ಉಡುಪಿ: ತಾಲೂಕಿನ ಅಂಬಾಗಿಲು-ಮಣಿಪಾಲ-ಉದ್ಯಾವರ- ಮಲ್ಪೆ ಜಿಲ್ಲಾ ಮುಖ್ಯರಸ್ತೆಯಲ್ಲಿ ಪೆರಂಪಳ್ಳಿಯಲ್ಲಿರುವ ಭಾರತೀಯ ಆಹಾರ ನಿಗಮದ ಬಳಿಯ ಸುಮಾರು 250 ಮೀ. ಉದ್ದದ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿ ನಡೆಸಲು ನಿರ್ಧರಿಸಿರುವುದರಿಂದ ಜಿಲ್ಲಾ ಮುಖ್ಯ ರಸ್ತೆಯಲ್ಲಿ ಅಂಬಾಗಿಲು- ಪೆರಂಪಳ್ಳಿ- ಮಣಿಪಾಲ ರಸ್ತೆಯ ವಾಹನ ಸಂಚಾರವನ್ನು 2026ರ ಫೆಬ್ರವರಿ 21ರವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ಅವರು ಅಧಿಸೂಚನೆ ಹೊರಡಿಸಿದ್ದಾರೆ.
ಈ ಸಂಬಂಧ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ನೀಡಿದ ವರದಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರ ಅಭಿಪ್ರಾಯದಂತೆ ಈ ಮಾರ್ಗದ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸಲು ಆದೇಶದಲ್ಲಿ ಸೂಚಿಸಲಾಗಿದೆ. ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಫೆ.21ರವರೆಗೆ ಅಂಬಾಗಿಲು- ಪೆರಂಪಳ್ಳಿಯಲ್ಲಿರುವ ಭಾರತೀಯ ಆಹಾರ ನಿಗಮ- ಸಗ್ರಿನೊಳೆ- ಇಂದ್ರಾಳಿ- ಮಣಿಪಾಲ ರಸ್ತೆ ಮುಖಾಂತರ ಸಂಚರಿಸುವಂತೆ ಸೂಚಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…