ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಉಡುಪಿ ಬ್ಲಾಕ್ ಕಾಂಗ್ರೆಸ್ ಸಭೆಯನ್ನು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಆಯೋಜಿಸಲಾಗಿತ್ತು.
ಸಭೆಯಲ್ಲಿ ಮಾತನಾಡಿದ ಪ್ರಮೋದ್ ಮಧ್ವರಾಜ್ ಕಾರ್ಯಕರ್ತರನ್ನು ನಾನು ಸ್ವಲ್ಪ ನಿರ್ಲಕ್ಷ ಮಾಡಿದ್ದು ನಿಜ. ಆದರೆ ಜಿಲ್ಲೆಯಲ್ಲಿ ಕಾಂಗ್ರೆಸ್ಸನ್ನು ಬಲವಾಗಿ ಕಟ್ಟಲು ನಾನು ಸಾಕಷ್ಟು ಕೆಲಸ ಮಾಡಿದ್ದೇನೆ. ಮುಂದೆಯೂ ಮಾಡುತ್ತೇನೆ.
ಮುಖ್ಯವಾಗಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಒಗ್ಗಟ್ಟಾಗಿ ಕೆಲಸ ಮಾಡಿದರೆ ಬಿಜೆಪಿಯನ್ನು ಸೋಲಿಸುವುದು ಕಷ್ಟವೇನಲ್ಲ.
ಎಲ್ಲ ಕಡೆಗಳಲ್ಲೂ ಅರ್ಹ ಸೂಕ್ತ ಕಾಂಗ್ರೆಸ್ ಅಭ್ಯರ್ಥಿಗಳನ್ನು ನಿಲ್ಲಿಸಬೇಕು. ಮನೆಮನೆಗೆ ತೆರಳಿ ಕಾರ್ಯಕರ್ತರು ನಮ್ಮ ಕಾರ್ಯಕ್ರಮಗಳನ್ನು ತಿಳಿಸಬೇಕು, ಈ ಮೂಲಕ ಪಂಚಾಯತ್ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ಹೇಳಿದರು.
ಆದರೆ ಕಾಂಗ್ರೆಸ್ ಭವನದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮೊದಲಾದ ನಾಯಕರು ಗೈರುಹಾಜರಾಗಿದ್ದರು.
ಕಾಂಗ್ರೆಸ್ ಭವನದಲ್ಲಿ ನಡೆದ ಸಭೆಗೆ ಆಗಮಿಸಿದ ಪ್ರಮೋದ್ ಮಧ್ವರಾಜ್ ಕಾರ್ಯಕರ್ತರಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದಾರೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…