ಉಡುಪಿ: ಜಿಲ್ಲೆಯಲ್ಲಿ ಮಣಿಪಾಲ ಪರಿಸರದಲ್ಲಿ ಮಧ್ಯರಾತ್ರಿಯ ನಂತರವೂ ಯಾವುದೇ ಪರವಾನಿಗೆ ಇಲ್ಲದೆ ಪಬ್ಬುಗಳು ಬೇಕಾಬಿಟ್ಟಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕಾನೂನು ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಕ್ಲಬ್, ಪಬ್, ಮಟ್ಕಾದಂಧೆ ನಿಲ್ಲಿಸಲು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯವರನ್ನು ಒತ್ತಾಯಿಸಿದ್ದಾರೆ.
ಉಡುಪಿ ಜಿಲ್ಲೆಯಾದ್ಯಂತ ರಿಕ್ರಿಯೇಷನ್ ಕ್ಲಬ್ನ ಹೆಸರಿನಲ್ಲಿ ಅವ್ಯಹತವಾಗಿ ಇಸ್ಪಿಟ್ ಕ್ಲಬ್ಗಳು ದಿನದ 24 ಗಂಟೆಯೂ ತೆರೆದಿರುವುದು ಜಗತ್ಜಾಹೀರವಾಗಿದ್ದು, ನಮ್ಮ ಗಮನಕ್ಕೆ ಬಂದಿರುತ್ತದೆ. ಅಬಕಾರಿ ಇಲಾಖೆಯ ಸಿಎಲ್ 7 ಮತ್ತು ಸಿಎಲ್ 9 ಬಳಸಿಕೊಂಡು ಪಬ್ಬುಗಳಲ್ಲಿ ಮತ್ತು ಡಿಸ್ಕೋಗಳಲ್ಲಿ ಡಿಜೆ ಮ್ಯೂಸಿಕ್ ಬಳಸಿ ನಡೆಸುತ್ತಿದ್ದು, ಸದ್ರಿ ಚಟುವಟಿಕೆಗಳು ಕಾನೂನು ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಅಬಕಾರಿ ಇಲಾಖೆಯ ಕಾನೂನಿನಂತೆ ಬಾರ್ ಮತ್ತು ರೆಸ್ಟೋರೆಂಟ್ನ ನಿಗದಿತ ಮುಕ್ತಾಯ ಅವಧಿಯ ನಂತರವೂ ಕೆಲವೊಂದು ಬಾರ್ ಮತ್ತು ರೆಸ್ಟೋರೆಂಟ್ಗಳು ತನ್ನ ವ್ಯವಹಾರವನ್ನುಯಾವುದೇ ಅಳುಕು ಇಲ್ಲದೆ ನಡೆಸಿಕೊಂಡು ಬಂದಿರುತ್ತದೆ. ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿರುತ್ತದೆ.
ಮಣಿಪಾಲದ ಡಿಸಿ ಕಛೇರಿ ರಸ್ತೆಯಲ್ಲಿರುವ ಕೆಲವು ರೆಸ್ಟೋರೆಂಟ್ಗಳು ಮುಂಜಾನೆ 3 ಗಂಟೆಯವರೆಗೂತೆರೆದಿರುತ್ತದೆ. ಮಣಿಪಾಲದ ಬಾರ್ ಮತ್ತು ರೆಸ್ಟೋರೆಂಟ್ಗಳು ಹಾಗೂ ಮುಂಜಾನೆವರೆಗೂ ತೆರೆದಿರುವ ರೆಸ್ಟೋರೆಂಟ್ಗಳು ಡ್ರಗ್ಸ್ ಸೇವನೆಯ ಅಡ್ಡೆಯಾಗಿರುತ್ತದೆ. ಮಣಿಪಾಲವು ಡ್ರಗ್ಸ್ ಕೇಂದ್ರವಾಗಿ ಬೆಳೆಯುತ್ತಿರುವುದು ಸ್ಥಳೀಯ ವಿದ್ಯಾರ್ಥಿಗಳು, ಸ್ಥಳೀಯ ಯುವಜನತೆ ಮತ್ತು ಹೊರ ಊರಿನಿಂದ ಮತ್ತು ಹೊರದೇಶಗಳಿಂದ ವಿದ್ಯಾಭ್ಯಾಸಕ್ಕಾಗಿ ಬರುವ ಯುವಜನತೆಯ ಡ್ರಗ್ಸ್ನ ಹಾವಳಿಗೆ ದಾಸರಾಗಿರುತ್ತಾರೆ.
ಆದುದರಿಂದ ಉಡುಪಿ ಮತ್ತು ಮಣಿಪಾಲದಲ್ಲಿ ಕಾನೂನು ಬಾಹಿರವಾಗಿಕಾರ್ಯನಿರ್ವಹಿಸುತ್ತಿರುವ ಪಬ್ಬುಗಳು, ಕ್ಲಬ್ಬುಗಳು ಮತ್ತು ಅವಧಿ ಮೀರಿ ವ್ಯವಹಾರ ನಡೆಸುವ ಬಾರ್ ಮತ್ತು ರೆಸ್ಟೋರೆಂಟ್ ಹಾಗೂ ಮುಂಜಾನೆವರೆಗೂ ತೆರೆದಿರುವ ರೆಸ್ಟೋರೆಂಟ್ನ ವಿರುದ್ಧ ಮತ್ತು ಜಿಲ್ಲೆಯಲ್ಲಿ ನಡೆಯುತ್ತಿರುವ ವ್ಯಾಪಕ ಮಟ್ಕಾದಂಧೆಯನ್ನು ನಿರ್ದ್ಯಾಕ್ಷಿಣ್ಯವಾಗಿ ನಿಲ್ಲಿಸಬೇಕೆಂದು ಎಂದು ಪತ್ರಿಕಾ ಪ್ರಕಟನೆಯ ಮೂಲಕ ಒತ್ತಾಯಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…