ಉಡುಪಿ: ಕಾರಿನಲ್ಲಿ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ತಾಲೂಕು ಕೊರಂಗ್ರಪಾಡಿ ಗ್ರಾಮದ ಕೆಮ್ತೂರು ರೈಲ್ವೇ ಸೇತುವೆ ಬಳಿ ರೆಡ್ ಹ್ಯಾಂಡ್ ಆಗಿ ಪೊಲೀಸರು ಬಂಧಿಸಿದ್ದು, 20,11,900 ರೂ. ಮೌಲ್ಯದ ಸೊತ್ತನ್ನು ವಶಪಡಿಸಿಕೊಂಡಿದ್ದಾರೆ.
ಕೋಟೆ ಗ್ರಾಮದ ಕಟಪಾಡಿ ಕಾಪು ನಿವಾಸಿ ಅಕ್ಬರ್ ಮುಹಮ್ಮದ್ ಬ್ಯಾರಿ (32) ಹಾಗೂ ಕಾಪು ಉಚ್ಚಿಲ ಬಡಾ ನಿವಾಸಿ ಎನ್.ಎಂ.ಮುಹಮ್ಮದ್ ಮುಕ್ದುಮ್ ಅಲಿ (28) ಬಂಧಿತರು.
ಕಾರ್ಯಾಚರಣೆ ವೇಳೆ 69.127 ಗ್ರಾಂ ತೂಕದ ಎಂಡಿಎಂಎ, ಆರು ಮೊಬೈಲ್ ಫೋನ್, 1,100 ರೂಪಾಯಿ ನಗದು, ಕಾರು, ಲೆನೊವೊ ಲ್ಯಾಪ್ಟಾಪ್ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಪೊಲೀಸರು ಸ್ವಾಧೀನ ಪಡಿಸಿಕೊಂಡಿದ್ದಾರೆ. ಪೊಲೀಸರು ಅಂದಾಜು 20,11,900 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಉಡುಪಿ ಉಪವಿಭಾಗದ ಉಪಪೊಲೀಸ್ ಅಧೀಕ್ಷಕ ಪ್ರಭು ಡಿ.ಟಿ. ಹಾಗೂ ಉಡುಪಿ ನಗರ ಠಾಣೆಯ ಪ್ರಭಾರಿ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಉಡುಪಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಉಪನಿರೀಕ್ಷಕರಾದ ಪುನೀತ್ ಕುಮಾರ್ ಬಿ., ಸುರೇಶ್ ಕೆ., ಅಬ್ದುಲ್ ಬಶೀರ್, ಹೇಮಂತ್, ಆನಂದ್ ಮತ್ತು ಶಿವಕುಮಾರ್, ಅಪರಾಧ ವಿಭಾಗದ ಸಿಬ್ಬಂದಿಗಳಾದ ಪ್ರವೀಣ್ ಕುಮಾರ್, ಪ್ರವೀಣ್, ರಾಘವೇಂದ್ರ, ಮಾಯಪ್ಪ, ಪ್ರಶಾಂತ್ ಭಾಗವಹಿಸಿದ್ದರು.
ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…