Featured

ಉಡುಪಿ : ಕಾಂಗ್ರೆಸ್ ಸರಕಾರದ “ಗೋಕಳ್ಳರಿಗೆ ಸಹಕರಿಸುವ’ ನೀತಿಗೆ ವಿಶ್ವ ಹಿಂದೂ ಪರಿಷದ್ ಆಕ್ರೋಶ – vishwanews24

ಉಡುಪಿ : ಕಾಂಗ್ರೆಸ್ ಸರಕಾರದ “ಗೋಕಳ್ಳರಿಗೆ ಸಹಕರಿಸುವ’ ನೀತಿಗೆ ವಿಶ್ವ ಹಿಂದೂ ಪರಿಷದ್ ಆಕ್ರೋಶ

ಉಡುಪಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಸರಕಾರ ಬಂದಾಗಿನಿಂದ ಒಂದಲ್ಲ ಒಂದು ರೀತಿಯಲ್ಲಿ ಹಿಂದೂ ಸಮಾಜಕ್ಕೆ ತೀವ್ರ ರೀತಿಯ ಕಿರುಕುಳ ಕೊಡುತ್ತ ಬಂದಿದ್ದು ಅದರ ಮುಂದುವರಿದ ಭಾಗವಾಗಿ ಇದೇ ತಿಂಗಳ 8ನೇ ತಾರೀಕಿಗೆ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಹಿಂದೂ ಸಮಾಜಕ್ಕೆ ಅತ್ಯಂತ ಪೂಜನೀಯವಾದ ಗೋವಂಶವನ್ನು ಹಿಂಸಾತ್ಮಕವಾಗಿ ಕಳ್ಳಸಾಗಾಟ ಮಾಡುವಾಗ ಪೊಲೀಸರು ವಶಪಡಿಸಿದ ಸಾಗಾಟ ವಾಹನಗಳನ್ನು ಸುಲಭದಲ್ಲಿ ಹಿಂತಿರುಗಿಸುವಂತೆ ಮಾಡಲು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆ. 2020ನ್ನು ಸಡಿಲುಗೊಳಿಸಿ ತಿದ್ದುಪಡಿ ತರಲು ಕ್ಯಾಬಿನೆಟ್ ಸಭೆಯಲ್ಲಿ ಪಾಸ್ ಮಾಡಿದೆ ಎಂದು ಮಾಧ್ಯಮಗಳ ವರದಿ ಮೂಲಕ ತಿಳಿದುಬಂದಿದ್ದು ಗೋವುಗಳಿಗೆ ಹಿಂಸೆ ಹೆಚ್ಚಾಗುವ ಸಾಧ್ಯತೆ ಇರುವ ಈ ತಿದ್ದುಪಡಿಯನ್ನು ವಿಶ್ವ ಹಿಂದು ಪರಿಷದ್ ಹಿಂದು ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತ ಪಡಿಸುತಿದ್ದು ತಿದ್ದುಪಡಿಯನ್ನು ತಕ್ಷಣ ಹಿಂದಕ್ಕೆ ಪಡೆಯ ಬೇಕೆಂದು ಕರ್ನಾಟಕ ದಕ್ಷಿಣ ಪ್ರಾಂತ್ಯದ ಗೋ ರಕ್ಷಾ ಪ್ರಮುಖರಾದ ಸುನೀಲ್ ಕೆ.ಆರ್ ಆಗ್ರಹಿಸಿದರು.

ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕಾಯಿದೆ ಯ ಸೆಕ್ಷನ್ 8ರ ಪ್ರಕಾರ ಪ್ರಸ್ತುತ ಅಕ್ರಮ ಗೋಸಾಗಾಟದ ವಾಹನವನ್ನು ಪೊಲೀಸರು ವಶಪಡಿಸಿದಾಗ ವಾಹನದ ಮೌಲ್ಯದಷ್ಟು ಬ್ಯಾಂಕ್ ಗ್ಯಾರಂಟಿಯನ್ನು ಕೊಟ್ಟೇ ತಾತ್ಕಾಲಿಕವಾಗಿ ಹಿಂಪಡೆಯಲು ಅವಕಾಶವಿದೆ. ಅಂದರೆ ಈಗ ವಶಪಡಿಸಿದ ವಾಹನದ ಮಾರುಕಟ್ಟೆ ಮೌಲ್ಯವು ರೂಪಾಯಿ 5 ಲಕ್ಷ ಇದ್ದರೆ ರೂಪಾಯಿ 5 ಲಕ್ಷದ ಬ್ಯಾಂಕ್ ಗ್ಯಾರಂಟಿಯನ್ನು ಪ್ರಸ್ತುತಪಡಿಸಿ ವಾಹನವನ್ನು ತಾತ್ಕಾಲಿಕವಾಗಿ ಬಿಡುಗಡೆಗೊಳಿಸಲು ಅವಕಾಶವಿದೆ. ಪ್ರಕರಣದ ಅಪರಾಧ ಸಾಬೀತಾದಲ್ಲಿ ವಾಹನವನ್ನು ವಾಪನ್ ತಂದು ಸರಕಾರಕ್ಕೆ ಮುಟ್ಟುಗೋಲು ಹಾಕಬೇಕಾಗುತ್ತದೆ. ಇದಕ್ಕೆ ತಪ್ಪಿದಲ್ಲಿ ಬ್ಯಾಂಕ್ ಗ್ಯಾರಂಟಿಯ ಹಣವನ್ನು ಸರಕಾರಕ್ಕೆ ಮುಟ್ಟುಗೋಲು ಹಾಕಲಾಗುತ್ತದೆ. ಈಗ ಇರುವ ಕಾಯಿದೆ ಸಾಕಷ್ಟು ಪರಿಣಾಮಕಾರಿಯಾಗಿದ್ದು, ಬ್ಯಾಂಕ್ ಗ್ಯಾರಂಟಿ ತೆಗೆದು ಕೊಳ್ಳುವ ಶರತ್ತಿನಿಂದಾಗಿ ಸಾಕಷ್ಟು ಅಕ್ರಮ ಗೋ ಸಾಗಾಟ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದು, ಸಾವಿರಾರು ಗೋವಂಶಗಳ ರಕ್ಷಣೆಗೆ ಕಾರಣವಾಗಿದೆ.

ಇದರಲ್ಲಿ ಗೋ ಕಳ್ಳ ಸಾಗಾಟಗಾರರಿಗೆ ಬ್ಯಾಂಕ್ ಗ್ಯಾರಂಟಿಯನ್ನು ಕೊಡಲು ಕಷ್ಟವಾಗುತ್ತದೆಎಂಬ ಅಸಂಭದ್ದ ನೆಪ ಒಡ್ಡಿ. ಅಂತಹಆರೋಪಿಗಳ ಮೇಲಿನ ಕನಿಕರದಿಂದ ಕಾಂಗ್ರೆಸ್ ಸರಕಾರವು ಈ ಸೆಕ್ಷನ್ನಲ್ಲಿ ಇರುವ ಬ್ಯಾಂಕ್ ಗ್ಯಾರಂಟಿಯ ಶರತ್ತನ್ನು ಹಿಂಪಡೆದು ಕೇವಲ indemnitybond ಕೊಟ್ಟರೆ ಸಾಕೆಂದು ತಿದ್ದುಪಡಿ ತರುತ್ತಿದೆ. ಸರಕಾರಕ್ಕೆ ಗೋ ಕಳ್ಳ ಸಾಗಾಟಗಾರರ ಮೇಲೆ ಇಷ್ಟೊಂದು ಪ್ರೀತಿ ಯಾಕೆ ? ಇದು ಅಕ್ರಮ ಸಾಗಾಟಗಾರರಿಗೆ ಸರಕಾರವು “ಗೋಕಳ್ಳಸಾಗಣೇದಾರರೊಂದಿಗಿದೆ ನಾವಿದ್ದೇವೆ” ಎಂದು ಪರೋಕ್ಷವಾಗಿ ಸಂದೇಶ ಕೊಡುವ ಉದ್ದೇಶದಂತೆ ಕಾಣುತಿದ್ದು ಇನ್ನಷ್ಟು ಹಿಂಸಾತ್ಮಕ ರೀತಿಯಲ್ಲಿ ಗೋಸಾಗಾಟ ಹೆಚ್ಚಾಗಲಿದ್ದು ತಮಗೆ ಪೂಜನೀಯವಾಗಿರುವ ಗೋವುಗಳಿಗೆ ಹಿಂಸೆ ಆಗುವುದನ್ನು ನೋಡಿದವರ ಧಾರ್ಮಿಕ ಭಾವನೆಗೆ ಧಕ್ಕೆ ಬಂದು ಆಕ್ರೋಶ ಹೆಚ್ಚಿಸಲಿದೆ. ಈ ತಿದ್ದುಪಡಿಯ ಮೂಲಕ ಜನರನ್ನು ಉದ್ವಿಘ್ನಗೊಳಿಸುವಂತೆ ಸರಕಾರವೇ ಪ್ರಚೋದನೆ ನೀಡಿದಂತಾಗಿದೆ. ಸರಕಾರದ ಈ ನಡೆ ಧಾರ್ಮಿಕ ಭಾವನೆಗೆ ಪ್ರಚೋದನೆ ನೀಡುತ್ತಿದೆ. ಈ ತಿದ್ದುಪಡಿಯನ್ನು ತಕ್ಷಣ ಹಿಂದೆ ಪಡೆಯಲು ಒತ್ತಾಯಿಸಿ ವಿವಿಧ ಹಿಂದೂ ಸಂಘಟನೆಗಳ ನೇತ್ರತ್ವದಲ್ಲಿ ಹಿಂದೂ ಸಮಾಜವಿಡೀ ದಿನಾಂಕ 08-12-2025ನೇ ಸೋಮವಾರ ರಾಜ್ಯಾದ್ಯಾಂತ ಎಲ್ಲಾ ಜಿಲ್ಲಾಕೇಂದ್ರಗಳಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

7 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

7 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

7 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

8 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

8 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

9 hours ago