ಉಡುಪಿ: ರಾಜ್ಯ ಕಾಂಗ್ರೆಸ್ ನಲ್ಲಿ ಸಾಕಷ್ಟು ಚಟುವಟಿಕೆಗಳು ನಡೆಯುತ್ತಿವೆ.ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕುಂಭಮೇಳಕ್ಕೆ ಹೋಗಿ ಬಂದ ನಂತರ ಮತ್ತು ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಚಟುವಟಿಕೆಗಳು ಬಿರುಸುಗೊಂಡಿವೆ. ಇದೇ ವೇಳೆ ಬಿಜೆಪಿ ಮುಖಂಡರು ಕೂಡ ಡಿಕೆಶಿ ನಡೆಯನ್ನು ಕೊಂಡಾಡುತ್ತಿರುವುದು ಹೊಸ ಬೆಳವಣಿಗೆ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ಕೂಡ ಇವತ್ತು ಮಾಧ್ಯಮದ ಜೊತೆ ಮಾತನಾಡಿ ಡಿಕೆಶಿ ಅವರ ನಡೆಯನ್ನು ಹಾಡಿ ಹೊಗಳಿದ್ದಾರೆ .
ಮಾಧ್ಯಮದ ಜೊತೆ ಮಾತನಾಡಿದ ಅವರು, ಡಿಕೆಶಿ ಅವರು ಸತ್ಯವನ್ನು ಹೇಳಿದ್ದಾರೆ. ಒಬ್ಬ ಹಿಂದೂ ಆಗಿ ಹುಟ್ಟಿ ಅವರು ಕುಂಭಮೇಳಕ್ಕೆ ಹೋಗಿದ್ದು ಇತರೆ ಕಾಂಗ್ರೆಸಿಗರಿಗಿಂತ ಒಳ್ಳೆಯ ನಡೆ. ಡಿಕೆಶಿ ಅವರ ಈ ನಡೆಯನ್ನು ನಾನು ಸ್ವಾಗತಿಸುತ್ತೇನೆ. ಕಾಂಗ್ರೆಸ್ ಇತಿಹಾಸದಲ್ಲೇ ಈ ರೀತಿ ಸತ್ಯವನ್ನು ಮಾತನಾಡಿದರು ಡಿಕೆಶಿ ಮಾತ್ರ. ಕಾಂಗ್ರೆಸಿಗರ ಓಲೈಕೆ ರಾಜಕಾರಣದ ಮಧ್ಯೆ ಡಿಕೆಶಿ ಅವರ ಈ ನಿಲುವು ಸ್ವಾಗತಾರ್ಹ ಎಂದು ಹೇಳಿದ್ದಾರೆ.
ಉಡುಪಿ : ಅಕ್ಕಕೆಫೆ ನಿರ್ವಹಣೆ - ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ರಾಮನ ಹೆಸರಿನಲ್ಲಿ ರಾಜಕೀಯ ನಾಟಕ ನಿಲ್ಲಿಸಿ: ಕಾಂಗ್ರೆಸ್ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ತಿರುಗೇಟು ಶ್ರೀರಾಮ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…