ಉಡುಪಿ: ಹೆಬ್ರಿ ಕೆಳಪೇಟೆ ಮೂರು ರಸ್ತೆ ಬಳಿ ಭೋಗಿ ಹಾಡಿಯಲ್ಲಿರುವ ಕಸದ ರಾಶಿಯಲ್ಲಿ ನ. 30ರಂದು ಕೊಳೆತ ಸ್ಥಿತಿಯಲ್ಲಿ ದೊರೆತ ಅಪರಿಚಿತ ಶವದ ಗುರುತು ಪತ್ತೆಯಾಗಿದೆ.
ಕೊಳೆತ ಸ್ಥಿತಿಯಲ್ಲಿ ದೊರೆತ ಶವವನ್ನು ಮೂಲತಃ ಹೆಬ್ರಿ ಸಂತೆಕಟ್ಟೆ ನಿವಾಸಿ ರಾಜೀವ ಪಾಣರ (54) ಅವರದ್ದು ಎಂದು ಗುರುತಿಸಲಾಗಿದೆ.
ಮೃತ ರಾಜೀವ ಅವರು ಬೆಳಂಜೆಯ ಬಾಡಿಗೆ ಮನೆ ಒಂದರಲ್ಲಿ ವಾಸವಿದ್ದರು. ವಿಪರೀತ ಮದ್ಯಪಾನ ಚಟ ಹೊಂದಿದ್ದ ಇವರು ದಿನ ಮನೆಗೆ ಹೋಗದೆ ಬಸ್ ತಂಗುದಾಣ ಬಳಿ ಇರುತ್ತಿದ್ದರು ಎನ್ನಲಾಗಿದೆ.
ಮೂರು ದಿನಗಳ ಹಿಂದೆ ಭೋಗಿ ಹಾಡಿಯ ಮರದ ಬಳಿ ಕೂತಿದ್ದ ವ್ಯಕ್ತಿಯನ್ನು ಈ ಭಾಗದಲ್ಲಿ ತಿರುಗುತ್ತಿದ್ದ ವಿದ್ಯಾರ್ಥಿಗಳು ನೋಡಿದ್ದಾರೆ ಎಂದು ಹೇಳಲಾಗಿದೆ. ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೋ ಅಥವಾ ಇನ್ನಾವುದೇ ಕಾರಣದಿಂದ ಮೃತಪಟ್ಟಿದ್ದಾರೋ ಎಂಬುದು ತನಿಖೆಯ ಬಳಿಕ ತಿಳಿದು ಬರಬೇಕಿದೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…