Featured

ಉಡುಪಿ: ಕಾಂಗ್ರೆಸ್‌ ಆಡಳಿತದ ಭರವಸೆಯ ದಿನಗಳು ಸನ್ನಿಹಿತವಾಗಿದೆ : ಕಾಂಗ್ರೆಸ್‌ ಅಭ್ಯರ್ಥಿ ಪ್ರಸಾದ್‌ರಾಜ್‌ ಕಾಂಚನ್‌ – Vishwanews24

ಉಡುಪಿ:  ಬಿಜೆಪಿ ಆಡಳಿತದ ಕರಾಳ ದಿನಗಳು ಕೊನೆಯಾಗಿ, ಕಾಂಗ್ರೆಸ್‌ ಆಡಳಿತದ ಭರವಸೆಯ ದಿನಗಳು ಸನ್ನಿಹಿತವಾಗಿದೆ : ಕಾಂಗ್ರೆಸ್‌ ಅಭ್ಯರ್ಥಿ ಪ್ರಸಾದ್‌ರಾಜ್‌ ಕಾಂಚನ್‌

ಉಡುಪಿ: ಬಿಜೆಪಿಯ ದುರಾಡಳಿತದಲ್ಲಿ ಅಭಿವೃದ್ಧಿ ನಿಂತ ನೀರಾಗಿದೆ, ಪ್ರತಿ ಕ್ಷೇತ್ರದಲ್ಲೂ ಭ್ರಷ್ಟಾಚಾರದ ಪಿಡುಗು ಜನರನ್ನು ಹಿಂಸಿಸುತ್ತಿದೆ. ಭ್ರಷ್ಟಾಚಾರದಲ್ಲಿ ಮುಳುಗಿದ ಬಿಜೆಪಿಗರ ನಿರ್ಲಜ್ಜತನ ಅಂಕೆ ಮೀರಿದೆ. ಬಿಜೆಪಿ ಆಡಳಿತದ ಕರಾಳ ದಿನಗಳು ಕೊನೆಯಾಗಿ, ಕಾಂಗ್ರೆಸ್‌ ಆಡಳಿತದ ಭರವಸೆಯ ದಿನಗಳು ಸನ್ನಿಹಿತವಾಗಿದೆ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರಸಾದ್‌ರಾಜ್‌ ಕಾಂಚನ್‌ ಹೇಳಿದರು.

ಅವರು ಶೆಟ್ಟಿಬೆಟ್ಟು ವಾರ್ಡ್‌ನಲ್ಲಿ ಉಡುಪಿ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಹಮ್ಮಿಕೊಂಡಿದ್ದ ವಾರ್ಡ್‌ ಹಾಗೂ ಪಂಚಾಯತ್‌ ಮಟ್ಟದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಕಾಂಗ್ರೆಸ್‌ ಪಕ್ಷವನ್ನು ಇನ್ನಷ್ಟು ಬಲಪಡಿಸಬೇಕಾದ ಆವಶ್ಯಕತೆ ಇದ್ದು ಚುನಾವಣೆಯನ್ನು ಹೇಗೆ ಗೆಲ್ಲಬಹುದೆಂಬ ಕುರಿತು ಆಲೋಚಿಸಿ ಆ ನಿಟ್ಟಿನಲ್ಲಿ ನಾವು ಕೆಲಸ ಮಾಡಬೇಕಾಗಿದೆ. ನಮ್ಮಲ್ಲಿ ಬಹಳಷ್ಟು ಮಂದಿ ಕಾರ್ಯಕರ್ತರು, ಮತದಾರರಿದ್ದಾರೆ. ಒಬ್ಬ ಕಾರ್ಯಕರ್ತ ಜವಾಬ್ದಾರಿ ಹೊತ್ತು ಇಬ್ಬರು ಮತದಾರರನ್ನು ವಿಶ್ವಾಸಕ್ಕೆ ತರುವಂತಹ ಕೆಲಸ ಮಾಡಬೇಕು ಎಂದರು.

ಪ್ರಸಾದ್‌ರಂತಹ ಒಳ್ಳೆಯ ಅಭ್ಯರ್ಥಿಯನ್ನು ಗೆಲ್ಲಿಸುವ ಉಡುಪಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಮೇಶ್‌ ಕಾಂಚನ್‌ ಮಾತನಾಡಿ, ಕಳೆದ 5 ವರ್ಷಗಳಲ್ಲಿ ಆಡಳಿತ ನಡೆಸಿದ ಬಿಜೆಪಿ ನೀಡಿದ ಭರವಸೆಗೆ ತದ್ವಿರುದ್ಧವಾಗಿ ನಡೆದಿದೆ. ಬೆಲೆ ಏರಿಕೆ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಬಡವರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡಿದೆ. ಬಿಜೆಪಿ ಆಡಳಿತದ 5 ವರ್ಷದಲ್ಲಿ ಯಾರಾದರೂ ಒಳ್ಳೆಯದಾಗಿದ್ದರೆ ಅದು ಶಾಸಕರು, ಮಂತ್ರಿಗಳೇ ಮಾತ್ರ ಹೊರತು ಜನಸಾಮಾನ್ಯರಲ್ಲ. ಕಾರ್ಯಕರ್ತರು ಮುಂದಿನ 20 ದಿವಸ ಕಾಂಗ್ರೆಸ್‌ ಅಭ್ಯರ್ಥಿಯ ಪರವಾಗಿ ಕೆಲಸ ಮಾಡಿದರೆ ಮುಂದಿನ 5 ವರ್ಷ ಅವರು ನಮ್ಮ ಪರವಾಗಿ ಇರುತ್ತಾರೆ. ಈ ನಿಟ್ಟಿನಲ್ಲಿ ನಾವು ಉಡುಪಿಯಲ್ಲಿ ಒಳ್ಳೆಯ ಅಭ್ಯರ್ಥಿಯನ್ನು ಗೆಲ್ಲಿಸೋಣ ಎಂದರು.

ಕಾಂಗ್ರೆಸ್‌ ನಾಯಕರಾದ ದಿವಾಕರ ಕುಂದರ್‌, ದಿನೇಶ್‌ ಪುತ್ರನ್‌, ಮಮತಾ ಶೆಟ್ಟಿ, ಕುಶಲ್‌ ಶೆಟ್ಟಿ, ಧನಂಜಯ್‌ ಕುಂದರ್‌, ಗಣೇಶ್‌ ನೆರ್ಗಿ, ಪ್ರಶಾಂತ್‌ ಪೂಜರಿ, ನಾಸಿರ್‌, ಸುರೇಶ್‌ ಶೆಟ್ಟಿ, ರೋಶನಿ ಓಲಿವರ್‌, ಸುಕೇಶ್‌ ಕುಂದರ್‌ ಮೊದಲಾದವರು ಉಪಸ್ಥಿತರಿದ್ದರು.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

11 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

11 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago