ಕಾನೂನು ಕೈಗೆತ್ತಿಕೊಂಡವರಿಗೆ ಕಠಿಣ ಶಿಕ್ಷೆಯಾಗಬೇಕು : ಯುವ ಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ ಪಿತ್ರೋಡಿ
ಉಡುಪಿ: ಕಾನೂನು ಕೈಗೆತ್ತಿಕೊಂಡವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಯುವ ಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ ಪಿತ್ರೋಡಿ ಆಗ್ರಹಿಸಿದ್ದಾರೆ.
ಬೆಂಗಳೂರಿನ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿಯಲ್ಲಿ ನಡೆದ ಗಲಭೆ, ನೀಚ ಕೃತ್ಯವನ್ನು ಖಂಡಿಸುತ್ತೇನೆ. ಬೆಂಗಳೂರಿನ ಕಾವಲ್ ಸಂದ್ರ ಪೊಲೀಸ್ ವಸತಿಗೃಹದ ಗೇಟ್ ಮುರಿದು ಪೊಲೀಸರ ಮನೆಗಳಿಗೆ ನುಗ್ಗಿ ಮಕ್ಕಳ, ಮಹಿಳೆಯರ ಮೇಲೆ ಹಲ್ಲೆ ಮಾಡಲು ಮುಂದಾದ ಕಿಡಿಗೇಡಿಗಳ ಮೇಲೆ ಕ್ರಮ ಕೈಗೊಂಡು ಕಠಿಣ ಶಿಕ್ಷೆಗೆ ಒಳಪಡಿಸಬೇಕು .ಕೈಯಲ್ಲಿ ಮಾರಕಾಯುಧಗಳನ್ನು ಹಿಡಿದು ಬಂದ ಮತಾಂಧ ಉಗ್ರರು ಪೊಲೀಸರ ವಾಹನಗಳನ್ನು ಪುಡಿ ಮಾಡಿ, ಬೆಂಕಿ ಹಚ್ಚಿ, ಪೊಲೀಸ್ ಠಾಣೆಗಳ ಮೇಲೆ ದಾಳಿ ಮಾಡಿದ್ದು ಅಂತಹ ನೀಚರು ಈ ಭೂಮಿಯ ಮೇಲೆ ಬದುಕುವುದಕ್ಕೆ ಅರ್ಹರಲ್ಲ.
ಈ ಘಟನೆಯಿಂದ ಆದ ಹಾನಿಗಳನ್ನು ಹಾಗೂ ನಷ್ಟಗಳನ್ನು, ಘಟನೆಗೆ ಪ್ರಚೋದನೆ ನೀಡಿದ ಮತ್ತು ಈ ಘಟನೆಯಲ್ಲಿ ಭಾಗಿಯಾದವರಿಂದಲೆ ಬರಿಸುವ ಕೆಲಸ ವನ್ನು ಪೋಲೀಸ್ ಇಲಾಖೆ ಮತ್ತು ಕಾನೂನಿನ ಮೂಲಕ ಮಾಡಬೇಕು. ಆ ಘಟನೆಯನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಿದ ರಾಜ್ಯ ಪೊಲೀಸ್ ಇಲಾಖೆ ಮತ್ತು ರಾಜ್ಯ ಗೃಹ ಸಚಿವರಾದ ಬಸವರಾಜ ಬೊಮ್ಮಯಿರವರು ಹಾಗೂ ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪ ಜೀ ರವರಿಗೆ ಅಭಿನಂದನೆಗಳು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…