ಉಡುಪಿ: ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯದಿಂದಾಗಿ ಜನ ಸಾಮಾನ್ಯರ ಗೋಳು ಕೇಳುವವರಿಲ್ಲ ವಾಗಿದೆ. ಉಡುಪಿ ಜಿಲ್ಲೆಯಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳಿಗೆ ತುರ್ತು ಸ್ಪಂದನೆ ನೀಡಬೇಕು. ಇಲ್ಲದಿದ್ದರೆ ಮುಂದಿನ ತಿಂಗಳು ಬಿಜೆಪಿಯಿಂದ ತೀವ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದ್ದಾರೆ.
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,2021ರಲ್ಲೇ ಪ್ರಾರಂಭಗೊಂಡ ಉಡುಪಿ ಜಿಲ್ಲಾಸ್ಪತ್ರೆ ಕಾಮಗಾರಿ ಮೂರು ವರ್ಷಗಳ ಹಿಂದೆಯೇ ಶೇ.90ರಷ್ಟು ಪೂರ್ಣಗೊಂಡಿತ್ತು. ಬಳಿಕ ಕುಂಟುತ್ತಾ ಸಾಗಿರುವ ಬಾಕಿ ಉಳಿದಿರುವ ಕಾಮಗಾರಿಯನ್ನು ಪೂರ್ಣಗೊಳಿಸಿ ಶೀಘ್ರ ಲೋಕಾರ್ಪಣೆಗೊಳಿಸುವ ಮೂಲಕ ಜನರ ಸೇವೆಗೆ ಲಭಿಸುವಂತಾಗ ಬೇಕು ಎಂದವರು ತಿಳಿಸಿದರು.
ಇದನ್ನೂ ಓದಿ :
ಸಾಮಾಜಿಕ ಭದ್ರತಾ ಯೋಜನೆಗಳಡಿ ನೀಡಲಾಗುತ್ತಿರುವ ಮಾಸಾಶನಕ್ಕೆ ಕುಟುಂಬದ ವಾರ್ಷಿಕ ಆದಾಯ ಮಿತಿ ಕೇವಲ 32,000ರೂ. ಎಂದು ನಿಗದಿ ಪಡಿಸಿರುವುದು ಸಂಪೂರ್ಣ ಅವೈಜ್ಞಾನಿಕ ಹಾಗೂ ಬಡವರ ವಿರೋಧಿ ನಿರ್ಧಾರವಾಗಿದ್ದು, ಇದರಿಂದ ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯದ ಲಕ್ಷಾಂತರ ಅರ್ಹ ಫಲಾನುಭವಿಗಳು ಯೋಜನೆಯ ಲಾಭದಿಂದ ವಂಚಿತರಾಗುತ್ತಿದ್ದಾರೆ. ಆದ್ದರಿಂದ ಆದಾಯ ಮಿತಿಯನ್ನು 1,20,000ರೂ.ಗಳಿಗೆ ಹೆಚ್ಚಿಸುವಂತೆ ಅವರು ಒತ್ತಾಯಿಸಿದರು.
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕಳೆದ ಮೂರು ವರ್ಷಗಳಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕೊರತೆಯ ನೆಪವೊಡ್ಡಿ ಜನ ಸಾಮಾನ್ಯರು ಸೇವೆ ಪಡೆಯಲು ಅಸಹಾಯಕರಾಗಿ ತಿಂಗಳು ಗಟ್ಟಲೆ ಅಲೆದಾಡುವ ಪರಿಸ್ಥಿತಿ ನಿತ್ಯ ನಿರಂತರವಾಗಿದೆ. ಸರಕಾರಕ್ಕೆ ಎಷ್ಟೇ ಮನವಿ ಸಲ್ಲಿಸಿದರೂ ಯಾವುದೇ ಪರಿಹಾರ ಕಂಡುಬಂದಿಲ್ಲ ಎಂದು ಆರೋಪಿಸಿದರು.
ಇದನ್ನೂ ಓದಿ :
ಬಡ ನಿವೇಶನ ರಹಿತರಿಗೆ ಜಿಲ್ಲಾಧಿಕಾರಿ ಹಕ್ಕುಪತ್ರ ನೀಡಿ ನಿವೇಶನ ಒದಗಿಸಿದ ಕುಟುಂಬಗಳಿಗೆ ಮನೆ ನಿರ್ಮಾಣ ಮಾಡಲು ಪರವಾನಿಗೆ ಲಭಿಸುತ್ತಿಲ್ಲ. 94ಸಿಸಿ ಕಾನೂನಿನಡಿ ಸರಕಾರದಿಂದ ಒಂದೆರಡು ಸೆನ್ಸ್ ಭೂಮಿ ಪಡೆದ ಬಡ ಕುಟುಂಬಗಳಿಗೂ ಮನೆ ನಿರ್ಮಾಣದ ಪರವಾನಿಗೆ ಲಭಿಸುತ್ತಿಲ್ಲ. ಇವುಗಳನ್ನು ಕೂಡಲೇ ಸರಿಪಡಿಸಬೇಕು ಎಂದವರು ಒತ್ತಾಯಿಸಿದರು.
ಈ ಎಲ್ಲಾ ಜ್ವಲಂತ ಸಮಸ್ಯೆಗಳಿಗೆ ಆದ್ಯತೆ ಮೇರೆಗೆ ತುರ್ತು ಪರಿಹಾರ ದೊರೆಯದೇ ಇದ್ದಲ್ಲಿ ಜಿಲ್ಲೆಯ ಸಂಸದರು, ಶಾಸಕರು, ಜನಪ್ರತಿನಿಧಿಗಳು ಹಾಗೂ ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರನ್ನು ಒಗ್ಗೂ ಡಿಸಿ ರಾಜ್ಯ ಸರಕಾರದ ವಿರುದ್ಧ ತೀವ್ರ ಸಂಘಟಿತ ಹೋರಾಟ ರೂಪಿಸಲಾಗುವುದು ಎಂದು ಕುತ್ಯಾರು ನವೀನ್ ಶೆಟ್ಟಿ ಮತ್ತು ಶಾಸಕ ಯಶ್ಪಾಲ್ ಎ. ಸುವರ್ಣ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ದಿವಾಕರ ಶೆಟ್ಟಿ ಕಲ್ಯಾ, ಜಿಲ್ಲಾ ಕಾರ್ಯದರ್ಶಿಗಳಾದ ಶಿವಕುಮಾರ ಅಂಬಲಪಾಡಿ ಮತ್ತು ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಉಪಸ್ಥಿತರಿದ್ದರು.
ಇದನ್ನೂ ಓದಿ :
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…