ಉಡುಪಿ: ಕಾನೂನು ವಿದ್ಯಾರ್ಥಿಗಳಿಬ್ಬರು ಉಡುಪಿ ನಗರ ಸಂಚಾರ ಠಾಣೆಯ ಎಸ್ಸೈ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಘಟನೆ ಮೇ 16ರಂದು ರಾತ್ರಿ ಕಲ್ಸಂಕ ಸಮೀಪ ನಡೆದಿದೆ.
ಆರೋಪಿಗಳನ್ನು ಶ್ರೀವತ್ಸ ಮತ್ತು ಗಣೇಶ್ ಪೂಜಾರಿ ಎಂದು ಗುರುತಿಸಲಾಗಿದೆ.
ಉಡುಪಿ ನಗರದ ಸಿಟಿ ಬಸ್ ನಿಲ್ದಾಣದ ಕಡೆಯಿಂದ ಕಲ್ಸಂಕ ಕಡೆ ಬೈಕ್ನಲ್ಲಿ ಹೆಲ್ಮೆಟ್ ಧರಿಸದೆ ಮೊಬೈಲ್ನಲ್ಲಿ ಮಾತನಾಡಿಕೊಂಡು ಹೋಗುತ್ತಿದ್ದ ವಿದ್ಯಾರ್ಥಿಯನ್ನು ಉಡುಪಿ ಸಂಚಾರ ಪೊಲೀಸ್ ಠಾಣೆಯ ಎಸ್ಸೈ ಸುದರ್ಶನ್ ದೊಡ್ಡಮನಿ ನಿಲ್ಲಿಸಿ, ದಂಡ ಪಾವತಿಸುವಂತೆ ಸೂಚಿಸಿದರು. ಅದಕ್ಕೆ ಸವಾರ ನೋಟೀಸ್ ನೀಡುವಂತೆ ತಿಳಿಸಿದನು.
ಆಗ ಎಸ್ಸೈ ದಾಖಲಾತಿ ತೋರಿಸಲು ಹೇಳಿದಾಗ ಆತ ನಿರಾಕರಿಸಿದ ಎನ್ನಲಾಗಿದೆ. ಬಳಿಕ ಬುಲೆಟ್ನಲ್ಲಿ ಮತ್ತೊಬ್ಬ ಬಂದು ‘ದಂಡ ಹಾಕುತ್ತೀಯಾ’ ಎಂದು ಏರುಧ್ವನಿಯಲ್ಲಿ ಮಾತಾನಾಡುತ್ತಾ ಮೈಮೇಲೆ ಏರಿಬಂದಿದ್ದು, ಇಬ್ಬರೂ ಸೇರಿ ‘ನಾವು ಕಾನೂನು ವಿದ್ಯಾರ್ಥಿಗಳು ನಮಗೂ ಕಾನೂನು ಗೊತ್ತು’ ಎಂದು ವಿಡಿಯೋ ಮಾಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವುದಾಗಿ ದೂರಲಾಗಿದೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…