ನೀಡದೆ ವಂಚಿಸುತಿದ್ದಾರೆ. ಇದೀಗ ಉಡುಪಿಗೆ ಕಾಲಿಟ್ಟಿರುವ ಗುಜರಾತ್ ಮೂಲದ ಸಂಸ್ಥೆ ಗ್ರಾಹಕರಿಗೆ ಉಚಿತ ಸೆಟ್ ಟಾಪ್ ಬಾಕ್ಸ್ ಜೊತೆಗೆ ಮೂರು ತಿಂಗಳ ಮಾಸಿಕ ದರವನ್ನು ಉಚಿತವಾಗಿ ನೀಡುತಿರುವ ಬಗ್ಗೆ ಮಾಹಿತಿ ದೊರಕಿದೆ. ಆದರೆ ಇದಾವುದು ಸೌಲಭ್ಯ ಗ್ರಾಹಕರಿಗೆ ನೀಡದೆ ಅಪರೇಟರುಗಳು ವಂಚಿಸುತಿದ್ದಾರೆ.

ಪದೇ ಪದೇ ಬದಲಾಯಿಸುವ ಈ ಪ್ರಕ್ರಿಯೆ ಹೆಚ್ಚು ಸಮಸ್ಯೆ ಆಗುತಿರುವುದು ಹಿರಿಯರಿಗೆ ಮತ್ತು ಗ್ರಾಮಾಂತರ ಜನರಿಗೆ ಅನಾನುಕೂಲ ಆಗಿದೆ. ಚಾನೆಲುಗಳ ನಂಬರ ವ್ಯತ್ಯಾಸ ಇರುವುದರಿಂದ ಮತ್ತು ಚಾನೆಲುಗಳ ಪ್ರಸಾರ ಹಿಂದಿಗಿಂತಲೂ ಕಳಪೆ ಆಗಿರುತ್ತದೆ. ಹೆಚ್ಚಿನ ಭಾಗದಲ್ಲಿ ಗ್ರಾಹಕರು ತಿರಸ್ಕರಿಸಿದರೂ ಒತ್ತಾಯ ಪೂರ್ವಕವಾಗಿ ಅಳವಡಿಸಿದ ಬಗ್ಗೆ ದೂರುಗಳು ಬರುತಿದೆ. ಗ್ರಾಹಕರು ತಮಗೆ ನೀಡಲಾದ ಮೂರು ತಿಂಗಳ ಉಚಿತ ಮಾಸಿಕ ದರದ ಸೌಲಭ್ಯ ನೀಡುವ ಬೇಡಿಕೆ ಕೇಳಿದಾಗ ಗ್ರಾಹಕರೊಂದಿಗೆ ಹಲವು ಅಪರೇಟರುಗಳು ಅನುಚಿತವಾಗಿ ವರ್ತಿಸುತಿದ್ದಾರೆ. ತಕ್ಷಣವೆ ಇದಕ್ಕೆ ಸಂಬಂಧ ಪಟ್ಟ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲು ಗ್ರಾಹಕರು ಒತ್ತಾಯಿಸುತಿದ್ದಾರೆ.

Vishwa News 24

Recent Posts

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

3 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

3 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

3 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

4 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

4 hours ago

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ – vishwanews24

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…

4 hours ago