ಉಡುಪಿ: ಹೆಬ್ರಿ ಕೆಳಪೇಟೆ ಮೂರು ರಸ್ತೆ ಬಳಿ ಭೋಗಿ ಹಾಡಿಯಲ್ಲಿರುವ ಕಸದ ರಾಶಿಯಲ್ಲಿ ನ. 30ರಂದು ಕೊಳೆತ ಸ್ಥಿತಿಯಲ್ಲಿ ದೊರೆತ ಅಪರಿಚಿತ ಶವದ ಗುರುತು ಪತ್ತೆಯಾಗಿದೆ.
ಕೊಳೆತ ಸ್ಥಿತಿಯಲ್ಲಿ ದೊರೆತ ಶವವನ್ನು ಮೂಲತಃ ಹೆಬ್ರಿ ಸಂತೆಕಟ್ಟೆ ನಿವಾಸಿ ರಾಜೀವ ಪಾಣರ (54) ಅವರದ್ದು ಎಂದು ಗುರುತಿಸಲಾಗಿದೆ.
ಮೃತ ರಾಜೀವ ಅವರು ಬೆಳಂಜೆಯ ಬಾಡಿಗೆ ಮನೆ ಒಂದರಲ್ಲಿ ವಾಸವಿದ್ದರು. ವಿಪರೀತ ಮದ್ಯಪಾನ ಚಟ ಹೊಂದಿದ್ದ ಇವರು ದಿನ ಮನೆಗೆ ಹೋಗದೆ ಬಸ್ ತಂಗುದಾಣ ಬಳಿ ಇರುತ್ತಿದ್ದರು ಎನ್ನಲಾಗಿದೆ.
ಮೂರು ದಿನಗಳ ಹಿಂದೆ ಭೋಗಿ ಹಾಡಿಯ ಮರದ ಬಳಿ ಕೂತಿದ್ದ ವ್ಯಕ್ತಿಯನ್ನು ಈ ಭಾಗದಲ್ಲಿ ತಿರುಗುತ್ತಿದ್ದ ವಿದ್ಯಾರ್ಥಿಗಳು ನೋಡಿದ್ದಾರೆ ಎಂದು ಹೇಳಲಾಗಿದೆ. ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೋ ಅಥವಾ ಇನ್ನಾವುದೇ ಕಾರಣದಿಂದ ಮೃತಪಟ್ಟಿದ್ದಾರೋ ಎಂಬುದು ತನಿಖೆಯ ಬಳಿಕ ತಿಳಿದು ಬರಬೇಕಿದೆ.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…