ಉಡುಪಿ

ಉಡುಪಿ : ಕಳೆದುಹೋದ ಮೊಬೈಲ್ ನ ಬ್ಲಾಕ್ ಮಾಡೋದು ಹೇಗೆ ? ಈ ಕೆಳಕಂಡ ವಿಧಾನಗಳನ್ನು ಅನುಸರಿಸಿ – ಇಲ್ಲಿದೆ ಪೊಲೀಸ್ ಮಾಹಿತಿ  – Vishwanews24

ಉಡುಪಿ : ಕಳೆದುಹೋದ ಮೊಬೈಲ್ ನ ಬ್ಲಾಕ್ ಮಾಡೋದು ಹೇಗೆ ?

ಈ ಕೆಳಕಂಡ ವಿಧಾನಗಳನ್ನು ಅನುಸರಿಸಿ – ಇಲ್ಲಿದೆ ಪೊಲೀಸ್ ಮಾಹಿತಿ

ಉಡುಪಿ: ಮೊಬೈಲ್ ಕಳೆದರೆ ಬ್ಲಾಕ್ ಮಾಡುವುದು ಅತಿ ಮುಖ್ಯ! ಹೌದು ಇದು ನಿಮ್ಮ ಮಾಹಿತಿಗಳ ಸುರಕ್ಷತೆಗೆ ಅಷ್ಟೇ ಅಲ್ಲದೆ ಇತರ ಸೈಬರ್ ಕ್ರೈಂಗಳನ್ನೂ ತಡೆಯಬಹುದಾಗಿದೆ. ಹಾಗಿದ್ರೆ ಕಳೆದುಹೋದ ಮೊಬೈಲ್ ನ ಬ್ಲಾಕ್ ಮಾಡೋದು ಹೇಗೆ, ಪೊಲೀಸರು ಹೇಳುವುದೇನು? ಇಲ್ಲಿದೆ ವಿವರ.

ಇತ್ತೀಚಿನ ದಿನಗಳಲ್ಲಿ ಕಳುವಾದ, ಕಾಣೆಯಾದ, ಸುಲಿಗೆಯಾದ ಮೊಬೈಲ್ ಫೋನ್ಗಳು ಸೈಬರ್ ಅಪರಾಧ ನಾರ್ಕೋಟಿಕ್ಸ್ ಅಪರಾಧ ಸೇರಿದಂತೆ ಇತರೆ ಗಂಭೀರ ಅಪರಾಧಗಳಲ್ಲಿ ಬಳಕೆಯಾಗುತ್ತಿರುವುದು ಗಣನೀಯವಾಗಿ ಕಂಡುಬಂದಿರುತ್ತದೆ. ಇಂತಹ ಮೊಬೈಲ್ ಫೋನ್ಗಳ ದುರ್ಬಳಕೆಯನ್ನು ತಡೆಗಟ್ಟಲು ಕೇಂದ್ರ ಟೆಲಿಕಮ್ಯುನಿಕೇಶನ್ ಇಲಾಖೆಯಿಂದ ಬ್ಲಾಕ್ ಮಾಡುವ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಹಾಗೂ ಪೊಲೀಸ್ ಇಲಾಖೆಯಿಂದ ಕೂಡಾ ಈ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಾಗುತ್ತಿದೆ.

ಈ ಕೆಳಕಂಡ ವಿಧಾನಗಳನ್ನು ಅನುಸರಿಸುವುದರ ಮೂಲಕ ಕಳುವಾದ ಮೊಬೈಲ್ ಫೋನ್ಗಳನ್ನು ಬ್ಲಾಕ್ ಮಾಡಬಹುದಾಗಿದೆ.

ತಕ್ಷಣವೇ KSP E-Lost (ಕೆಎಸ್ಪಿ ಇ-ಲಾಸ್ಟ್) ಅಪ್ಲಿಕೇಶನ್ ನಲ್ಲಿ ದೂರನ್ನು ಸಲ್ಲಿಸಿ (ಡಿಜಿಟಲ್ ಇ ಅಕ್ನಾಲಜ್ಮೆಂಟ್) Digital E Acknowledgement ಪಡೆದುಕೊಳ್ಳಬೇಕು. ಅಥವಾ ಹತ್ತಿರದ ಪೊಲೀಸ್ ಠಾಣೆಗೆ ತೆರಳಿ ದೂರನ್ನು ಸಲ್ಲಿಸಿ ಸ್ವೀಕೃತಿಯನ್ನು ಪಡೆದುಕೊಳ್ಳುವುದು. ಸ್ವೀಕೃತಿಯ ಪ್ರತಿಯನ್ನು ತಮ್ಮ ಬಳಿ ಇಟ್ಟುಕೊಂಡಿರಬೇಕು.

ನೀವು ಕಳೆದುಕೊಂಡಿರುವ ಸಿಮ್ ಕಾರ್ಡ್ ಅನ್ನು ಸಂಬಂಧಪಟ್ಟ ಸರ್ವಿಸ್ ಪ್ರೊವೈಡರ್ ನಿಂದ ಮತ್ತೆ ಪಡೆದುಕೊಂಡು ಒ.ಟಿ.ಪಿ ಪಡೆಯಲು ಸದರಿ ಸಿಮ್ ಕಾರ್ಡನ್ನು ಚಾಲನೆಯಲ್ಲಿ ಇಟ್ಟು ಕೊಳ್ಳುವುದು CEIR PORTAL (ಸಿಇಐಆರ್ ಪೋರ್ಟಲ್) ನಲ್ಲಿ ಒ.ಟಿ.ಪಿ ಪಡೆಯಲು ಇದು ಅನುಕೂಲವಾಗುತ್ತದೆ.

ನಂತರ www.ceir.gov.in ವೆಬ್ ಸೈಟ್ಗೆ ಹೋಗಿ ತಮ್ಮ ಕಳುವಾದ/ಕಾಣೆಯಾದ/ಸುಲಿಗೆಯಾದ ಮೊಬೈಲ್ ಫೋನ್ ಗಳ ಮಾಹಿತಿಯನ್ನು ನಮೂದಿಸಬೇಕು.

ಸದರಿ ಮಾಹಿತಿ ನಮೂದಿಸಿದ 24 ಗಂಟೆಗಳಲ್ಲಿ ತಮ್ಮ ಮೊಬೈಲ್ ಫೋನ್ ಬ್ಲಾಕ್ ಆಗುತ್ತದೆ. ನಂತರ ಯಾರೂ ಕೂಡಾ ಆ ಮೊಬೈಲ್ ಅನ್ನು ದುರ್ಬಳಕೆ ಮಾಡಲು ಸಾದ್ಯವಿರುವುದಿಲ್ಲ.

ಕಳುವಾದ/ಕಾಣೆಯಾದ/ಸುಲಿಗೆಯಾದ ಮೊಬೈಲ್ ಫೋನ್ ಪತ್ತೆಯಾದರೆ ಈಗಾಗಲೇ ತಿಳಿಸಿರುವ ಸಿಇಐಆರ್ ಪೋರ್ಟಲ್ ( CEIR PORTAL) ನಲ್ಲಿ ಲಾಗಿನ್ ಆಗಿ ಅನ್ ಬ್ಲಾಕ್ ಮಾಡಿ ಉಪಯೋಗಿಸಬಹುದು.

ಹಾಗೆಯೇ ಸಾರ್ವಜನಿಕರು ಪೊಲೀಸ್ ಠಾಣೆಯನ್ನು ಸಂಪರ್ಕಿಸಿದರೆ CEIR PORTAL ಮೂಲಕ ಕಳುವಾದ/ಕಾಣೆಯಾದ ಫೋನ್ ಅನ್ನು ಬ್ಲಾಕ್ ಮಾಡಲಾಗುವುದು ಹಾಗೂ ಫೋನ್ ಪತ್ತೆಯಾದಲ್ಲಿ ಅನ್ಗ್ ಬ್ಲಾಕ್ ಮಾಡಲಾಗುವುದು.

Vishwa News 24

Recent Posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ – vishwanews24

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್‌ಎಸ್‌ಎಲ್‌ಸಿ…

4 hours ago

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ – vishwanews24

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…

5 hours ago

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ – vishwanews24

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…

1 day ago

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ – vishwanews24

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…

1 day ago

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ – vishwanews24

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ…

1 day ago

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ – vishwanews24

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ  ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…

1 day ago