Featured

ಉಡುಪಿ : ಕಾಂಗ್ರೆಸ್‌ನಿಂದ ರಾಜೇಂದ್ರಕುಮಾರ್‌ಗೆ ವಿಧಾನಪರಿಷತ್ ಟಿಕೆಟ್ ನೀಡುವಂತೆ ಜಿಲ್ಲಾ ಕಾಂಗ್ರೆಸ್ ಮುಖಂಡರ ಒತ್ತಾಯ – Vishwanews24

ಉಡುಪಿ : ಕಾಂಗ್ರೆಸ್‌ನಿಂದ ರಾಜೇಂದ್ರಕುಮಾರ್‌ಗೆ ವಿಧಾನಪರಿಷತ್ ಟಿಕೆಟ್ ನೀಡುವಂತೆ ಜಿಲ್ಲಾ ಕಾಂಗ್ರೆಸ್ ಮುಖಂಡರ ಒತ್ತಾಯ

ಉಡುಪಿ : ಬುಧವಾರ ಸಂಜೆ ನಡೆದ ಅತ್ಯಂತ ಅನಿರೀಕ್ಷಿತ ಬೆಳವಣಿಗೆಯಲ್ಲಿ ಜಿಲ್ಲೆಯ ಕೆಲವು ಕಾಂಗ್ರೆಸ್ ಮುಖಂಡರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಕಾಂಗ್ರೆಸ್‌ನಿಂದ ಎಂ.ಎನ್ ರಾಜೇಂದ್ರಕುಮಾರ್‌ಗೆ ವಿಧಾನಪರಿಷತ್ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ.

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಗೋಪಾಲ್ ಪೂಜಾರಿ, ಕಣಚೂರು ಮೋಹನ್ ಹಾಗೂ ಎಂ.ಎನ್.ರಾಜೇಂದ್ರಕುಮಾರ್ ಅವರು ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ .ಎಂ.ಎನ್.ರಾಜೇಂದ್ರಕುಮಾರ್ ಅವರಿಗೆ ದ.ಕ. -ಉಡುಪಿಯಿಂದ ಕಾಂಗ್ರೆಸ್ ಪರಿಷತ್ ಚುನಾವಣೆಯಲ್ಲಿ ಟಿಕೆಟ್ ನೀಡುವಂತೆ ಜಿಲ್ಲಾ ಕಾಂಗ್ರೆಸ್ ಮುಖಂಡರು ಡಿಕೆಶಿ ಅವರನ್ನು ಒತ್ತಾಯಿಸಿದ್ದಾರೆ.

ಎಂ.ಎನ್.ರಾಜೇಂದ್ರಕುಮಾರ್ ಅವರು ಎಂಎಲ್ಸಿ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದರು. ಕೆಲ ದಿನಗಳ ಹಿಂದಷ್ಟೇ ಅವರ ಚುನಾವಣಾ ಕಚೇರಿ ಉದ್ಘಾಟನೆಯಾಗಿದೆ. ಈ ಭೇಟಿಯೂ ಪರಿಷತ್ ಚುನಾವಣೆಯ ಬಗ್ಗೆಯೂ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ಈ ಹಿಂದೆ ಚುನಾವಣೆ ಘೋಷಣೆಯಾದಾಗ 11 ಜನ ಕಾಂಗ್ರೆಸ್‌ ಆಕಾಂಕ್ಷಿಗಳಿದ್ದರು. ನಂತರ ಅಚ್ಚರಿಯ ನಡೆಯಲ್ಲಿ ಬ್ರಹ್ಮಾವರದಿಂದ ಪಕ್ಷದ ನೆಲಮಟ್ಟದ ಕಾರ್ಯಕರ್ತ ಭುಜಂಗ ಶೆಟ್ಟಿ ಪಕ್ಷದಿಂದ ದಕ್ಷಿಣ ಕನ್ನಡ-ಉಡುಪಿಗೆ ಸರ್ವಾನುಮತದ ಅಭ್ಯರ್ಥಿಯಾಗುವ ನಿರೀಕ್ಷೆ ಇತ್ತು.

ಕೆಲವು ಕಾಂಗ್ರೆಸ್ ನಾಯಕರ ಬೆಂಬಲದೊಂದಿಗೆ ಸಹಕಾರಿ ಮುಖಂಡ ಎಂಎನ್ ರಾಜೇಂದ್ರಕುಮಾರ್ ಪಕ್ಷದಿಂದ ಟಿಕೆಟ್ ಬಯಸುತ್ತಿರುವ ಕಾರಣ ಟಿಕೆಟ್ ಯಾರಿಗೆ ಸಿಗಲಿದೆ ಎಂಬ ಕುತೂಹಲ ಸೃಷ್ಟಿಯಾಗಿದೆ.

Vishwa News 24

Recent Posts

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ – vishwanews24

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…

2 hours ago

ನಿಮ್ಮ ಜೊತೆ ಸರಕಾರವಿದೆ ;ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ , ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಅಭಯ – vishwanews24

ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…

2 hours ago

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ – vishwanews24

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…

3 hours ago

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ – vishwanews24

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…

3 hours ago

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

6 hours ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

6 hours ago