ಉಡುಪಿ : ಕಾಂಗ್ರೆಸ್‌ ಮುಖಂಡರ ನಾಯಕತ್ವದಲ್ಲಿ ಬಿಜೆಪಿಯ ಪತನ ಆರಂಭ : ರಮೇಶ್ ಕಾಂಚನ್ – Vishwanews24

Featured, ಉಡುಪಿ

ಬಿಜೆಪಿ ಒಂದು ರಾಜ್ಯದಲ್ಲಿ ಗೆದ್ದಿರುವುದನ್ನೇ ಸಂಭ್ರಮಿಸಿ ಎರಡು ಕಡೆ ಸೋತಿರುವುದನ್ನು ಮರೆಮಾಚಲಾಗುತ್ತಿದೆ  

ಕರ್ನಾಟಕದಲ್ಲಿ ಮತ್ತೆ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಶತಸಿದ್ಧ..

ಕಾಂಗ್ರೆಸ್ ಮುಕ್ತ ಭಾರತ ಮಾಡಲು ಅಸಾಧ್ಯ ಎಂದು ಜನರು ಸ್ಪಷ್ಟ ಸಂದೇಶ ನೀಡಿದ್ದಾರೆ..

ಉಡುಪಿ: ಗುಜರಾತ್‌ನಲ್ಲಿ ಬಿಜೆಪಿ ಮತ್ತೆ ಅಧಿಕಾರವನ್ನು ಉಳಿಸಿಕೊಂಡಿರುವುದನ್ನೇ ದೊಡ್ಡ ಸಾಧನೆ ಎಂಬಂತೆ ಬಿಂಬಿಸಲಾಗುತ್ತಿದೆ. ಇದೇ ಹೊತ್ತಿನಲ್ಲಿ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿದೆ. ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಬಂದಿದೆ. ದೇಶದ ರಾಜಧಾನಿಯಾಗಿರುವ ದೆಹಲಿಯಲ್ಲೇ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿದೆ. ಒಂದು ರಾಜ್ಯದಲ್ಲಿ ಗೆದ್ದಿರುವುದನ್ನೇ ಸಂಭ್ರಮಿಸಿ ಎರಡು ಕಡೆ ಸೋತಿರುವುದನ್ನು ಮರೆಮಾಚಲಾಗುತ್ತಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಹೇಳಿದ್ದಾರೆ

ಕಾಂಗ್ರೆಸ್‌ ಮುಕ್ತ ಭಾರತ ಎಂದು ಹೇಳುತ್ತಿದ್ದ ಬಿಜೆಪಿಗೆ ಇತ್ತೀಚೆಗೆ ನಡೆದ ಹಲವು ಉಪಚುನಾವಣೆಗಳಲ್ಲಿ ಕಾಂಗ್ರೆಸ್‌ ಗೆಲ್ಲುವ ಮೂಲಕ ಕಾಂಗ್ರೆಸ್ ಮುಕ್ತ ಭಾರತ ಮಾಡಲು ಅಸಾಧ್ಯ ಎಂದು ಜನರು ಸ್ಪಷ್ಟ ಸಂದೇಶ ನೀಡಿದ್ದಾರೆ. ಇದೀಗ ಹಿಮಾಚಲ ಪ್ರದೇಶದಲ್ಲಿ ಅಧಿಕಾರ ಹಿಡಿದಿರುವುದು ಕಾಂಗ್ರೆಸ್‌ ಇನ್ನೂ ಒಂದು ಹೆಜ್ಜೆ ಮುಂದೆ ಬಂದಂತಾಗಿದೆ. ಕಾಂಗ್ರೆಸ್‌ ಮುಂದೆ ಇನ್ನಷ್ಟು ಬಲಿಷ್ಠಗೊಳ್ಳಲಿದೆ.

ಸುಳ್ಯ:  ಕಾಂತಾರ ಸಿನಿಮಾಕ್ಕೆ ವೀಕ್ಷಿಸಲು ಬಂದಿದ್ದ ಮುಸ್ಲಿಂ ಜೋಡಿಗೆ ತಂಡದಿಂದ ಹಲ್ಲೆ: ಐವರ ವಿರುದ್ದ ಪ್ರಕರಣ ದಾಖಲು – Vishwanews24

ಇನ್ನು ಗುಜರಾತ್‌ ಫಲಿತಾಂಶವನ್ನು ಕರ್ನಾಟಕದ ಮುಂದಿನ ಚುನಾವಣೆಗೆ ದಿಕ್ಸೂಚಿ ಎನ್ನುವುದು ಸರಿಯಲ್ಲ. ಅದು ದಿಕ್ಸೂಚಿಯಾದರೆ ಹಿಮಾಚಲ ಪ್ರದೇಶ ಯಾಕೆ ದಿಕ್ಸೂಚಿಯಲ್ಲ? ಕರ್ನಾಟಕವು ಭೌಗೋಳಿಕವಾಗಿ ಭಿನ್ನವಾದುದು. ಇಲ್ಲಿನ ಜನಜೀವನ, ಚಿಂತನಕ್ರಮ ಎಲ್ಲವೂ ಭಿನ್ನವಾಗಿದೆ. ಕೇಂದ್ರ ಸರ್ಕಾರದ ಜನವಿರೋಧಿ ನೀತಿಯಿಂದ ಮಾತ್ರವಲ್ಲ, ರಾಜ್ಯ ಸರ್ಕಾರದ ಜನವಿರೋಧಿ ನೀತಿಯಿಂದಲೂ ಜನರು ಬೇಸತ್ತಿದ್ದಾರೆ. ಕರ್ನಾಟಕದಲ್ಲಿ ಮತ್ತೆ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಶತಸಿದ್ಧ. ಬೇರೆ ಯಾವುದೋ ರಾಜ್ಯದ ಚುನಾವಣೆ ಇಲ್ಲಿ ಪ್ರಭಾವ ಬೀರದು.

ಬಂಟ್ವಾಳ : ಇನ್‌ಸ್ಟಾಗ್ರಾಂನಲ್ಲಿ ಪರಿಚಯ – ಬಾಲಕನಿಂದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ , ಪೋಕ್ಸೋ ಪ್ರಕರಣ ದಾಖಲು – Vishwanews24

ಮಲ್ಲಿಕಾರ್ಜುನ್ ಖರ್ಗೆ ಅವರು ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾದ ಮೇಲೆ ಹಾಗೂ ರಾಹುಲ್ ಗಾಂಧಿ ಮತ್ತು ಅನೇಕ ಹಿರಿಯ ಹಾಗೂ ಕಿರಿಯ ಮುಖಂಡರ ಸಾಮೂಹಿಕ ನಾಯಕತ್ವದಲ್ಲಿ ಬಿಜೆಪಿಯ ಪತನ ಆರಂಭಗೊಂಡಿದೆ. ಇದು ಇನ್ನೂ ಮುಂದುವರಿಯಲಿದೆ ಎಂದು ರಮೇಶ್ ಕಾಂಚನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply