Featured

ಉಡುಪಿ: ಕಾಮಗಾರಿ ನೆಪದಲ್ಲಿ ಉತ್ತಮ ಕಾಂಕ್ರೀಟ್ ರಸ್ತೆ ಅಗೆದು ಹೊಸ ರಸ್ತೆ ನಿರ್ಮಾಣ – ಸಾರ್ವಜನಿಕರ ಆಕ್ರೋಶ – Vishwanews24

ಉಡುಪಿ: ಕಾಮಗಾರಿ ನೆಪದಲ್ಲಿ ಉತ್ತಮ ಕಾಂಕ್ರೀಟ್ ರಸ್ತೆ ಅಗೆದು ಹೊಸ ರಸ್ತೆ ನಿರ್ಮಾಣ, ಸಾರ್ವಜನಿಕರ ಆಕ್ರೋಶ

ಉಡುಪಿ: ಶಾರದಾ ಕಲ್ಯಾಣ ಮಂಟಪದಿಂದ ಬೀಡಿನಗುಡ್ಡೆ ಸಂಪರ್ಕಿಸುವ ಮುಖ್ಯ ಕಾಂಕ್ರೀಟ್ ರಸ್ತೆಯನ್ನು ಕಾಮಗಾರಿಯ ನೆಪದಲ್ಲಿ ಸುವ್ಯವಸ್ಥೆಯಲ್ಲಿದ್ದ ಉತ್ತಮ ಗುಣಮಟ್ಟದ ಕಾಂಕ್ರೀಟ್ ರಸ್ತೆಯನ್ನು ಅಗೆಯುತ್ತಿರುವ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹತ್ತಿಂಚು ದಪ್ಪ, ಕಬ್ಬಿಣದ ಸರಳು ಅಳವಡಿಸಿ, ಕೆಲವು ಸಮಯದ ಹಿಂದೆ ಹೊಸದಾಗಿ ನಿರ್ಮಾಣ ಮಾಡಿರುವ ಕಾಂಕ್ರೀಟ್ ರಸ್ತೆ ಇದು. ಯಾವುದೇ ಹೊಂಡಗುಂಡಿಗಳಿಲ್ಲದೆ ಸುಸ್ಥಿತಿಯಲ್ಲಿತ್ತು, ಮತ್ತಷ್ಟು ವರ್ಷಗಳು ಬಾಳಿಕೆ ಬರುವ ರಸ್ತೆ ಇದಾಗಿತ್ತು. ಇಂತಹ ರಸ್ತೆಯನ್ನು ವಿನಾಕಾರಣ ಅಗೆದು, ಹೊಸದಾಗಿ ಕಳಪೆ ಗುಣಮಟ್ಟದಲ್ಲಿ ನಿರ್ಮಾಣ ಮಾಡುತ್ತಿರುವುದು ಖಂಡನೀಯ. ಕಳೆದ ಎಂಟು ತಿಂಗಳ ಹಿಂದೆಯಷ್ಟೆ ನಿರ್ಮಾಣ ಮಾಡಿರುವ ರಸ್ತೆಯನ್ನು ಅಗೆದು ಹಾಳುಗೆಡವಲಾಗಿದೆ. ಈ ರೀತಿ ಸಾರ್ವಜನಿಕರ ಹಣವನ್ನು ವ್ಯರ್ಥಗೊಳಿಸುವ ಕುಕೃತ್ಯ ಆಡಳಿತ ವ್ಯವಸ್ಥೆಗಳಿಂದ ನಡೆಯುತ್ತಿದೆ. ಆದಷ್ಟು ಬೇಗ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಸಂಬಂಧಪಟ್ಟ ಇಲಾಖೆಯಲ್ಲಿ ಸಮಾಜಸೇವಕ ನಿತ್ಯಾನಂದ ಒಳಕಾಡು ಆಗ್ರಹಿಸಿದ್ದಾರೆ.

 

Vishwa News 24

Recent Posts

ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ – vishwanews24

ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…

1 hour ago

ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ – vishwanews24

ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…

1 hour ago

ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ – vishwanews24

ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ಬೆಂಗಳೂರು: ಚಿಕನ್ ಪ್ರಿಯರೇ ಎಚ್ಚರವಾಗೀರಿ. ರಾಜ್ಯಕ್ಕೆ H5N1 ವೈರಸ್…

3 hours ago

ಕಾಪು : ಕಾರು-ಲಾರಿ ಮಧ್ಯೆ ಭೀಕರ ಅಪಘಾತ  – ಓರ್ವ ಸಾವು, ಇಬ್ಬರು ಗಂಭೀರ – vishwanews24

ಕಾಪು : ಕಾರು-ಲಾರಿ ಮಧ್ಯೆ ಭೀಕರ ಸ್ತೆ  ಅಪಘಾತ  - ಓರ್ವ ಸಾವು, ಇಬ್ಬರು ಗಂಭೀರ ಕಾಪು: ಮಂಗಳೂರು-ಉಡುಪಿ ರಾಷ್ಟ್ರೀಯ…

3 hours ago

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ – vishwanews24

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ…

23 hours ago

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ – vishwanews24

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…

23 hours ago