Featured

ಉಡುಪಿ : ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದಂತಹ ಮತದಾರರೆ  ಗ್ಯಾರೆಂಟಿಯ ಬಗ್ಗೆ ಮಾತನಾಡುತ್ತಿಲ್ಲ , ಬಿಜೆಪಿಯವರಿಗೆ ಗ್ಯಾರಂಟಿಯ ಬಗ್ಗೆ ಯೋಚನೆ : ರಮೇಶ್ ಕಾಂಚನ್ – Vishwanews24

ಉಡುಪಿ : ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದಂತಹ ಮತದಾರರೆ  ಗ್ಯಾರೆಂಟಿಯ ಬಗ್ಗೆ ಮಾತನಾಡುತ್ತಿಲ್ಲ ..

ಬಿಜೆಪಿ ನಾಯಕರುಗಳು ನಿದ್ದೆಯಲ್ಲಿ ಕೂಡ ನಮ್ಮ ಗ್ಯಾರಂಟಿಯ ಬಗ್ಗೆ ಕನವರಿಸುತ್ತಾ ಇರುತ್ತಾರೆ: ರಮೇಶ್ ಕಾಂಚನ್

ಉಡುಪಿ: ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದಂತಹ ಮತದಾರರೆ ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯಲ್ಲಿ ನೀಡಿದ ಗ್ಯಾರೆಂಟಿಯ ಬಗ್ಗೆ ಮಾತನಾಡುತ್ತಿಲ್ಲ ಏಕೆಂದರೆ ಅವರಿಗೆ ಕಾಂಗ್ರೆಸ್ ಪಕ್ಷವು ನೀಡಿದ ಭರವಸೆ ಹಾಗೂ ಗ್ಯಾರಂಟಿಯನ್ನು ಖಂಡಿತವಾಗಿಯೂ ನೀಡುತ್ತಾರೆ ಎಂಬ ನಂಬಿಕೆ ಇದೆ. ಆದರೆ ಈ ಲಂಚಕೋರ ಹಾಗೂ ಸುಳ್ಳುಗಳ ಭರವಸೆಯನ್ನು ನೀಡಿದಂತಹ ಬಿಜೆಪಿಯವರಿಗೆ ಕಾಂಗ್ರೆಸ್ ಪಕ್ಷ ನೀಡಿದ ಗ್ಯಾರಂಟಿಯ ಬಗ್ಗೆ ಯೋಚನೆ ಆಗಿದೆ ಏಕೆಂದರೆ ನಾವು ಈ ಗ್ಯಾರೆಂಟಿಯನ್ನು ಅನುಷ್ಠಾನಕ್ಕೆ ತಂದಾಗ ರಾಜ್ಯದಲ್ಲಿ ಬಿಜೆಪಿ ಕಣ್ಮರೆಯಾಗೋದು ಸಹಜ ಅದಕ್ಕಾಗಿ ಈ ಬಿಜೆಪಿ ನಾಯಕರುಗಳು ನಿದ್ದೆಯಲ್ಲಿ ಕೂಡ ನಮ್ಮ ಗ್ಯಾರಂಟಿ ಯ ಬಗ್ಗೆ ಕನವರಿಸುತ್ತಾ ಇರುತ್ತಾರೆ ಎಂದು ರಮೇಶ್ ಕಾಂಚನ್ ಅವರು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು ತಾವು ಅಧಿಕಾರಕ್ಕೆ ಬರುವ ಮೊದಲು ವಿದೇಶಿ ಬ್ಯಾಂಕುಗಳಲ್ಲಿ ಲಕ್ಷಾಂತರ ಕೋಟಿ ರೂಪಾಯಿ ಕಪ್ಪು ಹಣ ನಮ್ಮ ಭಾರತೀಯರಿಗೆ ಸೇರಿದ್ದು ಅದನ್ನು ಕೇವಲ 100 ದಿನದಲ್ಲಿ ವಾಪಸ್ ತಂದು ದೇಶದ ಪ್ರತಿಯೊಬ್ಬ ಭಾರತೀಯನ ಖಾತೆಗೆ 15 ಲಕ್ಷ ರೂಪಾಯಿ ಹಾಕುತ್ತೇನೆ, ಯುವಕರಿಗೆ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ, 2022ರ ಒಳಗೆ ಪ್ರತಿ ಒಬ್ಬ ಭಾರತೀಯನಿಗೆ ಮನೆ ನಿರ್ಮಾಣ ಮಾಡುತ್ತೇನೆ ಎಂದು ಹೇಳಿ ಅಧಿಕಾರವನ್ನು ಅನುಭವಿಸುತ್ತ ಇಂದಿಗೆ 108 ತಿಂಗಳು ಕಳೆದರು ಒಂದು ಭರವಸೆಯನ್ನು ಕೂಡ ಯಾವುದೇ ಭಾರತೀಯನಿಗೆ ತಲುಪಿಸಲಿಲ್ಲ ಎಂಬುದು ಬಿಜೆಪಿಯ ನಾಯಕರಿಗೆ ತಿಳಿದಿರಲಿ. ಸುಳ್ಳು ಹೇಳಿ ಜನಸಾಮಾನ್ಯರನ್ನು ಲೂಟಿ ಮಾಡುವುದೇ ಬಿಜೆಪಿಯ ನಾಯಕರುಗಳ ಕಾಯಕವಾದರೆ ಕೊಟ್ಟ ಭರವಸೆ ಹಾಗೂ ಗ್ಯಾರಂಟಿಯನ್ನು ನೀಡಿ ಜನಸಾಮಾನ್ಯರನ್ನು ಉದ್ದಾರ ಮಾಡುವುದೇ ಕಾಂಗ್ರೆಸ್ ಪಕ್ಷದ ಕೆಲಸವಾಗಿದೆ. ಈ ಹಿಂದೆಯೂ ಕೂಡ ನುಡಿದಂತೆ ನಡೆದಿದ್ದೇವೆ ಮುಂದೆಯೂ ನುಡಿದಂತೆಯೇ ನಡೆಯುತ್ತೇವೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಬಿಜೆಪಿಯ ನಾಯಕರಿಗೆ ತಿರುಗೇಟು ನೀಡಿದ್ದಾರೆ.

Vishwa News 24

Recent Posts

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

44 minutes ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 hour ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

2 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

3 hours ago

ದ್ವೇಷ ಭಾಷಣ ಮಾಡಿರುವ ಸಿ.ಟಿ.ರವಿಯನ್ನು ಕೂಡಲೇ ಬಂಧಿಸಿ: ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟ ಆಗ್ರಹ – vishwanews24

ದ್ವೇಷ ಭಾಷಣ ಮಾಡಿರುವ ಸಿ.ಟಿ.ರವಿಯನ್ನು ಕೂಡಲೇ ಬಂಧಿಸಿ: ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟ ಆಗ್ರಹ ಮಂಗಳೂರು: ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದನ್ನೇ ರಾಜಕೀಯ…

3 hours ago

ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ: ಸಿ.ಟಿ.ರವಿ ವಿರುದ್ಧ FIR – vishwanews24

ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ: ಸಿ.ಟಿ.ರವಿ ವಿರುದ್ಧ FIR ಚಿಕ್ಕಮಗಳೂರು: ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪಕ್ಕೆ…

3 hours ago