ಉಡುಪಿ: ಕಸದ ರಾಶಿಯಲ್ಲಿ ಕೊಳೆತ ಸ್ಥಿತಿಯಲ್ಲಿ ದೊರೆತ ಅಪರಿಚಿತ ಶವದ ಗುರುತು ಪತ್ತೆ – vishwanews24

Featured, ಉಡುಪಿ

ಉಡುಪಿ: ಕಸದ ರಾಶಿಯಲ್ಲಿ ಕೊಳೆತ ಸ್ಥಿತಿಯಲ್ಲಿ ದೊರೆತ ಅಪರಿಚಿತ ಶವದ ಗುರುತು ಪತ್ತೆ

ಉಡುಪಿ: ಹೆಬ್ರಿ ಕೆಳಪೇಟೆ ಮೂರು ರಸ್ತೆ ಬಳಿ ಭೋಗಿ ಹಾಡಿಯಲ್ಲಿರುವ ಕಸದ ರಾಶಿಯಲ್ಲಿ ನ. 30ರಂದು ಕೊಳೆತ ಸ್ಥಿತಿಯಲ್ಲಿ ದೊರೆತ ಅಪರಿಚಿತ ಶವದ ಗುರುತು ಪತ್ತೆಯಾಗಿದೆ.

ಕೊಳೆತ ಸ್ಥಿತಿಯಲ್ಲಿ ದೊರೆತ ಶವವನ್ನು ಮೂಲತಃ ಹೆಬ್ರಿ ಸಂತೆಕಟ್ಟೆ ನಿವಾಸಿ ರಾಜೀವ ಪಾಣರ (54) ಅವರದ್ದು ಎಂದು ಗುರುತಿಸಲಾಗಿದೆ.

ಹಾಸನ :  ಜೀಪ್ ಅಪಘಾತ: ಪ್ರೊಬೆಷನರಿ ಐಪಿಎಸ್ ಅಧಿಕಾರಿ ಸಾವು – vishwanews24

ಮೃತ ರಾಜೀವ ಅವರು ಬೆಳಂಜೆಯ ಬಾಡಿಗೆ ಮನೆ ಒಂದರಲ್ಲಿ ವಾಸವಿದ್ದರು. ವಿಪರೀತ ಮದ್ಯಪಾನ ಚಟ ಹೊಂದಿದ್ದ ಇವರು ದಿನ ಮನೆಗೆ ಹೋಗದೆ ಬಸ್ ತಂಗುದಾಣ ಬಳಿ ಇರುತ್ತಿದ್ದರು ಎನ್ನಲಾಗಿದೆ.

ಮೂರು ದಿನಗಳ ಹಿಂದೆ ಭೋಗಿ ಹಾಡಿಯ ಮರದ ಬಳಿ ಕೂತಿದ್ದ ವ್ಯಕ್ತಿಯನ್ನು ಈ ಭಾಗದಲ್ಲಿ ತಿರುಗುತ್ತಿದ್ದ ವಿದ್ಯಾರ್ಥಿಗಳು ನೋಡಿದ್ದಾರೆ ಎಂದು ಹೇಳಲಾಗಿದೆ. ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೋ ಅಥವಾ ಇನ್ನಾವುದೇ ಕಾರಣದಿಂದ ಮೃತಪಟ್ಟಿದ್ದಾರೋ ಎಂಬುದು ತನಿಖೆಯ ಬಳಿಕ ತಿಳಿದು ಬರಬೇಕಿದೆ.

ಕೇಂದ್ರ ಬಿಜೆಪಿ ಶಿಸ್ತುಸಮಿತಿಯಿಂದ ಯತ್ನಾಳ್‌ಗೆ ಶೋಕಾಸ್ ನೋಟಿಸ್ ಜಾರಿ : 10 ದಿನಗಳ ಒಳಗೆ ಸ್ಪಷ್ಟನೆ ನೀಡುವಂತೆ ಉಲ್ಲೇಖ – vishwanews24

Leave a Reply