ಉಡುಪಿ: ಬಿಜೆಪಿಯ ದುರಾಡಳಿತದಲ್ಲಿ ಅಭಿವೃದ್ಧಿ ನಿಂತ ನೀರಾಗಿದೆ, ಪ್ರತಿ ಕ್ಷೇತ್ರದಲ್ಲೂ ಭ್ರಷ್ಟಾಚಾರದ ಪಿಡುಗು ಜನರನ್ನು ಹಿಂಸಿಸುತ್ತಿದೆ. ಭ್ರಷ್ಟಾಚಾರದಲ್ಲಿ ಮುಳುಗಿದ ಬಿಜೆಪಿಗರ ನಿರ್ಲಜ್ಜತನ ಅಂಕೆ ಮೀರಿದೆ. ಬಿಜೆಪಿ ಆಡಳಿತದ ಕರಾಳ ದಿನಗಳು ಕೊನೆಯಾಗಿ, ಕಾಂಗ್ರೆಸ್ ಆಡಳಿತದ ಭರವಸೆಯ ದಿನಗಳು ಸನ್ನಿಹಿತವಾಗಿದೆ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ರಾಜ್ ಕಾಂಚನ್ ಹೇಳಿದರು.
ಅವರು ಶೆಟ್ಟಿಬೆಟ್ಟು ವಾರ್ಡ್ನಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ವಾರ್ಡ್ ಹಾಗೂ ಪಂಚಾಯತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಪಡಿಸಬೇಕಾದ ಆವಶ್ಯಕತೆ ಇದ್ದು ಚುನಾವಣೆಯನ್ನು ಹೇಗೆ ಗೆಲ್ಲಬಹುದೆಂಬ ಕುರಿತು ಆಲೋಚಿಸಿ ಆ ನಿಟ್ಟಿನಲ್ಲಿ ನಾವು ಕೆಲಸ ಮಾಡಬೇಕಾಗಿದೆ. ನಮ್ಮಲ್ಲಿ ಬಹಳಷ್ಟು ಮಂದಿ ಕಾರ್ಯಕರ್ತರು, ಮತದಾರರಿದ್ದಾರೆ. ಒಬ್ಬ ಕಾರ್ಯಕರ್ತ ಜವಾಬ್ದಾರಿ ಹೊತ್ತು ಇಬ್ಬರು ಮತದಾರರನ್ನು ವಿಶ್ವಾಸಕ್ಕೆ ತರುವಂತಹ ಕೆಲಸ ಮಾಡಬೇಕು ಎಂದರು.
ಪ್ರಸಾದ್ರಂತಹ ಒಳ್ಳೆಯ ಅಭ್ಯರ್ಥಿಯನ್ನು ಗೆಲ್ಲಿಸುವ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಮಾತನಾಡಿ, ಕಳೆದ 5 ವರ್ಷಗಳಲ್ಲಿ ಆಡಳಿತ ನಡೆಸಿದ ಬಿಜೆಪಿ ನೀಡಿದ ಭರವಸೆಗೆ ತದ್ವಿರುದ್ಧವಾಗಿ ನಡೆದಿದೆ. ಬೆಲೆ ಏರಿಕೆ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಬಡವರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡಿದೆ. ಬಿಜೆಪಿ ಆಡಳಿತದ 5 ವರ್ಷದಲ್ಲಿ ಯಾರಾದರೂ ಒಳ್ಳೆಯದಾಗಿದ್ದರೆ ಅದು ಶಾಸಕರು, ಮಂತ್ರಿಗಳೇ ಮಾತ್ರ ಹೊರತು ಜನಸಾಮಾನ್ಯರಲ್ಲ. ಕಾರ್ಯಕರ್ತರು ಮುಂದಿನ 20 ದಿವಸ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಕೆಲಸ ಮಾಡಿದರೆ ಮುಂದಿನ 5 ವರ್ಷ ಅವರು ನಮ್ಮ ಪರವಾಗಿ ಇರುತ್ತಾರೆ. ಈ ನಿಟ್ಟಿನಲ್ಲಿ ನಾವು ಉಡುಪಿಯಲ್ಲಿ ಒಳ್ಳೆಯ ಅಭ್ಯರ್ಥಿಯನ್ನು ಗೆಲ್ಲಿಸೋಣ ಎಂದರು.
ಕಾಂಗ್ರೆಸ್ ನಾಯಕರಾದ ದಿವಾಕರ ಕುಂದರ್, ದಿನೇಶ್ ಪುತ್ರನ್, ಮಮತಾ ಶೆಟ್ಟಿ, ಕುಶಲ್ ಶೆಟ್ಟಿ, ಧನಂಜಯ್ ಕುಂದರ್, ಗಣೇಶ್ ನೆರ್ಗಿ, ಪ್ರಶಾಂತ್ ಪೂಜರಿ, ನಾಸಿರ್, ಸುರೇಶ್ ಶೆಟ್ಟಿ, ರೋಶನಿ ಓಲಿವರ್, ಸುಕೇಶ್ ಕುಂದರ್ ಮೊದಲಾದವರು ಉಪಸ್ಥಿತರಿದ್ದರು.
ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…
ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ ಮಣಿಪಾಲ: ಪರ್ಕಳದ ಕೆಳಪರ್ಕಕಳ ಹೆದ್ದಾರಿಯಲ್ಲಿ ಕೆನರಾ ಬ್ಯಾಂಕಿನ ತಿರುವಿನಲ್ಲಿ ಕಂಟೇನರ್…
ಉಡುಪಿ: ಮೂವರು ರೌಡಿ ಶೀಟರ್ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್…
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…