ಉಡುಪಿ: ಕೊಂಕಣ ರೈಲು ಮಾರ್ಗದ ನಂದಿಕೂರು ರೈಲ್ವೆ ನಿಲ್ದಾಣದಲ್ಲಿ ಕೆಲವು ಕಾಮಗಾರಿಗಳು ನಡೆಯುವ ಹಿನ್ನೆಲೆಯಲ್ಲಿ ಡಿ.14ರವರೆಗೆ ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.
ಡಿ.13ರ ಶುಕ್ರವಾರ ಬೆಳಗ್ಗೆ 7:10ರಿಂದ 9:40ವರೆಗೆ ಎರಡೂವರೆ ಗಂಟೆಗಳ ಕಾಲ ಮಾರ್ಗ ಬಂದ್ ಆಗಲಿದ್ದು, ರೈಲು ನಂ.20646 ಮಂಗಳೂರು ಸೆಂಟ್ರಲ್- ಮಡಗಾಂವ್ ಜಂಕ್ಷನ್ ವಂದೇಭಾರತ್ ಎಕ್ಸ್ಪ್ರೆಸ್ ಹಾಗೂ ರೈಲು ನಂ.10107 ಮಡಗಾಂವ್ ಜಂಕ್ಷನ್- ಮಂಗಳೂರು ಸೆಂಟ್ರಲ್ ಮೆಮು ರೈಲುಗಳ ಸಂಚಾರದಲ್ಲಿ 10 ನಿಮಿಷ ವಿಳಂಬವಾಗಲಿದೆ.
ಡಿ.14ರ ಶನಿವಾರ ಬೆಳಗ್ಗೆ 7:30ರಿಂದ 9:50ರವರೆಗೆ 2ಗಂಟೆ 20 ನಿಮಿಷ ಕಾಲ ರೈಲು ಮಾರ್ಗ ಬಂದ್ ಆಗಲಿದ್ದು, ರೈಲು ನಂ.20646 ಮಂಗಳೂರು ಸೆಂಟ್ರಲ್- ಮಡಗಾಂವ್ ಜಂಕ್ಷನ್ ವಂದೇಭಾರತ್ ಎಕ್ಸ್ಪ್ರೆಸ್ ಹಾಗೂ ರೈಲು ನಂ.10107 ಮಡಗಾಂವ್ ಜಂಕ್ಷನ್- ಮಂಗಳೂರು ಸೆಂಟ್ರಲ್ ಮೆಮು ರೈಲುಗಳ ಸಂಚಾರದಲ್ಲಿ 20 ನಿಮಿಷ ವಿಳಂಬವಾಗಲಿದೆ. ಪ್ರಯಾಣಿಕರು ಕೊಂಕಣ ರೈಲ್ವೆಯೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…