ಉಡುಪಿ : ಸಣ್ಣ ಕೈಗಾರಿಕೆಗೆ ಒತ್ತು ಕೊಟ್ಟು ಮನಗೊಬ್ಬರಿಗೆ ಉದ್ಯೋಗ ನೀಡುವ ಯೋಜನೆಯನ್ನು ನೀಡುವ ಮಹದಾಸೆಯನ್ನು ಹೊಂದಿದ್ದೇನೆ ಅಂತಾ ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ.
ಮಣಿಪಾಲ ಟೆಕ್ನಾಲಜಿ ಸಮೂಹ ಸಂಸ್ಥೆಗೆ ಭೇಟಿ ನೀಡಿ ಮತಯಾಚನೆ ಮಾಡಿ ಮಾತಾಡಿದ ಅವರು ಕಾರ್ಮಿಕರೇ ಈ ದೇಶದ ನಿಜವಾದ ಸಂಪತ್ತು. ಇಡೀ ದೇಶದ ಸೆಕ್ಯೂರಿಟಿ ಕೀಲಿ ಇರೋದೇ ಕಾರ್ಮಿಕರ ಕೈಯಲ್ಲಿ. ಮಣಿಪಾಲದ ಗ್ರೂಫ್ ನ ತಾಂತ್ರಿಕ ಸಂಸ್ಥೆ ಗಳು ದೇಶದಲ್ಲಿ ಅಲ್ಲದೇ ಪ್ರಪಂಚದಾದ್ಯಂತ ಸುದ್ಧಿಯಲ್ಲಿದೆ. ಬಹಳಷ್ಟು ಮಂದಿಗೆ ಉದ್ಯೋಗ ವನ್ನು ನೀಡುವ ಕಾರ್ಯವನ್ನು ಮಾಡ್ತಾ ಬಂದಿದೆ.
ಕಾಪು ಕ್ಷೇತ್ರದಲ್ಲಿ ಕೂಡಾ ಮಣಿಪಾಲ ಸಮೂಹ ಸಂಸ್ಥೆ ಯಂತೆಯೇ ಸಣ್ಣ ಕೈಗಾರಿಕೆಯನ್ನು ಹುಟ್ಟು ಹಾಕಿ ಮನೆಗೊಂದು ಮಂದಿಗೆ ಉದ್ಯೋಗ ನೀಡುವ ಬ್ರಹತ್ ಯೋಜನೆಯನ್ನು ಮಾಡುವ ಕಾರ್ಯವನ್ನು ರೂಪಿಸುವ ಮಹದಾಸೆಯನ್ನು ಹೊಂದಿದ್ದೇನೆ. ಕಾಪು ಕ್ಷೇತ್ರಕ್ಕೆ ಐಡೆಂಟಿಟಿ ಇರಲಿಲ್ಲ. ಬೃಹತ್ ಕೈಗಾರಿಕೆಯಿಂದ ಜನಪಲ್ಲಟ ಆಗಿ ಮರುಭೂಮಿ ಆಗಿತ್ತು. ಕಾಪು ತಾಲೂಕನ್ನು, ಪುರಸಭೆಯನ್ನು ಮಾಡಿ ಎಲ್ಲಾ ಸೌಕರ್ಯವನ್ನು ಒದಗಿಸುವ ಕೆಲಸವನ್ನು ಮಾಡಿದ್ದೇನೆ. ಕಾಪುವಿನ ಎಲ್ಲಾ ಗ್ರಾಮಕ್ಕೂ ನೇರ ಸಂಪರ್ಕವನ್ನು ಕೊಡುವ ಯೋಜನೆ ಮುಂದಿನ ದಿನಗಳಲ್ಲಿ ನಡೆಯಲಿದೆ.ಇಂಜಿನಿಯರಿಂಗ್, ಮೆಡಿಕಲ್ ಕಾಲೇಜು ಸ್ಥಾಪನೆ ಮೂಲಕ ಶೈಕ್ಷಣಿಕ ವಾಗಿ ಕಾಪು ಸ್ವಂತ ಕಾಲ ಮೇಲೆ ನಿಲ್ಲುವ ಯೋಜನೆಯನ್ನು ರೂಪಿಸಬೇಕಾಗಿದೆ ಅಂತಾ ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
ಮಣಿಪಾಲ ಸಮೂಹ ಸಂಸ್ಥೆಯ ಯುನಿಟ್ 4 ನ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಶ್ರೀನಿವಾಸ, ನಿರ್ವಹಣಾ ವಿಭಾಗದ ವ್ಯವಸ್ಥಾಪಕ ಸತೀಶ್ ಪ್ರಭು, ಕಾಂಗ್ರೆಸ್ ಮುಖಂಡರಾದ ಸಂತೋಷ್ ಕುಮಾರ್ ಅಲೆವೂರು, ದೇವು ಪೂಜಾರಿ, ಸುಶಾಂತ್,ಸಂದೇಶ್, ಪ್ರಕಾಶ್ ಯತೀಶ್ ಕುಮಾರ್, ಜಲ್ಲೇಶ್ ಶೆಟ್ಟಿ ಉಪಸ್ಥಿತರಿದ್ದರು
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…