Featured

ಉಡುಪಿ ಕಾರಾಗೃಹ : ಕೌಶಲ್ಯ ತರಬೇತಿ ಮೂಲಕ ಕೈದಿಗಳ ಮನ ಪರಿವರ್ತನೆ -Vishwanews24

ಉಡುಪಿ ಕಾರಾಗೃಹ : ಕೌಶಲ್ಯ ತರಬೇತಿ ಮೂಲಕ ಕೈದಿಗಳ ಮನ ಪರಿವರ್ತನೆ -Vishwanews24

ಕ್ಷಣಿಕ ಕೋಪ ಮತ್ತು ಕ್ಷುಲಕ ಕಾರಣಗಳಿಂದ ಅಪರಾಧ ಮಾಡಿ ವಿಚಾರಣಾಧೀನ ಕೈದಿಗಳಾಗಿ ಜೈಲು ಸೇರುವ ಬಹುತೇಕ ಮಂದಿ , ಯಾವುದೇ ಅಪರಾಧ ಮನೋಭಾವ ಹೊಂದಿರುವುದಿಲ್ಲ, ಇವರ ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯಾಗಿ ತಪ್ಪಿತಸ್ಥ ಎಂದು ಆದೇಶ ಬರುವವರವರೆಗೂ ಅವರು ಎಲ್ಲರಂತೆ ಸಾಮಾನ್ಯರು..

ಅಪರಾಧ ಪ್ರಕರಣಗಲ್ಲಿ ವಿಚಾರಣಾಧೀನ ಕೈದಿಯಾಗಿ ಕಾರಾಗೃಹಕ್ಕೆ ಬರುವ ವ್ಯಕ್ತಿ, ಪ್ರಕರಣದ ವಿಚಾರಣೆ ಮುಗಿಯುವರೆಗೂ ಕಾರಾಗೃಹದಲ್ಲಿ ಇರಬೇಕಿದ್ದು, ಇದರಿಂದ ಮಾನಸಿಕ ಒತ್ತಡಕ್ಕೆ ಒಳಗಾಗುವ ಸಾಧ್ಯತೆಗಳಿದ್ದು ,ಅಲ್ಲದೇ ಬಿಡುಗಡೆಯ ನಂತರ ಜೀವನ ನಿರ್ವಹಣೆಗೆ ಮುಂದೇನು ಎಂಬ ಸಂದಿಗ್ದದಲ್ಲಿ ಸಿಲುಕುತ್ತಾನೆ.

ಕಾರಾಗೃಹ ಸೇರುವ ಮೊದಲು ಯಾವುದೋ ಉದ್ಯೋಗ ಮಾಡುತ್ತಾ ತನ್ನ ತಂದೆ ತಾಯಿ, ಹಂಡತಿ ಮಕ್ಕಳನ್ನು ನೋಡಿಕೊಳ್ಳುತ್ತಿದ್ದು,ಕುಟುಂಬಕ್ಕೆ ಆಧಾರವಾಗಿದ್ದ ವ್ಯಕ್ತಿ ಕೈದಿಯಾದರೆ , ಕುಟುಂಬದ ದಿನನಿತ್ಯದ ನಿರ್ವಹಣೆ ಅತ್ಯಂತ ಕಷ್ಟಕರವಾಗಲಿದ್ದು, ಈ ಚಿಂತೆಯೂ ಸಹ ಕೈದಿಗಳನ್ನು ಕಾಡಲಿದೆ. ಇದಕ್ಕೆಲ್ಲಾ ಪರಿಹಾರ ಇದೆ ಎನ್ನುವಂತೆ ಕೈದಿಗಳು ಕಾರಾಗೃಹದಿಂದಲೇ ಸಂಪಾದನೆ ಮಾಡಿ,ಕುಟುಂಬವನ್ನು ಪೋಷಿಸುವ ಸುವರ್ಣಾವಕಾಶವನ್ನು ಕಾರಾಗೃಹ ಸುದಾರಣಾ ಸೇವೆಗಳ ಇಲಾಖೆ ಒದಗಿಸಿದ್ದು, ಉಡುಪಿಯ ಕಾರಾಗೃಹದಲ್ಲಿ ಶೀಘ್ರದಲ್ಲಿ ಈ ಯೋಜನೆ ಆರಂಭಗೊಳ್ಳಲಿದೆ.

ಉಡುಪಿಯ ಜಿಲ್ಲಾ ಕಾರಾಗೃಹದಲ್ಲಿರುವ ಕೈದಿಗಳಿಗೆ , ಜಿಲ್ಲಾ ಕೌಶಲ್ಯ ಅಭಿವೃದ್ದಿ ಇಲಾಖೆ ಮೂಲಕ ಅಡುಗೆ ತರಬೇತಿ, ಮೋಟಾರ್ ರಿವೈಂಡಿAಗ್ ತರಬೇತಿ,ಕ್ಯಾಂಡಲ್ ಮೇಕಿಂಗ್ ಕುರಿತು ಕರಕುಶಲ ತರಬೇತಿಯನ್ನು ಆಯೋಜಿಸಲು ನಿರ್ಧರಿಸಲಾಗಿದ್ದು, ಕೈದಿಗಳಿಗೆ ಆಸಕ್ತವಿರುವ ಈ 3 ಕ್ಷೇತ್ರಗಳಲ್ಲಿ ಸೂಕ್ತ ತರಬೇತಿ ನೀಡಿ,ಅವರಿಂದಲೇ ವಸ್ತುಗಳ ತಯಾರಿಕೆಯನ್ನು ಆರಂಭಿಸಲಾಗುತ್ತಿದೆ. ಅಲ್ಲದೇ ಪ್ರತಿನಿತ್ಯ ಅವರು ತಯಾರಿಸಿದ ವಸ್ತುಗಳಿಗೆ ಸೂಕ್ತ ದರ ನೀಡಲಿದ್ದು, ಈ ಮೊತ್ತವನ್ನು ನೇರವಾಗಿ ಕೈದಿಗಳ ಹೆಸರಿನಲ್ಲಿ ತೆರೆದ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುವುದು ಇದರಿಂದ ಕೈದಿಗಳು ಪ್ರತಿ ತಿಂಗಳೂ ತಮ್ಮ ಕುಟುಂಬಗಳ ನಿರ್ವಹಣೆಗೆ ಜೈಲಿನಿಂದಲೇ ಆರ್ಥಿಕ ಸಹಾಯ ಮಾಡಲು ಸಾಧ್ಯವಾಗುತ್ತದೆ.

ಜೈಲುಗಳಲ್ಲಿ ಬಂಧಿಯಾಗಿರುವ ಕೈದಿಗಳು ಬಿಡುಗಡೆ ನಂತರ ಸ್ವಾವಲಂಬಿ ಬದುಕು ಸಾಗಿಸಲು ಹಾಗೂ ಅವರಲ್ಲಿ ಆತ್ಮಸ್ಥೈರ್ಯ ತುಂಬಲು, ಈ ಕರಕುಶಲ ತರಬೇತಿ ನೆರವಾಗಲಿದ್ದು, ಕೈದಿಗಳಲ್ಲಿರುವ ವಿವಿಧ ತಾಂತ್ರಿಕ ಕೌಶಲ್ಯಗಳ ಸದ್ಬಳಕೆಯಾಗಲಿದೇ ಅಲ್ಲದೇ ಅವರು ಯಾವುದಾದರೊಂದು ಕಾರ್ಯದಲ್ಲಿ ತೊಡಗುವುದರಿಂದ ಮನಸ್ಸಿನಲ್ಲಿ ಕೆಟ್ಟ ಆಲೋಚನೆಗಳು ಸಹ ಮೂಡುವುದಿಲ್ಲ

ಹಿಂದೆ ಕೈದಿಗಳಿಗೆ ಕಾರಾಗೃಹಗಳಲ್ಲಿ ಟೈಲರಿಂಗ್, ನೇಯ್ಗೆ, ಸೋಪು ಮತ್ತು ಫಿನಾಯಿಲ್ ತಯಾರಿಸುವ ಕರಕುಶಲ ತರಬೇತಿ ನೀಡಲಾಗುತ್ತಿತ್ತು. ಆದರೆ, ಇಂತಹ ತರಬೇತಿಗೆ ಎಲ್ಲ ಕೈದಿಗಳು ಸಮಾನ ಆಸಕ್ತಿ ತೋರುತ್ತಿರಲಿಲ್ಲ. ಆದರೆ ಈಗ ಕೈದಿಗಳು ಬಿಡುಗಡೆ ನಂತರದ ಜೀವನೋಪಾಯ ದೃಷ್ಟಿಯಲ್ಲಿಟ್ಟುಕೊಂಡು ಉದ್ಯೋಗ ಹಾಗೂ ಕರಕುಶಲ ತರಬೇತಿ ನೀಡಲಾಗುತ್ತಿದೆ. ಇದು ಕೈದಿಗಳಲ್ಲಿ ಹೊಸ ಭರವಸೆ ಮೂಡಿಸಿದೆ. ತರಬೇತಿ ಪೂರೈಸುವ ಪ್ರತಿಯೊಬ್ಬ ಕೈದಿಗೆ ತರಬೇತಿ ಸಂಸ್ಥೆಯಿoದ ಪ್ರಮಾಣ ಪತ್ರ ನೀಡಲಾಗುತ್ತದೆ.

ಕೈದಿಗಳು ಬಿಡುಗಡೆಯಾದಾಗ ಅವರ ಜೀವನೋಪಾಯಕ್ಕೆ ನೆರವಾಗಲು ಕಾರಾಗೃಹ ಇಲಾಖೆ ಇಂತಹ ತರಬೇತಿ ನೀಡುವ ಯೋಜನೆ ರೂಪಿಸಿದ್ದು, ಶಿಕ್ಷೆಯ ಅವಧಿಯನ್ನು ಕೈದಿಗಳು ಸದುಪಯೋಗಪಡಿಸಿಕೊಳ್ಳಲೂ ಈ ತರಬೇತಿ ಅನುಕೂಲವಾಗಿದ್ದು, ಕೈದಿಗಳು ಸಮಾಜದ ಮುಖ್ಯವಾಹಿನಿಗೆ ಸೇರಲು ಸುರಕ್ಷಿತ ವಾತಾವರಣವನ್ನು ಜೈಲು ಗಳು ಒದಗಿಸುತ್ತಿವೆ.

ಜೈಲು ಎನ್ನುವುದು ಶಿಕ್ಷೆ ನೀಡುವಲ್ಲ ಕೇಂದ್ರಗಳಲ್ಲ,ಅವು ಮನವರಿವರ್ತನೆಯ ತಾಣಗಳು , ಯಾವುದೋ ಕೆಟ್ಟ ಗಳಿಗೆಯಲ್ಲಿ ವ್ಯಕ್ತಿಯ ಮನಸ್ಸಿನ ನಿಯಂತ್ರಣ ಮೀರಿ ಅಪರಾಧ ಪ್ರಕರಣಗಳು ಜರುಗುತ್ತವೆ. ಕೈದಿಗಳು ಬಿಡುಗಡೆಯ ನಂತರ ತಮ್ಮದೆ ಆದ ಸ್ವಂತ ಉದ್ಯಮ ಆರಂಭಿಸಿ, ಸ್ವಾವಲಬಂಬಿ ಜೀವನ ನಡೆಸಲು ಸಾಧ್ಯವಾಗುವಂತಹ ಕೌಶಲ ತರಗತಿಗಳನ್ನು ಉಡುಪಿ ಕಾರಾಗೃಹದಲ್ಲಿ ಆಯೋಜಿಸಲಾಗುತ್ತಿದೆ. ಅಲ್ಲದೆ ಆರ್ಟ್ ಆಫ್ ಲೀವಿಂಗ್ ಸಹಯೋಗದಲ್ಲಿ ಯೋಗ ತರಬೇತಿಯನ್ನು ನೀಡುತ್ತಿದ್ದು, ಇದರಿಂದ ಕೈದಿಗಳು ಶಾಂತ ಮನಸ್ಥಿತಿ ಹೊಂದಿ, ಅಪರಾಧ ಮನೋಭಾವದಿಂದ ಮುಕ್ತರಾಗಲು ಹಾಗೂ ಸ್ವಸ್ಥ ಮನಸ್ಸು ಮತ್ತು ಆರೋಗ್ಯ ಪಡೆಯಲು ಸಾಧ್ಯವಾಗಲಿದೆ : ಶ್ರೀನಿವಾಸ್, ಅಧೀಕ್ಷಕರು, ಜಿಲ್ಲಾ ಕಾರಾಗೃಹ ಉಡುಪಿ

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

9 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

9 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

9 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

12 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

12 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

13 hours ago