ಉಡುಪಿ: ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸಜ್ಜಾಗಿದೆ. ಮುಖ್ಯಮಂತ್ರಿ ರೇಸ್ ನಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ರಾಜ್ಯಾದ್ಯಂತ ಅಬ್ಬರದ ಪ್ರಚಾರವನ್ನ ನಡೆಸುತ್ತಿದ್ದು, ಕರವಾಳಿ ಭಾಗದಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ಜನರ ವಿಶ್ವಾಸ ಹೆಚ್ಚಾಗಿದೆ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಬೈಂದೂರಿನಲ್ಲಿ ಮಾತನಾಡಿದ ಅವರು, ಇನ್ನೂ ಕರಾವಳಿ ಭಾಗದಲ್ಲಿ ನಮ್ಮ ಪಕ್ಷಕ್ಕೆ ಉತ್ತಮ ವಾತಾವರಣವಿದ್ದು, ಕನಿಷ್ಠ 10 ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಭವಿಷ್ಯ ನುಡಿದಿದ್ದಾರೆ. ಬಿಜೆಪಿಯ ಹಲವು ನಾಯಕರುಗಳು ಕಾಂಗ್ರೆಸ್ ಸೇರಿದ್ದಾರೆ. ಜನರ ಈ ವಿಶ್ವಾಸ ಉಳಿಸಿಕೊಂಡು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತಂದು ಜನರ ಸೇವೆ ಮಾಡಬೇಕು. ರಾಹುಲ್ ಗಾಂಧಿ ಅವರು ಈ ಭಾಗದಲ್ಲಿ ಪ್ರಚಾರ ಮಾಡಲಿದ್ದಾರೆ ಎಂದು ಹೇಳಿದರು.
ಇನ್ನೂ ಈ ಭಾಗದಲ್ಲಿ ಬಿಜೆಪಿ ಹಿಂದುತ್ವದ ವಿಚಾರದಲ್ಲಿ ಚುನಾವಣೆ ಮಾಡುತ್ತಿದೆ ಇದು ಫಲ ನೀಡುವುದೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಾರಿ ಆ ತಂತ್ರ ಫಲ ನೀಡುವುದಿಲ್ಲ. ಈ ಚುನಾವಣೆ ಭಾವನೆ ಹಾಗೂ ಬದುಕಿನ ನಡುವಣ ಚುನಾವಣೆ. ಬಿಜೆಪಿ ಭಾವನೆಗಳ ಮೇಲೆ ಚುನಾವಣೆ ಮಾಡಿದರೆ, ನಾವು ಬದುಕಿನ ಮೇಲೆ ಚುನಾವಣೆ ಮಾಡುತ್ತೇವೆ. ಅವರು ಭ್ರಷ್ಟಾಚಾರ ನಿರ್ಮೂಲನೆಗೆ ನಾವು ಪಣ ತೊಟ್ಟಿದ್ದೇವೆ ಎಂದು ತಿಳಿಸಿದರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…