ಉಡುಪಿ: ಕಾಂಗ್ರೆಸ್ ಕಳೆದ 70 ವರ್ಷಗಳಿಂದ ಅಯೋಧ್ಯೆಯ ವಿರುದ್ಧ ಹೋರಾಟ ಮಾಡಿತ್ತು. ಕಾಂಗ್ರೆಸ್ನ ಕಪಿಲ್ ಸಿಬಲ್ ಅಯೋಧ್ಯೆಯ ವಿರುದ್ಧ ನ್ಯಾಯಾಲಯದಲ್ಲಿ ವಾದ ಮಾಡಿದ್ದರು. ಅಯೋಧ್ಯೆಯಲ್ಲಿ ರಾಮಮಂದಿರ ಆಗಬಾರದು ಎಂದು ಕಾಂಗ್ರೆಸ್ ಉದ್ದೇಶವಾಗಿತ್ತು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದರು.
ಇಂದ್ರಾಳಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ,ಅಲ್ಪಸಂಖ್ಯಾಕರಿಗೆ ನೋವಾಗಬಾರ ದೆಂದು ಕಾಂಗ್ರೆಸ್ ರಾಮ ಮಂದಿರದ ವಿರುದ್ಧ ನಿಲುವು ಹೊಂದಿತ್ತು. ಆದರೆ 2014ರ ಅನಂತರ ನ್ಯಾಯಾಲಯಕ್ಕೆ ರಾಮ ಮಂದಿರದ ಕುರಿತಾದ ಎಲ್ಲ ಮಾಹಿತಿಯನ್ನು ಒದಗಿಸಲಾಯಿತು. ನ್ಯಾಯಾಲಯದಲ್ಲಿ ಜಯ ಆಗಿದೆ. ಈಗ ಭವ್ಯವಾದ ಮಂದಿರ ನಿರ್ಮಾಣವಾಗುತ್ತಿದೆ ಎಂದರು.
ಬಿಜೆಪಿ, ವಿಶ್ವಹಿಂದೂ ಪರಿಷತ್ ಯಾವುದೇ ರಾಜಕೀಯವನ್ನು ಮನಸ್ಸಿನಲ್ಲಿಟ್ಟುಕೊಂಡಿಲ್ಲ. ರಾಮಮಂದಿರದ ಪ್ರತಿಷ್ಠಾಪನೆಯಲ್ಲಿ ಎಲ್ಲರೂ ಭಾಗವಹಿಸಬೇಕು, ಎಲ್ಲರೂ ರಾಮನ ದರ್ಶನ ಮಾಡಬೇಕು. ಇದು ನಮ್ಮ ಅಸ್ಮಿತೆಯ ಪ್ರಶ್ನೆ. ಕಾಂಗ್ರೆಸ್ನವರು ಗೈರಾದರೆ ದೇಶಕ್ಕೆ ಮತ್ತು ನಮ್ಮ ಶ್ರದ್ಧೆಗೆ ಮಾಡಿದ ಅವಮಾನವಾಗಲಿದೆ. ಕಾಂಗ್ರೆಸ್ ನಾಯಕರು ಬರುತ್ತಾರೆ ಎಂಬ ವಿಶ್ವಾಸವಿದೆ ಎಂದರು.
ರಾಜ್ಯ ಸರಕಾರದ ವಿರುದ್ಧ ಹಲವಾರು ಮಂದಿ ಹೋರಾಟದ ಮೂಡ್ನಲ್ಲಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರ ದಮನ ನೀತಿಯ ಮೂಲಕ ಅವರ ಬಾಯಿ ಮುಚ್ಚಿಸುತ್ತಿದೆ ಎಂದು ಆರೋಪಿಸಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…