ಉಡುಪಿ: ಗುಜರಾತ್ನಲ್ಲಿ ಬಿಜೆಪಿ ಮತ್ತೆ ಅಧಿಕಾರವನ್ನು ಉಳಿಸಿಕೊಂಡಿರುವುದನ್ನೇ ದೊಡ್ಡ ಸಾಧನೆ ಎಂಬಂತೆ ಬಿಂಬಿಸಲಾಗುತ್ತಿದೆ. ಇದೇ ಹೊತ್ತಿನಲ್ಲಿ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿದೆ. ಕಾಂಗ್ರೆಸ್ಗೆ ಸ್ಪಷ್ಟ ಬಹುಮತ ಬಂದಿದೆ. ದೇಶದ ರಾಜಧಾನಿಯಾಗಿರುವ ದೆಹಲಿಯಲ್ಲೇ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿದೆ. ಒಂದು ರಾಜ್ಯದಲ್ಲಿ ಗೆದ್ದಿರುವುದನ್ನೇ ಸಂಭ್ರಮಿಸಿ ಎರಡು ಕಡೆ ಸೋತಿರುವುದನ್ನು ಮರೆಮಾಚಲಾಗುತ್ತಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಹೇಳಿದ್ದಾರೆ
ಕಾಂಗ್ರೆಸ್ ಮುಕ್ತ ಭಾರತ ಎಂದು ಹೇಳುತ್ತಿದ್ದ ಬಿಜೆಪಿಗೆ ಇತ್ತೀಚೆಗೆ ನಡೆದ ಹಲವು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲ್ಲುವ ಮೂಲಕ ಕಾಂಗ್ರೆಸ್ ಮುಕ್ತ ಭಾರತ ಮಾಡಲು ಅಸಾಧ್ಯ ಎಂದು ಜನರು ಸ್ಪಷ್ಟ ಸಂದೇಶ ನೀಡಿದ್ದಾರೆ. ಇದೀಗ ಹಿಮಾಚಲ ಪ್ರದೇಶದಲ್ಲಿ ಅಧಿಕಾರ ಹಿಡಿದಿರುವುದು ಕಾಂಗ್ರೆಸ್ ಇನ್ನೂ ಒಂದು ಹೆಜ್ಜೆ ಮುಂದೆ ಬಂದಂತಾಗಿದೆ. ಕಾಂಗ್ರೆಸ್ ಮುಂದೆ ಇನ್ನಷ್ಟು ಬಲಿಷ್ಠಗೊಳ್ಳಲಿದೆ.
ಇನ್ನು ಗುಜರಾತ್ ಫಲಿತಾಂಶವನ್ನು ಕರ್ನಾಟಕದ ಮುಂದಿನ ಚುನಾವಣೆಗೆ ದಿಕ್ಸೂಚಿ ಎನ್ನುವುದು ಸರಿಯಲ್ಲ. ಅದು ದಿಕ್ಸೂಚಿಯಾದರೆ ಹಿಮಾಚಲ ಪ್ರದೇಶ ಯಾಕೆ ದಿಕ್ಸೂಚಿಯಲ್ಲ? ಕರ್ನಾಟಕವು ಭೌಗೋಳಿಕವಾಗಿ ಭಿನ್ನವಾದುದು. ಇಲ್ಲಿನ ಜನಜೀವನ, ಚಿಂತನಕ್ರಮ ಎಲ್ಲವೂ ಭಿನ್ನವಾಗಿದೆ. ಕೇಂದ್ರ ಸರ್ಕಾರದ ಜನವಿರೋಧಿ ನೀತಿಯಿಂದ ಮಾತ್ರವಲ್ಲ, ರಾಜ್ಯ ಸರ್ಕಾರದ ಜನವಿರೋಧಿ ನೀತಿಯಿಂದಲೂ ಜನರು ಬೇಸತ್ತಿದ್ದಾರೆ. ಕರ್ನಾಟಕದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಶತಸಿದ್ಧ. ಬೇರೆ ಯಾವುದೋ ರಾಜ್ಯದ ಚುನಾವಣೆ ಇಲ್ಲಿ ಪ್ರಭಾವ ಬೀರದು.
ಮಲ್ಲಿಕಾರ್ಜುನ್ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮೇಲೆ ಹಾಗೂ ರಾಹುಲ್ ಗಾಂಧಿ ಮತ್ತು ಅನೇಕ ಹಿರಿಯ ಹಾಗೂ ಕಿರಿಯ ಮುಖಂಡರ ಸಾಮೂಹಿಕ ನಾಯಕತ್ವದಲ್ಲಿ ಬಿಜೆಪಿಯ ಪತನ ಆರಂಭಗೊಂಡಿದೆ. ಇದು ಇನ್ನೂ ಮುಂದುವರಿಯಲಿದೆ ಎಂದು ರಮೇಶ್ ಕಾಂಚನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…