Featured

ಉಡುಪಿ : ಕವರ್ ಸಮೇತ ಚಾಕಲೇಟು ತಿಂದ ಪರಿಣಾಮ ಉಸಿರುಗಟ್ಟಿ ಮೃತಪಟ್ಟ ಬಾಲಕಿ : Vishwanews24

ಉಡುಪಿ : ಕವರ್ ಸಮೇತ ಚಾಕಲೇಟು ತಿಂದ ಪರಿಣಾಮ ಉಸಿರುಗಟ್ಟಿ ಮೃತಪಟ್ಟ ಬಾಲಕಿ : Vishwanews24

ಬೈಂದೂರು: ಶಾಲೆಗೆಂದು ಹೊರಟಿದ್ದ ವೇಳೆ ಮನೆಯವರು ಕೊಟ್ಟ ಚಾಕ್ಲೆಟ್ ಬಾಯಿಗೆ ಹಾಕಿಕೊಂಡ ಬಾಲಕಿ ಶಾಲಾ ಬಸ್ ಬಂತೆಂದು ಬಸ್ ಹತ್ತಲು ಓಡುವಾಗ ಚಾಕ್ಲೆಟ್ ನುಂಗಿದ ಪರಿಣಾಮ ಉಸಿರುಗಟ್ಟಿದ ಬಾಲಕಿ ಸಾವನ್ನಪ್ಪಿದ್ದಾಳೆ. ಬೈಂದೂರು ತಾಲೂಕಿನ ಬಿಜೂರು ಗ್ರಾಮದ ಕಬ್ಸೆಯ ಶಮಿತ್ – ಸಮನ್ವಿ ನಿಲಯದ ನಿವಾಸಿ ಸುಪ್ರೀತಾ ಪೂಜಾರಿ ಎಂಬುವರ ಮಗಳು ಉಪ್ಪುಂದದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿನಿ ಸಮನ್ವಿ (6) ಎಂಬಾಕೆಯೇ ದಾರುಣವಾಗಿ ಸಾವನ್ನಪ್ಪಿದ ನತದೃಷ್ಟೆ ಬಾಲಕಿ.

ಸಮನ್ವಿ ಬುಧವಾರ ಬೆಳಿಗ್ಗೆ ಎಂದಿನಂತೆಯೇ ಶಾಲೆಗೆ ಹೊರಡಲು ಸಮವಸ್ತ್ರ ಧರಿಸಿ ಸಿದ್ಧವಾಗಿದ್ದಳು. ಆದರೆ ಅದೇಕೋ ಆಕೆಯ ಮನಸ್ಸು ಶಾಲೆಗೆ ಹೋಗಲು ಒಪ್ಪಿರಲಿಲ್ಲ. ಇದರಿಂದಾಗಿ ಮನೆಯವರು ಆಕೆಗೆ ಪುಸಲಾಯಿಸಿ ಶಾಲೆಗೆ ಹೊರಡಿಸಿದ್ದು. ಕೈಯಲ್ಲೊಂದು ಚಾಕ್ಲೆಟ್ ನೀಡಿದ್ದರಎನ್ನಲಾಗಿದೆ. ಅಷ್ಟೊತ್ತಿಗಾಗಲೇ ಶಾಲಾ ವಾಹನ ಬಂದಿದೆ. ಇದರಿಂದ ಗಾಬರಿಗೊಂಡ ಬಾಲಕಿ ಸಮನ್ವಿ ಕೈಯಲ್ಲಿದ್ದ ಚಾಕ್ಲೆಟನ್ನು ಪ್ಲಾಸ್ಟಿಕ್ ಕವರ್ ಸಮೇತ ಬಾಯಿಗೆ ಹಾಕಿಕೊಂಡು ಬ್ಯಾಗ್ ಏರಿಸಿಕೊಂಡು ಶಾಲಾ ವಾಹನದತ್ತ ಓಡಿದ್ದಾಳೆ. ಏದುಸಿರು ಬಿಡುವಾಗ ಚಾಕ್ಲೆಟ್ ನುಂಗಿಹೋಗಿದೆ ಎನ್ನಲಾಗಿದೆ. ಗಂಟಲಲ್ಲಿ ಚಾಕ್ಲೆಟ್ ಕವರ್ ಸಮೇತ ಸಿಕ್ಕಿಹಾಕಿಕೊಂಡ ಪರಿಣಾಮ ಉಸಿರುಗಟ್ಟಿ ಶಾಲಾ ವಾಹನದ ಮೆಟ್ಟಿಲ ಬಳಿಯೇ ಬಿದ್ದಿದ್ದಾಳೆ. ಮನೆಯವರು ಶಾಲಾ ವಿದ್ಯಾರ್ಥಿಗಳು, ಸ್ಕೂಲ್ ವ್ಯಾನ್ ಡ್ರೈವರ್ ಎಲ್ಲರೂ ಜಮಾಯಿಸಿದ್ದು, ವಾಹನ ಚಾಲಕ ಮಗುವಿಗೆ ಕೃತಕ ಬಾಲಕಿಗೆ ಉಸಿರಾಟ ನಡೆಸಲು ಅವಕಾಶ ಮಾಡಲು ಪ್ರಯತ್ನಿಸಿದರೂ ಫಲಕಾರಿಯಾಗಲಿಲ್ಲ. ಬೈಂದೂರು ಖಾಸಗೀ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ಇನ್ನು ಕೆಲವರು ಮಗುವಿಗೆ ಹೃದಯಾಘಾತ ಸಂಭವಿಸಿದೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ. ಮಗುವಿನ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಬಾಲಕಿಯ ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲಕ್ಕೆ ಕರೆದೊಯ್ಯಲಾಗಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಗೆ ಒಂದು ದಿನ ರಜೆ ಘೋಷಿಸಲಾಗಿದೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

14 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

14 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

14 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

14 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago