ಉಡುಪಿ : ಕಾಂಗ್ರೆಸ್ ದೇಶದಲ್ಲೇ ಅಸ್ಥಿತ್ವ ಕಳೆದುಕೊಳ್ಳುವ ಸ್ಥಿತಿ ತಲುಪಿದೆ :ಕೋಟ ಶ್ರೀನಿವಾಸ್ ಪೂಜಾರಿ -Vishwanews24
ಉಡುಪಿ : ಕಾಂಗ್ರೆಸ್ ದೇಶದಲ್ಲೇ ಅಸ್ಥಿತ್ವ ಕಳೆದುಕೊಳ್ಳುವ ಸ್ಥಿತಿ ತಲುಪಿದೆ :ಕೋಟ ಶ್ರೀನಿವಾಸ್ ಪೂಜಾರಿ -Vishwanews24
ಉಡುಪಿ: ಉಪಚುನಾವಣೆಯಲ್ಲಿ ಕಾಂಗ್ರೆಸ್ ದೇಶದಲ್ಲೇ ಅಸ್ಥಿತ್ವ ಕಳೆದುಕೊಳ್ಳುವ ಸ್ಥಿತಿ ತಲುಪಿದೆ. 2 ಸ್ಥಾನವನ್ನು ಬಿಜೆಪಿ ಗೆಲ್ಲುತ್ತದೆ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ವಿಶ್ವಾಸ ವ್ಯಕ್ತಪಡಿಸಿದರು.
ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆಡಳಿತಾತ್ಮಕ ವಿಚಾರದಲ್ಲಿ ಲೋಪದೋಷ ಇದ್ದರೆ ಆರೋಪ ಮಾಡಿ. ಅನಗತ್ಯ ಗೊಂದಲ ಸೃಷ್ಟಿಸಬೇಡಿ. ಈ ಎರಡು ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುವುದು ಖಚಿತವೆಂದು ಹೇಳಿದ್ದಾರೆ.
ಉಡುಪಿ ಜಿಲ್ಲೆ ಕಾಪು ಪೊಲೀಸರು ವಿಜಯ ದಶಮಿ ಹಬ್ಬದ ದಿನ ಕೇಸರಿ ಬಟ್ಟೆ ಧರಿಸಿದ್ದಕ್ಕೆ ಸಿದ್ದರಾಮಯ್ಯ ಆಕ್ಷೇಪ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಶ್ರೀನಿವಾಸ ಪೂಜಾರಿ, ಸಿದ್ದರಾಮಯ್ಯ ಹಿಂದುತ್ವ ವಿರೋಧಿ ಹೇಳಿಕೆ ನೀಡುವುದು ಹೊಸತಲ್ಲ. ಎಲ್ಲರೂ ಸಮಾನರು ಅನ್ನುವುದು ಬಿಟ್ಟು ಕೆಲವರು ಮಾತ್ರ ಸಮಾನರು ಅಂತಾರೆ ಎಂದು ಕಿಡಿಕಾರಿದ್ದಾರೆ.
