ಉಡುಪಿ: ಕೊರಗ ಸಮುದಾಯದವರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿ, ದೌರ್ಜನ್ಯಕ್ಕೊಳಗಾದವರ ವಿರುದ್ಧವೇ ಸುಳ್ಳು ಎಫ್ಐಆರ್ ದಾಖಲಿಸಿರುವುದನ್ನು ಖಂಡಿಸಿ ನಡೆದ ಕಾಂಗ್ರೆಸ್ ಪಕ್ಷದ ಪ್ರತಿಭಟನೆಯಲ್ಲಿ ಪಾಲ್ಗೊಂಡವರ ವಿರುದ್ದ ಕೇಸು ದಾಖಲಿಸಿರುವುದನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಖಂಡಿಸಿದ್ದಾರೆ.
ದೇಶದ ಮೂಲ ನಿವಾಸಿಗಳಾದ ಕೊರಗರಿಗೆ ನ್ಯಾಯ ಒದಗಿಸುವಂತೆ, ಜಿಲ್ಲಾ ಕಾಂಗ್ರೆಸ್ ವತಿಯಿಂದ ಸರಕಾರದ ಕೋವಿಡ್ ನಿಯಮಾವಳಿಗಳನ್ನು ಪಾಲಿಸಿ ನಡೆಸಿದ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ ಕಾಂಗ್ರೆಸ್ ನಾಯಕರ ಸಹಿತ 22 ಜನರ ವಿರುದ್ಧ ಜಿಲ್ಲಾಡಳಿತ ಸುಳ್ಳು ಪ್ರಕರಣ ದಾಖಲಿಸಿದೆ. ಆದರೆ ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಪಕ್ಷದಿಂದ ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ಅನೇಕ ಕಾರ್ಯಕ್ರಮಗಳು ನಡೆಯುತ್ತಿದ್ದರೂ, ಅವರ ಮೇಲೆ ಯಾವುದೇ ಕೇಸನ್ನು ದಾಖಲಿಸಿಲ್ಲ. ಸಮಾಜದಲ್ಲಿ ತುಳಿತಕ್ಕೆ ಒಳಗಾದ ಜನಾಂಗದ ಪರವಾಗಿ ಮಾಡಿದ ಪ್ರತಿಭಟನೆಗೆ ಮಾತ್ರ ಕೇಸನ್ನು ದಾಖಲಿಸಿದ್ದಾರೆ. ಆಡಳಿತ ನಡೆಸುವ ಬಿಜೆಪಿ ಪಕ್ಷ ನಡೆಸುವ ಕಾರ್ಯಕ್ರಮಕ್ಕೆ ಯಾವುದೇ ರೀತಿಯಲ್ಲಿ ಕೇಸು ದಾಖಲಿಸದೆ ಕಣ್ಣು ಮುಚ್ಚಿ ಕುಳಿತ ಜಿಲ್ಲಾಡಳಿತದ ದ್ವಂದ್ವ ನಿಲುವನ್ನು ಖಂಡಿಸುವುದಾಗಿ ಕಾಂಚನ್ ಹೇಳಿದ್ದಾರೆ.
ಹಾಗಾದರೆ ನೊಂದ ಶೋಷಿತ ಸಮುದಾಯದ ಪರವಾಗಿ ಧ್ವನಿ ಎತ್ತುವುದು ತಪ್ಪೇ? ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಸರಕಾರ ಉತ್ತರಿಸಲಿ ಎಂದು ಕಾಂಚನ್ ಒತ್ತಾಯಿಸಿದ್ದಾರೆ. ಇಂತಹ ಬೆದರಿಸುವ ತಂತ್ರಗಳಿಗೆ ಕಾಂಗ್ರೆಸ್ ಎಂದೂ ಮಣಿಯದೆ, ಬಡವರು, ದಲಿತರ ಪರ ತನ್ನ ಹೋರಾಟವನ್ನು ಇನ್ನಷ್ಟು ಬಲಪಡಿಸಲಿದೆ ಎಂದವರು ಸ್ಪಷ್ಟಪಡಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…