ಉಡುಪಿ: ಶಾರದಾ ಕಲ್ಯಾಣ ಮಂಟಪದಿಂದ ಬೀಡಿನಗುಡ್ಡೆ ಸಂಪರ್ಕಿಸುವ ಮುಖ್ಯ ಕಾಂಕ್ರೀಟ್ ರಸ್ತೆಯನ್ನು ಕಾಮಗಾರಿಯ ನೆಪದಲ್ಲಿ ಸುವ್ಯವಸ್ಥೆಯಲ್ಲಿದ್ದ ಉತ್ತಮ ಗುಣಮಟ್ಟದ ಕಾಂಕ್ರೀಟ್ ರಸ್ತೆಯನ್ನು ಅಗೆಯುತ್ತಿರುವ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹತ್ತಿಂಚು ದಪ್ಪ, ಕಬ್ಬಿಣದ ಸರಳು ಅಳವಡಿಸಿ, ಕೆಲವು ಸಮಯದ ಹಿಂದೆ ಹೊಸದಾಗಿ ನಿರ್ಮಾಣ ಮಾಡಿರುವ ಕಾಂಕ್ರೀಟ್ ರಸ್ತೆ ಇದು. ಯಾವುದೇ ಹೊಂಡಗುಂಡಿಗಳಿಲ್ಲದೆ ಸುಸ್ಥಿತಿಯಲ್ಲಿತ್ತು, ಮತ್ತಷ್ಟು ವರ್ಷಗಳು ಬಾಳಿಕೆ ಬರುವ ರಸ್ತೆ ಇದಾಗಿತ್ತು. ಇಂತಹ ರಸ್ತೆಯನ್ನು ವಿನಾಕಾರಣ ಅಗೆದು, ಹೊಸದಾಗಿ ಕಳಪೆ ಗುಣಮಟ್ಟದಲ್ಲಿ ನಿರ್ಮಾಣ ಮಾಡುತ್ತಿರುವುದು ಖಂಡನೀಯ. ಕಳೆದ ಎಂಟು ತಿಂಗಳ ಹಿಂದೆಯಷ್ಟೆ ನಿರ್ಮಾಣ ಮಾಡಿರುವ ರಸ್ತೆಯನ್ನು ಅಗೆದು ಹಾಳುಗೆಡವಲಾಗಿದೆ. ಈ ರೀತಿ ಸಾರ್ವಜನಿಕರ ಹಣವನ್ನು ವ್ಯರ್ಥಗೊಳಿಸುವ ಕುಕೃತ್ಯ ಆಡಳಿತ ವ್ಯವಸ್ಥೆಗಳಿಂದ ನಡೆಯುತ್ತಿದೆ. ಆದಷ್ಟು ಬೇಗ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಸಂಬಂಧಪಟ್ಟ ಇಲಾಖೆಯಲ್ಲಿ ಸಮಾಜಸೇವಕ ನಿತ್ಯಾನಂದ ಒಳಕಾಡು ಆಗ್ರಹಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…