ಉಡುಪಿ :ಮಲ್ಪೆ ಬಂದರು ಮತ್ತು ಸಮುದ್ರದಲ್ಲಿ ಅವಘಡಗಳು ಸಂಭವಿಸಿದಾಗ ಸದಾ ನೆರವಿಗೆ ಧಾವಿಸುವ ಈಶ್ವರ್ ಮಲ್ಪೆ ,ಈ ಬಾರಿ ಎರಡು ನಾಯಿಗಳನ್ನು ರಕ್ಷಣೆ ಮಾಡಿದ್ದಾರೆ.
ನೀವು ನಂಬಲಿಕ್ಕಿಲ್ಲ ,ಕಳೆದ ಒಂದು ವರ್ಷಕ್ಕೂ ಹೆಚ್ಚು ಸಮಯದಿಂದ ಈ ನಾಯಿಗಳು ಬಂದರಿನ ಧಕ್ಕೆಯೊಳಗೆ ಹೊರ ಬರಲಾಗದೆ ಅಕ್ಷರಶಃ ಬಂಧಿಯಾಗಿದ್ದವು.
ಎಲ್ಲ ಕಡೆ ನೀರಿನಿಂದ ಆವೃತವಾಗಿರುವುದರಿಂದ ನಾಯಿಗಳು ಒಳಗೇ ಬಂಧಿಯಾಗಿದ್ದವು.
ಧಕ್ಕೆಯಲ್ಲಿ ಯಾರಾದರೂ ಎಸೆದ ತಿಂಡಿಗಳನ್ನು ತಿಂದು ಇವು ಬದುಕಿದ್ದವು.ಈ ವಿಷಯ ಅರಿತ ಆಪದ್ಭಾಂಧವ ಈಶ್ವರ್ ಮಲ್ಪೆ ,ನಾಯಿಗಳನ್ನು ಹೊರತೆಗೆಯಲು ಮುಂದಾದರು.
ಇದಕ್ಕಾಗಿ ಜಾಣ್ಮೆಯಿಂದ ಕಾರ್ಯಾಚರಣೆ ನಡೆಸಿದರು.ಹಗ್ಗ ,ಟ್ಯೂಬ್ ಮೂಲಕ ಇಳಿದು ನಾಯಿಗಳನ್ನು ಹೊರತರಲು ಪ್ರಯತ್ನಿಸಿದರು.
ಆದರೆ ಸುಲಭದಲ್ಲಿ ಅವು ಹೊರಬರಲಿಲ್ಲ.ಸುತ್ತಲೂ ಈ ಕಾರ್ಯಾಚರಣೆ ನೋಡಲು ಧಕ್ಕೆಯಲ್ಲಿ ಸಾಕಷ್ಟು ಜನ ಸೇರಿದ್ದರು.
ತಾನು ಹಿಡಿದ ಕೆಲಸವನ್ನು ಪೂರ್ಣಗೊಳಿಸದೆ ಮೇಲೆ ಬರುವವರಲ್ಲ ,ಈಶ್ವರ್ ಮಲ್ಪೆ.ಜಾಣ್ಮೆಯಿಂದ ನಾಯಿಗಳ ಮನವೊಲಿಸಿ ,ಹಗ್ಗದ ಮೂಲಕ ಹೊರ ತೆಗೆದರು.
ಈ ನಾಯಿಗಳು ವರ್ಷದಿಂದ ಒಳಗೇ ಬಂಧಿಯಾಗಿದ್ದರಿಂದ ನಡೆಯಲೂ ಆಗುತ್ತಿರಲಿಲ್ಲ.ಕೊನೆಗೂ ನಾಯಿಗಳು ಹೊರಬಂದಾಗ ಈಶ್ವರ್ ಮಲ್ಪೆ ಅವರ ಮಾನವೀಯ ಕಾರ್ಯಕ್ಕೆ ಜನರು ಪ್ರಶಂಸೆ ವ್ಯಕ್ತಪಡಿಸಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…