Featured

ಉಡುಪಿ : ಕಾಂಗ್ರೆಸ್‌ನವರು ಗೈರಾದರೆ ದೇಶಕ್ಕೆ ಮತ್ತು ನಮ್ಮ ಶ್ರದ್ಧೆಗೆ ಮಾಡಿದ ಅವಮಾನ : ಶೋಭಾ ಕರಂದ್ಲಾಜೆ – vishwanews24

ಉಡುಪಿ : ಕಾಂಗ್ರೆಸ್‌ನವರು ಗೈರಾದರೆ ದೇಶಕ್ಕೆ ಮತ್ತು ನಮ್ಮ ಶ್ರದ್ಧೆಗೆ ಮಾಡಿದ ಅವಮಾನ : ಶೋಭಾ ಕರಂದ್ಲಾಜೆ

ಉಡುಪಿ: ಕಾಂಗ್ರೆಸ್‌ ಕಳೆದ 70 ವರ್ಷಗಳಿಂದ ಅಯೋಧ್ಯೆಯ ವಿರುದ್ಧ ಹೋರಾಟ ಮಾಡಿತ್ತು. ಕಾಂಗ್ರೆಸ್‌ನ ಕಪಿಲ್‌ ಸಿಬಲ್‌ ಅಯೋಧ್ಯೆಯ ವಿರುದ್ಧ ನ್ಯಾಯಾಲಯದಲ್ಲಿ ವಾದ ಮಾಡಿದ್ದರು. ಅಯೋಧ್ಯೆಯಲ್ಲಿ ರಾಮಮಂದಿರ ಆಗಬಾರದು ಎಂದು ಕಾಂಗ್ರೆಸ್‌ ಉದ್ದೇಶವಾಗಿತ್ತು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದರು.

ಇಂದ್ರಾಳಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ,ಅಲ್ಪಸಂಖ್ಯಾಕರಿಗೆ ನೋವಾಗಬಾರ ದೆಂದು ಕಾಂಗ್ರೆಸ್‌ ರಾಮ ಮಂದಿರದ ವಿರುದ್ಧ ನಿಲುವು ಹೊಂದಿತ್ತು. ಆದರೆ 2014ರ ಅನಂತರ ನ್ಯಾಯಾಲಯಕ್ಕೆ ರಾಮ ಮಂದಿರದ ಕುರಿತಾದ ಎಲ್ಲ ಮಾಹಿತಿಯನ್ನು ಒದಗಿಸಲಾಯಿತು. ನ್ಯಾಯಾಲಯದಲ್ಲಿ ಜಯ ಆಗಿದೆ. ಈಗ ಭವ್ಯವಾದ ಮಂದಿರ ನಿರ್ಮಾಣವಾಗುತ್ತಿದೆ ಎಂದರು.

ಬಿಜೆಪಿ, ವಿಶ್ವಹಿಂದೂ ಪರಿಷತ್‌ ಯಾವುದೇ ರಾಜಕೀಯವನ್ನು ಮನಸ್ಸಿನಲ್ಲಿಟ್ಟುಕೊಂಡಿಲ್ಲ. ರಾಮಮಂದಿರದ ಪ್ರತಿಷ್ಠಾಪನೆಯಲ್ಲಿ ಎಲ್ಲರೂ ಭಾಗವಹಿಸಬೇಕು, ಎಲ್ಲರೂ ರಾಮನ ದರ್ಶನ ಮಾಡಬೇಕು. ಇದು ನಮ್ಮ ಅಸ್ಮಿತೆಯ ಪ್ರಶ್ನೆ. ಕಾಂಗ್ರೆಸ್‌ನವರು ಗೈರಾದರೆ ದೇಶಕ್ಕೆ ಮತ್ತು ನಮ್ಮ ಶ್ರದ್ಧೆಗೆ ಮಾಡಿದ ಅವಮಾನವಾಗಲಿದೆ. ಕಾಂಗ್ರೆಸ್‌ ನಾಯಕರು ಬರುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ರಾಜ್ಯ ಸರಕಾರದ ವಿರುದ್ಧ ಹಲವಾರು ಮಂದಿ ಹೋರಾಟದ ಮೂಡ್‌ನ‌ಲ್ಲಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರ ದಮನ ನೀತಿಯ ಮೂಲಕ ಅವರ ಬಾಯಿ ಮುಚ್ಚಿಸುತ್ತಿದೆ ಎಂದು ಆರೋಪಿಸಿದರು.

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

5 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

5 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

5 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

5 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

5 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

5 days ago