ಉಡುಪಿ : ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರ ಮಹಿಳೆಯರು ಸ್ವಾಭಿಮಾನದ ಬದುಕಿಗೆ ಬೇಕಾದ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸುತ್ತಿದೆ. ಆದರೆ ಕೇಂದ್ರ ಸರಕಾರ ಕಳೆದ 10 ವರ್ಷಗಳಿಂದ ಅಚ್ಚೆದಿನ್ ಎನ್ನುತ್ತಲೇ ಇದ್ದು, ಅದೆಲ್ಲೂ ಕಣ್ಣಿಗೆ ಕಾಣಿಸುತ್ತಿಲ್ಲ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಹೇಳಿದ್ದಾರೆ.
ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಶುಕ್ರವಾರ ಹಮ್ಮಿಕೊಳ್ಳಲಾದ ‘ಗಾಂಧಿ ಭಾರತ ಮಹಿಳಾ ಸಮಾವೇಶ’ವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ರಾಜ್ಯ ಕಾಂಗ್ರೆಸ್ ಸರಕಾರ ಮಹಿಳೆಯರ ಸಾಮಾಜಿಕ, ಆರ್ಥಿಕ ಸ್ವಾವಲಂಬನೆಯ ಬದುಕಿಗಾಗಿ ಗ್ಯಾರಂಟಿ ನೀಡಿದೆ. ಕೇಂದ್ರ ಸರಕಾರ ಬೆಲೆ ಏರಿಕೆ ಮೂಲಕ ಬಡವರ, ಮಧ್ಯಮ ವರ್ಗ ಹಾಗೂ ಮಹಿಳೆಯರ ಬದುಕು ದುಸ್ತರಗೊಳಿಸಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಹಿಂದೆ ಬ್ರಿಟಿಷರು ದೇಶದಲ್ಲಿ ಯಾವ ರೀತಿ ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದ್ದರೋ ಅದೇ ಮಾದರಿಯ ಆಡಳಿತವನ್ನು ಬಿಜೆಪಿ ಇಂದು ಅನುಸರಿಸುತ್ತಿದೆ. ಜಾತಿ, ಧರ್ಮಗಳ ಹೆಸರಿನಲ್ಲಿ ಸಮಾಜ ವನ್ನು ಒಡೆದು ಆಳುವ ನೀತಿ ಅನುಸರಿಸುವ ಜತೆಗೆ ಜಾತಿ, ಧರ್ಮದ ವಿಷಬೀಜ ಬಿತ್ತಿ ದೇಶವನ್ನು ಹಾಳು ಮಾಡುತ್ತಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಎಲ್ಲರಿಗೂ ತಲುಪಿಸುವ ಜತೆಗೆ ಗ್ರಾಮ ಮಟ್ಟದಲ್ಲಿ ಪಕ್ಷಕ್ಕೆ ಹೆಚ್ಚೆಚ್ಚು ಮಹಿಳೆಯರನ್ನು ನೋಂದಾಯಿಸುವ ಕಾರ್ಯ ಆಗಬೇಕು. ಶೀಘ್ರವೇ ಜಿಪಂ, ತಾಪಂ ಚುನಾವಣೆಗಳು ಬರಲಿರುವುದರಿಂದ ಪಕ್ಷವನ್ನು ಈಗಿ ನಿಂದಲೇ ಸಜ್ಜುಗೊಳಿಸಬೇಕು ಎಂದು ಮಹಿಳಾ ಕಾರ್ಯಕರ್ತರಿಗೆ ಸಲಹೆ ನೀಡಿದರು.
ಗ್ಯಾರಂಟಿ ಸಮಿತಿ ಸೇರಿದಂತೆ ವಿವಿಧ ದೇವಸ್ಥಾನಗಳ ವ್ಯವಸ್ಥಾಪನ ಸಮಿತಿಗೆ ಆಯ್ಕೆಯಾದ ಮಹಿಳೆ ಯರನ್ನು ಗೌರವಿಸಲಾಯಿತು. ಸಾಧಕರಿಗೆ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ವರಂಗದ ಎಂ.ಡಿ. ಅಧಿಕಾರಿ ಮತ್ತು ಕಮಲಾ ಅಧಿಕಾರಿ ಹಾಗೂ ಉಮಾಬಾ ಕುಂದಾಪುರ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಲಾಯಿತು.
ಸಭೆಯಲ್ಲಿ ಕಾಂಗ್ರೆಸ್ ಮುಖಂಡರಾದ ಪ್ರಸಾದ್ರಾಜ್ ಕಾಂಚನ್, ಎಂ.ಎ.ಗಫೂರ್, ಮುನಿಯಾಲು ಉದಯಕುಮಾರ್ ಶೆಟ್ಟಿ, ರಮೇಶ್ ಕಾಂಚನ್, ನೀರೆ ಕೃಷ್ಣ ಶೆಟ್ಟಿ, ವೆರೊನಿಕಾ ಕರ್ನೆಲಿಯೋ, ಜ್ಯೋತಿ ಹೆಬ್ಬಾರ್, ವಿಲಿಯಂ ಮಾರ್ಟಿಸ್, ರಾಘವೇಂದ್ರ ಶೆಟ್ಟಿ, ಗೋಪೀನಾಥ ಭಟ್, ದಿನೇಶ್ ಹೆಗ್ಡೆ ಮೊಳಹಳ್ಳಿ, ಚಂದ್ರಕಲಾ, ಕುಶಾಲ ಶೆಟ್ಟಿ, ಅಣ್ಣಯ್ಯ ಸೇರಿಗಾರ್, ಹರೀಶ್ ಕಿಣಿ, ಮೀನಾಕ್ಷಿ ಮಾಧವ ಬನ್ನಂಜೆ, ಮಮತಾ ಶೆಟ್ಟಿ, ರೇಖಾ, ಶಾಂತಲತಾ ಶೆಟ್ಟಿ ಮೊದಲಾದವರು ಉಪಸ್ಥಿರಿದ್ದರು.
ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಲೆ ಸ್ವಾಗತಿಸಿ ಪ್ರಸ್ತಾವನೆಗೈದರು. ಡಾ. ಸುನಿತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…